
ಬೆಂಗಳೂರು, (ನವೆಂಬರ್ 3): ಗುಂಡಿ ಮುಚ್ಚಲ ವಿಫಲವಾಗಿರುವ ಹಿನ್ನೆಲೆ ಜಿಬಿಎ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಅಕ್ಟೋಬರ್ 31ರ ಡೆಡ್ಲೈನ್ ಮುಗಿದ ನಂತರವೂ ರಸ್ತೆ ಗುಂಡಿಗಳನ್ನು ಮುಚ್ಚದಿರುವುದನ್ನು ಖಂಡಿಸಿ, ಇಂದು ಸಂಜೆ 4 ಗಂಟೆಗೆ ಎಲ್ಲ ಗುಂಡಿಗಳನ್ನು ಮುಚ್ಚಿ ವರದಿ ಸಲ್ಲಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ.
ಈ 'ಫೈನಲ್ ಡೆಡ್ಲೈನ್' ಪಾಲಿಸದಿದ್ದರೆ ಕಠಿಣ ಕ್ರಮ ಎಂದು ಎಚ್ಚರಿಸಿದ್ದಾರೆ. ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಐದು ನಗರ ಪಾಲಿಕೆ ಆಯುಕ್ತರಿಗೂ, ಇಂಜಿನಿಯರ್ಗಳಿಗೂ ಯಾವುದೇ ನೆಪ ಹೇಳದೆ ಕಾರ್ಯಾನುಷ್ಠಾನಕ್ಕೆ ಇಳಿಯುವಂತೆ ಸೂಚಿಸಿದ್ದಾರೆ.
ಗುಂಡಿ ಮುಚ್ಚಿದ ಕುರಿತು ಸಂಜೆ ವೇಳೆಗೆ ಕಡ್ಡಾಯ ವರದಿ ಸಲ್ಲಿಸಿ ಎಂದು ತಿಳಿಸಿದ್ದಾರೆ. ಸಧ್ಯದಲ್ಲೇ ಸಿಎಂ ಸಿದ್ದರಾಮಯ್ಯ ನಗರದ ರಸ್ತೆಗಳಲ್ಲಿ 'ಸಿಟಿ ರೌಂಡ್ಸ್' ಆರಂಭಿಸಿ, ಕೆಲಸಗಳನ್ನು ಪರಿಶೀಲಿಸಿಲಿಸಲಿದ್ದಾರೆ. ನಗರ ನಿವಾಸಿಗಳ ಜೀವನ ಸುಗಮಗೊಳಿಸಲು ಈ ಕ್ರಮ ಸ್ವಾಗತಾರ್ಹ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ