ಲಂಚ ಪಡೆದ ಮಾಹಿತಿ ಮುಚ್ಚಿಡಲು ಸಿಸಿಟಿವಿ ನಿರಾಕರಿಸಿದ ಪೊಲೀಸ್ ಕಮಿಷನರ್ ಕಚೇರಿಯ ಮಹಿಳಾ ಅಧಿಕಾರಿಗೆ ಶಾಕ್!

Published : Nov 27, 2025, 03:39 PM IST
Karnataka Information Commission

ಸಾರಾಂಶ

ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿಯ ಆಡಳಿತಾಧಿಕಾರಿಯೊಬ್ಬರು ಲಂಚ ಪ್ರಕರಣಕ್ಕೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿ ನೀಡಲು ವಿಫಲರಾಗಿದ್ದಾರೆ. ಈ ಹಿನ್ನೆಲೆಯಲ್ಲಿ, ಮಾಹಿತಿ ಹಕ್ಕು ಕಾಯ್ದೆ ಉಲ್ಲಂಘನೆಗಾಗಿ ಕರ್ನಾಟಕ ಮಾಹಿತಿ ಆಯೋಗವು ಅವರಿಗೆ ₹10,000 ದಂಡ ವಿಧಿಸಿದೆ.

ಬೆಂಗಳೂರು: ಸಿಸಿಟಿವಿ ದೃಶ್ಯಾವಳಿ ನೀಡದೆ ಬೇಜವಬ್ದಾರಿ ತೋರಿದ ಆಡಳಿತಧಿಕಾರಿಗೆ ದಂಡ ವಿಧಿಸಿರುವ ಘಟನೆ ನಡೆದಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯ ಆಡಳಿತಾಧಿಕಾರಿ ಬಿ.ಎಂ. ಶೋಭಾ ಅವರಿಗೆ ಮಾಹಿತಿ ಹಕ್ಕು ಕಾಯ್ದೆಯ ಅಡಿಯಲ್ಲಿ ₹10,000 ದಂಡ ವಿಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಮಾಹಿತಿ ಹಕ್ಕು ಕಾಯ್ದೆಯನ್ನು ಗಂಭೀರವಾಗಿ ಉಲ್ಲಂಘಿಸಿದ ಪ್ರಕರಣ ಇದಾಗಿದೆ ಎಂದು ಕರ್ನಾಟಕ ಮಾಹಿತಿ ಹಕ್ಕು ಆಯೋಗ ಸ್ಪಷ್ಟಪಡಿಸಿದೆ.

ಎಎಸ್ಐ ಅಧಿಕಾರಿ ಮೂಲಕ ಲಂಚ ಸ್ವೀಕಾರ

ನಗರ ಪೊಲೀಸ್ ಕಮಿಷನರ್ ಕಚೇರಿಯೊಂದರಲ್ಲಿ ಕೆಲಸ ಮಾಡುವ ಸಿಬ್ಬಂದಿಯೊಬ್ಬರು ಎಎಸ್ಐ (ASI) ಯೊಬ್ಬರ ಮೂಲಕ ಬಹಿರಂಗವಾಗಿ ಲಂಚ ಸ್ವೀಕರಿಸಿದ ಆರೋಪ ಇತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಸಲ್ಲಿಸಲಾಗಿತ್ತು. ಈ ಪ್ರಕರಣದ ಮೂಲ ಸತ್ಯಾಂಶ ಗೊತ್ತಾಗಲು ಮತ್ತು ತನಿಖೆಗೆ ಸಹಾಯವಾಗಲು, ದೂರುದಾರ ಉಪಾಧ್ಯಕ್ಷ ಶಿವರಾಮ್ ಅವರು ಕಚೇರಿಯ ಮಾಹಿತಿ ಹಕ್ಕು ಅಧಿಕಾರಿಗೆ ಸಿಸಿಟಿವಿ ವಿಡಿಯೋ ದೃಶ್ಯಾವಳಿ ನೀಡುವಂತೆ ಅಧಿಕೃತ ಮನವಿ ಸಲ್ಲಿಸಿದ್ದರು.

ಆದರೆ ಕಾನೂನುಬದ್ಧವಾಗಿ ನೀಡಬೇಕಿದ್ದ ಮಾಹಿತಿ ನೀಡದೆ, ಆಡಳಿತಾಧಿಕಾರಿ ಬಿ.ಎಂ. ಶೋಭಾ ಅವರು ತಡಮಾಡಿ, ಬೇಜವಾಬ್ದಾರಿ ತೋರಿರುವುದು ಆಯೋಗಕ್ಕೆ ಸ್ಪಷ್ಟವಾಗಿದೆ. ಹಲವು ಬಾರಿ ಮನವಿ ಹಾಗೂ ಸೂಚನೆ ನೀಡಿದರೂ ಕೂಡ ಅಗತ್ಯ ದೃಶ್ಯಾವಳಿ ಹಸ್ತಾಂತರಿಸದ ಕಾರಣ, ಮಾಹಿತಿ ಹಕ್ಕು ಆಯೋಗವು ಅವರನ್ನು ಹೊಣೆಗಾರರನ್ನಾಗಿ ಪರಿಗಣಿಸಿ ದಂಡ ವಿಧಿಸುವ ನಿರ್ಧಾರಕ್ಕೆ ಬಂದಿದೆ.

ಕರ್ನಾಟಕ ಮಾಹಿತಿ ಹಕ್ಕು ಆಯೋಗದಿಂದ ದಂಡ

ಕರ್ನಾಟಕ ಮಾಹಿತಿ ಹಕ್ಕು ಆಯೋಗವು ನೀಡಿರುವ ಆದೇಶದಲ್ಲಿ, ಮಾಹಿತಿ ನೀಡದಿರುವುದು ಕಾಯ್ದೆಯ ನೇರ ಉಲ್ಲಂಘನೆ, ಸಾರ್ವಜನಿಕ ಪ್ರಯೋಜನಕ್ಕೆ ಸಂಬಂಧಿಸಿದ ಮಾಹಿತಿಯನ್ನು ಮುಚ್ಚಿಡಲು ಅಧಿಕಾರಿಗಳಿಗೂ ಹಕ್ಕಿಲ್ಲ, ಮತ್ತು ಕಚೇರಿಯೊಳಗಿನ ಭ್ರಷ್ಟಾಚಾರ ಸಂಬಂಧಿತ ವಿಷಯದಲ್ಲಿ ಪಾರದರ್ಶಕತೆ ಕಡ್ಡಾಯ ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಆಡಳಿತಾಧಿಕಾರಿ ಬಿ.ಎಂ. ಶೋಭಾ ಅವರಿಗೆ ₹10,000 ದಂಡ ವಿಧಿಸಿ ತಕ್ಷಣ ಪಾವತಿಸಲು ಆದೇಶಿಸಲಾಗಿದೆ.

ಬೃಹತ್ ಕಚೇರಿಗಳಲ್ಲೂ ಸಹ, ಮಾಹಿತಿ ಹಕ್ಕು ಕಾಯ್ದೆಯನ್ನು ಪಾಲಿಸುವಲ್ಲಿ ಅಧಿಕಾರಿಗಳಿಂದ ಆಗುವ ನಿರ್ಲಕ್ಷ್ಯಕ್ಕೆ ಇದು ಒಂದು ಪ್ರಮುಖ ಎಚ್ಚರಿಕೆಯ ಸಂದೇಶವಾಗಿದೆ. ಜೊತೆಗೆ ಸರ್ಕಾರಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದರೆ ಏನಾಗಲಿದೆ ಎಂಬುದು ಇದರಿಂದ ತಿಳಿದುಬರಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
'63% ಭ್ರಷ್ಟಾಚಾರ' ಹೇಳಿಕೆ ವಿವಾದ: 'ನನ್ನ ಹೇಳಿಕೆ ತಿರುಚಲಾಗಿದೆ' ಉಪಲೋಕಾಯುಕ್ತ ನ್ಯಾ. ವೀರಪ್ಪ ಸ್ಪಷ್ಟನೆ