
ಬೆಂಗಳೂರು : ಬಿಸಿಲ ಬೇಗೆಯಿಂದ ಬೇಯುತ್ತಿದ್ದ ಬೆಂಗಳೂರಿಗೆ ಬುಧವಾರ ಮಳೆರಾಯ ಕೃಪೆ ತೋರಿದ್ದು, ಮಧ್ಯಾಹ್ನ ಅರ್ಧ ಗಂಟೆಗೂ ಹೆಚ್ಚುಕಾಲ ಗಾಳಿ ಸಹಿತ ಮಳೆ ಸುರಿದಿದೆ. ಮುಂದಿನ ಐದಾರು ದಿನಗಳವರೆಗೆ ನಗರದಲ್ಲಿ ಇದೇ ರೀತಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದ ಕೆಲದಿನಗಳಿಂದ ನಗರದಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗುತ್ತಿದ್ದರೂ, ಮಳೆ ಸುರಿಯುತ್ತಿರಲಿಲ್ಲ. ಬುಧವಾರವೂ ನಗರದಲ್ಲಿ ಮಧ್ಯಾಹ್ನ ಒಂದು ಗಂಟೆಯಿಂದಲೇ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತಾದರೂ, ಮಳೆಯ ನಿರೀಕ್ಷೆಯಿರಲಿಲ್ಲ. ಆದರೆ, ಮಧ್ಯಾಹ್ನ 3 ಗಂಟೆಗೆ ಅರ್ಧ ಗಂಟೆಗಿಂತ ಹೆಚ್ಚು ಕಾಲ ಸಾಧಾರಣ ಮಳೆಯಾಯಿತು. ಮಳೆಯೊಂದಿಗೆ ಗಾಳಿ ಬೀಸಿದ ಕಾರಣ ಮಳೆಯ ತೀವ್ರತೆ ಹೆಚ್ಚಿತ್ತು. ರಾತ್ರಿ 9.30 ರಿಂದ ಮುಂದುವರಿಯಿತು.
ಇದನ್ನೂ ಓದಿ: ಆಲಿಕಲ್ಲು ಮಳೆಗೆ ಬಾಳಿತೋಟ ಹಾನಿ
ಮಳೆಯಿಂದಾಗಿ ವಾಹನ ಸವಾರರು ಪರದಾಡಿದರು. ಮಳೆಯಿಂದ ತಪ್ಪಿಸಿಕೊಳ್ಳಲು ವಾಹನ ಸವಾರರು ಅಂಗಡಿ ಮುಂಗಟ್ಟುಗಳು, ಬಸ್ ಶೆಲ್ಟರ್ಗಳ ನೆರವು ಪಡೆದರು. ಮಳೆ ನಿಂತ ನಂತರವೂ ಚರಂಡಿಗಳಲ್ಲಿ ಮಳೆ ನೀರು ಸರಾಗವಾಗಿ ಹರಿಯದ ಪರಿಣಾಮ ರಸ್ತೆಗಳ ಮೇಲೆ ನೀರು ಹರಿದು ವಾಹನ ಚಲಾಯಿಸಲು ಪರದಾಡಿದರು.ಅದರಲ್ಲೂ ಮೈಸೂರು ರಸ್ತೆ, ಕಾವೇರಿ ಜಂಕ್ಷನ್, ಅನಿಲ್ ಕುಂಬ್ಳೆ ವೃತ್ತ ಸೇರಿದಂತೆ ಇನ್ನಿತರ ಕಡೆಗಳಲ್ಲಿ ರಸ್ತೆ ಮೇಲೆ ನೀರು ನಿಂತು ವಾಹನ ಚಾಲನೆಗೆ ಸಮಸ್ಯೆ ಉಂಟಾಗಿತ್ತು. ಕೆಲವೆಡೆ ಸಂಚಾರ ದಟ್ಟಣೆ ಉಂಟಾಯಿತು. ಬೆಂಗಳೂರಿನಲ್ಲಿ ಸರಾಸರಿ 4.3 ಮಿಲಿಮೀಟರ್ ಮಳೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ