
ಬೆಂಗಳೂರು (ಮೇ.9): ಬೆಂಗಳೂರು ನಗರ, ಗ್ರಾಮಾಂತರ ಸೇರಿ ವಿವಿಧೆಡೆ ಮುಂದಿನ ಮೂರು ಗಂಟೆಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಸಂಜೆ ಸುರಿದ ಗುಡುಗು ಸಿಡಿಲು ಸಹಿತ ಭಾರಿ ಮಳೆಗೆ ನಗರದ ವಿವಿಧೆಡೆ ಚರಂಡಿ ನೀರು ರಸ್ತೆಗೆ ನುಗ್ಗಿ ಸಂಚಾರ ಅಸ್ತವ್ಯಸ್ತವಾಯಿತು. ಪ್ರಾರಂಭದ ಮಳೆಯ ಅರ್ಭಟಕ್ಕೆ ನಡುಗಿ ಹೋದ ಸಿಲಿಕಾನ್ ಸಿಟಿ ಮಂದಿ. ಒಂದೆರಡು ತಾಸು ಸುರಿದ ಮಳೆಗೆ ಕೆಆರ್ ಮಾರ್ಕೆಟ್, ಅವೆನ್ಯೂ ರಸ್ತೆ ತುಂಬೆಲ್ಲಾ ನೀರೋ ನೀರು. ಮಳೆ ನೀರು ಮೋರಿಗೆ ಹೋಗದೆ ರಸ್ತೆ ಮೇಲೆ ಮೂರು ಅಡಿ ನೀರು ನಿಂತು ಅಧ್ವಾನವಾಯಿತು. ವಾಹನ ಸವಾರರು ನಿಂತ ಮಳೆ ನೀರಿನಿಂದ ತೊಂದರೆ ಅನುಭವಿಸಿದರು. ಚರಂಡಿ ನೀರು ಸಹ ರಸ್ತೆ ನುಗ್ಗಿದ್ದರಿಂದ ಕೊಳಚೆ ನೀರಲ್ಲೇ ಜನರು, ಬೀದಿ ಬದಿ ವ್ಯಾಪಾರಿಗಳು ತೊಂದರೆ ಅನುಭವಿಸುವಂತಾಯಿತು.
ಇಂದು ನಾಳೆ ಮಳೆ ಅಲರ್ಟ್:
ಬೆಂಗಳೂರು ನಗರ, ಗ್ರಾಮಾಂತರ, ಧಾರವಾಡ, ಗದಗ, ವಿಜಯನಗರ, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಗುಡುಗು ಮಿಂಚು ಸಹಿತ
ಭಾರೀ ಮಳೆಯಾಗಲಿದೆ. 40 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದಲ್ಲಿ ಬಿಸಿಗಾಳಿ ಜೊತೆಗೆ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ಕೊಟ್ಟ ಹವಾಮಾನ ಇಲಾಖೆ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ