ಆಟೋ ಚಾಲಕನ ಪ್ರಾಮಾಣಿಕತೆಗೆ ಬೆಂಗಳೂರು ಪೊಲೀಸರ ಸಲಾಂ!

Published : Dec 13, 2019, 02:05 PM IST
ಆಟೋ ಚಾಲಕನ ಪ್ರಾಮಾಣಿಕತೆಗೆ ಬೆಂಗಳೂರು ಪೊಲೀಸರ ಸಲಾಂ!

ಸಾರಾಂಶ

ಪ್ರಾಮಾಣಿಕತೆ ಮೆರೆದ ಆಟೋ ಡ್ರೈವರ| 1 ಲಕ್ಷ 50 ಸಾವಿರ ಆಟೋದಲ್ಲಿ ಬಿಟ್ಟೋದ ಪ್ರಯಾಣಿಕ| ಹಣ ಮರಳಿಸಿ ಹೀರೋ ಆದ ಡ್ರೈವರ್| ಡ್ರೈವರ್ ಪ್ರಾಮಾಣಿಕತೆಗೆ ಪೊಲೀಸರ ಸಲಾಂ

ಬೆಂಗಳೂರು[ಡಿ.13]: ಆಟೋ ಚಾಲಕರೆಂದರೆ ಹಗಲು ದರೋಡೆ ಮಾಡುತ್ತಾರೆ ಎಂಬ ಅಭಿಪ್ರಾಯ ಅನೇಕರದ್ದು. ಅದರಲ್ಲೂ ಬೆಂಗಳೂರಿನಲ್ಲಿ ಅಮಾಯಕರು ಆಟೋ ಹತ್ತಿದರೆ ಸುಲಿಗೆ ಮಾಡಿಯೇ ಬಿಡುತ್ತಾರೆ ಎಂಬ ಮಾತುಗಳೂ ಇವೆ. ಹೀಗಿರುವಾಗ ಪ್ರಾಮಾಣಿಕತೆ ಮೆರೆದ ಆಟೋ ಡ್ರೈವರ್ ಗೆ ಬೆಂಗಳೂರು ಪೊಲೀಸರು ಸನ್ಮಾನ ಮಾಡಿ ಗೌರವಿಸಿದ್ದಾರೆ. ಅಷ್ಟಕ್ಕೂ ಆಟೋ ಡ್ರೈವರ್ ಮಾಡಿದ್ದೇನು? ಇಲ್ಲಿದೆ ವಿವರ

ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಟ್ವೀಟ್ ಒಂದನ್ನು ಮಾಡುತ್ತಾ ಆಟೋ ಡ್ರೈವರ್ ಪ್ರಾಮಾಣಿಕತೆಯನ್ನು ಬಿಚ್ಚಿಟ್ಟಿದ್ದಾರೆ. ಅಲ್ಲದೇ ಆಟೋ ಡ್ರೈವರ್ ಪ್ರಾಮಾಣಿಕತೆಯನ್ನು ಕೊಂಡಾಡಿದ್ದಾರೆ.

ಹೌದು ಸದ್ಯ ಮಾಲ್ಡೀವ್ಸ್ ನಲ್ಲಿ ವಾಸಿಸುತ್ತಿರುವ, ಭಾರತೀಯ ಎಂ. ಆರ್ ಭಾಸ್ಕರ್, ರಮೇಶ್ ಬಾಬು ನಾಯಕ್ ಎಂಬವರ ಆಟೋದಲ್ಲಿ ಹತ್ತಿದ್ದಾರೆ. ತಾವು ಹೋಗಬೇಕಾದ ಸ್ಥಳ ತಲುಪಿದ ಕೂಡಲೇ ಇಳಿದು ಆಟೋ ಡ್ರೈವರ್ ಗೆ ಪಾವತಿಸಬೇಕಾದ ಹಣ ಕೊಟ್ಟು ತೆರಳಿದ್ದಾರೆ. ಆದರೆ ಕೆಲ ಸಮಯದ ಬಳಿಕ ತನ್ನ ಆಟೋ ಹತ್ತಿದ್ದ ಪ್ರಯಾಣಿಕ ಬ್ಯಾಗ್ ಬಿಟ್ಟು ತೆರಳಿರುವುದು ರಮೇಶ್ ಬಾಬು ಗಮನಕ್ಕೆ ಬಂದಿದೆ. ಬ್ಯಾಗ್ ತೆರೆದು ನೋಡಿದಾಗ ಬರೋಬ್ಬರಿ 1,50,000 ರೂ. ಹಣ ಇರುವುದು ಕಂಡಿದೆ.

ಮುಂದೇನು ಮಾಡುವುದು? ತನ್ನ ಆಟೋದಲ್ಲಿ ಪ್ರಯಾಣಿಸಿದ ವ್ಯಕ್ತಿ ಯಾರೆಂದು ತಿಳಿಯದ ರಮೇಶ್, ತಡ ಮಾಡದೇ ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ತೆರಳಿ ನಡೆದ ವಿಷಯ ತಿಳಿಸಿ ಬ್ಯಾಗ್ ಮರಳಿಸಿದ್ದಾರೆ. ಆಟೋ ಡ್ರೈವರ್ ರಮೇಶ್ ಬಾಬು ನಾಯಕ್ ಪ್ರಾಮಾಣಿಕತೆ ಮೆಚ್ಚಿದ ಶೇಷಾದ್ರಿಪುರಂ ಪೊಲೀಸರು ಕೂಡಲೇ ಅವರಿಗೆ ಸನ್ಮಾನ ಮಾಡಿದ್ದಾರೆ.

ಆಟೋ ಡ್ರೈವರ್ ಎಂದರೆ ಹಗಲು ದರೋಡೆ ನಡೆಸುತ್ತಾರೆಂಬ ಮಾತನ್ನು ಸುಳ್ಳಾಗಿಸಿ, ಪ್ರಾಮಾಣಿಕತೆ ಮೆರೆದ ರಮೇಶ್ ಬಾಬು ನಾಯಕ್ ನಡೆ ಮೆಚ್ಚುವಂತಹದ್ದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ
'ನೀನೇ ಹಿಂದಿಯಲ್ಲಿ ಮಾತಾಡು..' ಕನ್ನಡದಲ್ಲಿ ಮಾತಾಡು ಎಂದ ಗ್ರಾಹಕನಿಗೆ ಹಿಂದಿವಾಲಾನ ದುರಹಂಕಾರ ನೋಡಿ ಹೇಗಿದೆ!