
ಬೆಂಗಳೂರು(ಆ.15): ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆಯ ಮುಂದಾಳು ಎಸ್ಡಿಪಿಐ ಮುಖಂಡ ಫೈರೋಜ್ ಪಾಷ, ಕೊರೋನಾ ಹೋರಾಟದಲ್ಲಿ ಪೊಲೀಸ್ ಇಲಾಖೆಯ ಸ್ವಯಂ ಸೇವಕನಾಗಿ ಕೆಲಸ ಮಾಡಿದ್ದ ಕುತೂಹಲಕಾರಿ ಸಂಗತಿ ಬೆಳಕಿಗೆ ಬಂದಿದೆ.
"
ಆರ್.ಟಿ.ನಗರದ ಫೈರೋಜ್, ಎಸ್ಡಿಪಿಐ ಜತೆ ಬಹಿರಂಗವಾಗಿ ಕಾಣಿಸಿಕೊಂಡಿರಲಿಲ್ಲ. ಟಿಪ್ಪು ಆರ್ಮಿ ಹೆಸರಿನ ಸಂಘಟನೆ ಕಟ್ಟಿಕೊಂಡಿದ್ದ ಆತ, ಸಾಮಾಜಿಕ ಕಾರ್ಯಕರ್ತನೆಂದು ಬಿಂಬಿಸಿಕೊಂಡಿದ್ದ. ಈ ಛದ್ಮವೇಷದಲ್ಲೇ ಆತನಿಗೆ ಪೊಲೀಸ್ ಇಲಾಖೆಯ ಸಿವಿಲ್ ಡಿಫೆನ್ಸ್ ಆಗಿ ನೇಮಕಗೊಳ್ಳಲು ಸಹಕಾರಿಯಾಗಿತ್ತು ಎಂದು ತಿಳಿದು ಬಂದಿದೆ.
Exclusive;ಹಠಕ್ಕೆ ಬಿದ್ದ ಉದ್ರಿಕ್ತರಿಂದ ಬೆಂಗಳೂರು ಗಲಭೆ; ನವೀನ್ ಪೋಸ್ಟ್ ನೆಪ ಮಾತ್ರ
ಕೊರೋನಾ ಹೋರಾಟದಲ್ಲಿ ಪೊಲೀಸ್ ಇಲಾಖೆಗೆ ಸಿವಿಲ್ ಢಿಪೆನ್ಸ್ನಾಗಿ ಫೈರೋಜ್ ಕೆಲಸ ಮಾಡಿದ್ದ. ಆತನಿಗೆ ಸಿವಿಲ್ ಡಿಫೆನ್ಸ್ ಗುರುತಿನ ಪತ್ರ ಸಹ ಸಿಕ್ಕಿತು. ಪೊಲೀಸ್ ಸ್ನೇಹಿತನಂತೆ ಗುರುತಿಸಿಕೊಂಡು ಆತ, ರಹಸ್ಯವಾಗಿ ಎಸ್ಡಿಪಿಐ ಸಂಘಟನೆಗೆ ನೀರೆರೆಯುತ್ತಿದ್ದ ಎಂದು ಮೂಲಗಳು ಹೇಳಿವೆ.
ಫೈರೋಜ್ಗೆ ಸೋಂಕು:
ಗಲಭೆ ಪ್ರಕರಣದ ಪ್ರಮುಖ ಆರೋಪಿ ಫೈರೋಜ್ ಪಾಷಗೆ ಸೋಂಕು ದೃಢವಾಗಿದ್ದು, ಆತನನ್ನು ಕೋರಮಂಗಲ ಹತ್ತಿರದ ಕೋವಿಡ್ ಆರೈಕೆ ಕೇಂದ್ರದಲ್ಲಿ ಚಿಕಿತ್ಸೆ ದಾಖಲಿಸಲಾಗಿದೆ. ಸೋಂಕು ಕಾಣಿಸಿಕೊಂಡ ಕಾರಣಕ್ಕೆ ಆತನನ್ನು ವಿಚಾರಣೆ ಅಡ್ಡಿಯಾಯಿತು ಎಂದು ಪೊಲೀಸರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ