Zero Shadow Day: ಇಂದು ಶೂನ್ಯ ನೆರಳು ದಿನ, ಮೋಡ ಇಲ್ಲದಿದ್ದರೆ ಮಂಗಳೂರಲ್ಲಿ ವೀಕ್ಷಣೆ ಸಲೀಸು!

Published : Aug 18, 2023, 09:50 AM IST
Zero Shadow Day: ಇಂದು ಶೂನ್ಯ ನೆರಳು ದಿನ, ಮೋಡ ಇಲ್ಲದಿದ್ದರೆ ಮಂಗಳೂರಲ್ಲಿ ವೀಕ್ಷಣೆ ಸಲೀಸು!

ಸಾರಾಂಶ

ಉತ್ತರಾಯಣದಲ್ಲಿ ಡಿಸೆಂಬರ್‌ 21ರಿಂದ ಜೂನ್‌ 21 ಸೂರ್ಯ ಕರ್ಕಾಟಕ ಸಂಕ್ರಾಂತಿ ವೃತ್ತದಡೆಗೆ ಸಾಗುವಾಗ ಮತ್ತು ದಕ್ಷಿಣಾಯಣದಲ್ಲಿ ಜೂನ್‌ 21ರಿಂದ ಡಿಸೆಂಬರ್‌ 21 ಮಕರ ಸಂಕ್ರಾತಿ ವೃತ್ತದೊಳಗೆ ಸಾಗುವ ಸಮಯದಲ್ಲಿ ಸೂರ್ಯ ನಡು ನೆತ್ತಿಯ ಮೇಲೆ ಹಾದುಹೋಗುವ ಸಂದರ್ಭದಲ್ಲಿ ಭೂಮಿಯ ಮೇಲೆ ಲಂಬವಾಗಿರುವ ವಸ್ತುಗಳು ಶೂನ್ಯ ನೆರಳನ್ನು ತೋರಿಸುವ ಈ ವಿದ್ಯಮಾನ ಸಂಭವಿಸುತ್ತದೆ.

ಮಂಗಳೂರು (ಆ.18) :  ಆ.18ರ ಶುಕ್ರವಾರವನ್ನು ಶೂನ್ಯ ನೆರಳಿನ ದಿನ ಎಂದು ಕರೆಯಲಾಗುತ್ತದೆ. ಬೆಳಗ್ಗೆ ಸೂರ್ಯನ ಬೆಳಕು ವ್ಯಕ್ತಿಯ ಮೇಲೆ ಬಿದ್ದಾಗ, ಆ ನೆರಳು ಉದ್ದವಾಗಿರುತ್ತದೆ. ಮಧ್ಯಾಹ್ನವಾಗುತ್ತಿದ್ದಂತೆ (ಮಧ್ಯಾಹ್ನ 12.35) ನೆರಳು ಶೂನ್ಯವಾಗುತ್ತದೆ. ಪುನಃ ಸಂಜೆ ನೆರಳು ಉದ್ದವಾಗುತ್ತದೆ. ಪ್ರತಿಯೊಬ್ಬರು ಇದನ್ನು ವೀಕ್ಷಿಸಬಹುದು ಇಂಥ ವಿದ್ಯಮಾನ ವರ್ಷದಲ್ಲಿ ಎರಡು ಬಾರಿ ಮಾತ್ರ ಸಂಭವಿಸುತ್ತದೆ (ಮಂಗಳೂರಿನಲ್ಲಿ ಆಗಸ್ಟ್‌ 18 ಮತ್ತು ಏಪ್ರಿಲ್‌ 24ರಂದು) ಈ ಶೂನ್ಯ ನೆರಳಿನ ವಿದ್ಯಮಾನವು ಉತ್ತರ ಅಕ್ಷಾಂಶ 23.5 ಡಿಗ್ರಿ ಮತ್ತು ದಕ್ಷಿಣ ಆಕಾಂಕ್ಷಿ 23.5 ಡಿಗ್ರಿ ಒಳಗಿನ ಸ್ಥಳಗಳಲ್ಲಿ ಅಕ್ಷಾಂಶದ ಮೇಲೆ ಹೊಂದಿಕೊಂಡು ಬೇರೆ ಬೇರೆ ಸ್ಥಳಗಳಲ್ಲಿ ಬೇರೆ ಬೇರೆ ದಿನಗಳಲ್ಲಿ ಸಂಭವಿಸುತ್ತದೆ.

ಉತ್ತರಾಯಣದಲ್ಲಿ ಡಿಸೆಂಬರ್‌ 21ರಿಂದ ಜೂನ್‌ 21 ಸೂರ್ಯ ಕರ್ಕಾಟಕ ಸಂಕ್ರಾಂತಿ ವೃತ್ತದಡೆಗೆ ಸಾಗುವಾಗ ಮತ್ತು ದಕ್ಷಿಣಾಯಣದಲ್ಲಿ ಜೂನ್‌ 21ರಿಂದ ಡಿಸೆಂಬರ್‌ 21 ಮಕರ ಸಂಕ್ರಾತಿ ವೃತ್ತದೊಳಗೆ ಸಾಗುವ ಸಮಯದಲ್ಲಿ ಸೂರ್ಯ ನಡು ನೆತ್ತಿಯ ಮೇಲೆ ಹಾದುಹೋಗುವ ಸಂದರ್ಭದಲ್ಲಿ ಭೂಮಿಯ ಮೇಲೆ ಲಂಬವಾಗಿರುವ ವಸ್ತುಗಳು ಶೂನ್ಯ ನೆರಳನ್ನು ತೋರಿಸುವ ಈ ವಿದ್ಯಮಾನ ಸಂಭವಿಸುತ್ತದೆ.

 

ಉಡುಪಿಯಲ್ಲಿ ಈ ದಿನ ನಮ್ಮ ನೆರಳು ನಮಗೆ ಕಾಣದ ಝೀರೋ ಶ್ಯಾಡೋ ಡೇ!

ಈ ವಿಶೇಷ ವಿದ್ಯಮಾನ ವೀಕ್ಷಿಸಲು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಿಂದ ಕೆಲವು ಪ್ರಾತ್ಯಕ್ಷಿಕೆಗಳನ್ನು ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿದೆ. ಆಸಕ್ತರು ವಿದ್ಯಮಾನದ ವಿವರಣೆಗಳನ್ನು ತಿಳಿಯಲು ಹಾಗೂ ಪ್ರಾತ್ಯಕ್ಷಿಕೆಗಳನ್ನು ವೀಕ್ಷಿಸಲು ಅವಕಾಶವಿದೆ.

ಮೋಡ ಇಲ್ಲದ ವಾತಾವರಣ ಈ ವಿದ್ಯಮಾನ ವೀಕ್ಷಿಸಲು ಅನುಕೂಲಕರ ಶಾಲೆಗಳಲ್ಲಿ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಇದನ್ನು ಸುಲಭವಾಗಿ ವೀಕ್ಷಿಸಬಹುದು ಎಂದು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Zero Shadow Day: ಇಂದು ಮಧ್ಯಾಹ್ನ 12.17 ಕ್ಕೆ ನಿಮ್ಮ ನೆರಳು ನಿಮಗೇ ಕಾಣಿಸಲ್ಲ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮತ್ತು ಬೆಳಗಾವಿ ವಿಭಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ