
ಬೆಂಗಳೂರು (ಸೆ.11): ಸಂಚಾರ ನಿಯಮ ಉಲ್ಲಂಘನೆಗಳ ದಂಡ ಪಾವತಿಗೆ ಪೊಲೀಸ್ ಇಲಾಖೆ ನೀಡಿದ್ದ ಶೇ.50ರ ರಿಯಾಯಿತಿ ಯೋಜನೆಗೆ ಸಾರ್ವಜನಿಕರಿಂದ ಭಾರಿ ಸ್ಪಂದನೆ ವ್ಯಕ್ತವಾಗಿದ್ದು, ಕೇವಲ 21 ದಿನಗಳಲ್ಲಿ ₹80 ಕೋಟಿಗೂ ಹೆಚ್ಚು ದಂಡ ಸಂಗ್ರಹವಾಗಿದೆ. ಈ ರಿಯಾಯಿತಿ ಯೋಜನೆಯು ನಾಳೆ (ಸೆಪ್ಟೆಂಬರ್ 12) ಕೊನೆಗೊಳ್ಳಲಿದೆ.
ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಬಾಕಿ ಉಳಿಸಿಕೊಂಡಿದ್ದ ದಂಡ ಪಾವತಿಸಲು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ, ಆಗಸ್ಟ್ 23 ರಿಂದ ಸೆಪ್ಟೆಂಬರ್ 12ರವರೆಗೆ ಪೊಲೀಸ್ ಇಲಾಖೆ ಶೇ.50ರ ರಿಯಾಯಿತಿ ಘೋಷಿಸಿತ್ತು. ಈ ಅವಕಾಶವನ್ನು ಬಳಸಿಕೊಂಡ ಸಾರ್ವಜನಿಕರು ದಂಡ ಪಾವತಿಗೆ ಮುಗಿಬಿದ್ದಿದ್ದಾರೆ.
ಕಳೆದ 21 ದಿನಗಳಲ್ಲಿ ಬೆಂಗಳೂರು ಸಂಚಾರಿ ಪೊಲೀಸ್ ವ್ಯಾಪ್ತಿಯಲ್ಲಿ ಒಟ್ಟು 28,84,114 ಪ್ರಕರಣಗಳು ಇತ್ಯರ್ಥಗೊಂಡಿವೆ. ಈ ಮೂಲಕ ಇದುವರೆಗೆ ₹80,78,75,350 ರೂಪಾಯಿ ದಂಡ ಸಂಗ್ರಹವಾಗಿದೆ. ಈ ಬೃಹತ್ ಮೊತ್ತವು ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಸಂಖ್ಯೆ ಎಷ್ಟಿದೆ ಎಂಬುದನ್ನು ಬಿಂಬಿಸುತ್ತದೆ.
ದಂಡದ ಮೊತ್ತ ಅರ್ಧದಷ್ಟು ಕಡಿಮೆಗೊಂಡಿದ್ದರಿಂದ ವಾಹನ ಸವಾರರು ತಮ್ಮ ಬಾಕಿ ದಂಡವನ್ನು ಪಾವತಿಸಲು ಆಸಕ್ತಿ ತೋರಿದ್ದಾರೆ. ಈ ರಿಯಾಯಿತಿ ಅವಕಾಶ ನಾಳೆ ಕೊನೆಯ ದಿನವಾಗಿದ್ದು, ದಂಡ ಬಾಕಿ ಉಳಿಸಿಕೊಂಡಿರುವವರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ