ಮಾಲ್‌ಗಳಲ್ಲಿ ಬಟ್ಟೆ ಟ್ರಯಲ್‌ ನಿಷೇಧ!

Published : Jun 08, 2020, 07:10 AM ISTUpdated : Jun 08, 2020, 08:25 AM IST
ಮಾಲ್‌ಗಳಲ್ಲಿ ಬಟ್ಟೆ ಟ್ರಯಲ್‌ ನಿಷೇಧ!

ಸಾರಾಂಶ

ಮಾಲ್‌ಗಳಲ್ಲಿ ಬಟ್ಟೆಟ್ರಯಲ್‌ ನಿಷೇಧ!| ಪ್ರತಿ ತಾಸಿಗೊಮ್ಮೆ ಎಲ್ಲ ಭಾಗಗಳಲ್ಲಿ ಸ್ಯಾನಿಟೈಜ್‌| ಹೆಚ್ಚುವರಿ ಸಿಬ್ಬಂದಿ ನೇಮಕ

ಬೆಂಗಳೂರು(ಜೂ.08): ಕೊರೋನಾ ಸೋಂಕು ಹರಡುತ್ತದೆ ಎಂಬ ಕಾರಣದಿಂದ ಎಲ್ಲ ಶಾಪಿಂಗ್‌ ಮಾಲ್‌ಗಳಲ್ಲಿ ಬಟ್ಟೆಗಳನ್ನು ಟ್ರಯಲ್‌ ಮಾಡುವುದನ್ನು ನಿಷೇಧಿಸಲಾಗಿದೆ.

ಸೋಮವಾರದಿಂದ ನಗರದಲ್ಲಿ ಶಾಪಿಂಗ್‌ ಮಾಲ್‌ಗಳು ಪುನರಾರಂಭವಾಗುತ್ತಿದ್ದು, ಸೋಂಕು ಹರಡದಂತೆ ಸಾಕಷ್ಟುಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಬಟ್ಟೆಗಳ ಅಳತೆ ಪರೀಕ್ಷೆಗಾಗಿ ಟ್ರಯಲ್‌ ಮಾಡುವುದಕ್ಕೆ ಅವಕಾಶ ಇಲ್ಲ ಎಂದು ಬಹುತೇಕ ಮಾಲ್‌ಗಳು ತಿಳಿಸಿವೆ.

ಗ್ರಾಹಕರ ಸುರಕ್ಷತೆ ದೃಷ್ಟಿಯಿಂದ ಮಾಲ್‌ಗಳಲ್ಲಿ ಪ್ರತಿಯೊಬ್ಬರೂ ಬಳಸುವ ಲಿಫ್ಟ್‌, ಎಸ್ಕಲೇಟರ್‌ಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗುತ್ತಿದೆ. 8ರಿಂದ 10 ಜನರ ಸಾಮರ್ಥ್ಯವಿರುವ ಲಿಫ್ಟ್‌ಗಳಲ್ಲಿ ಕೇವಲ ಮೂರು ಮಂದಿ ಮಾತ್ರ ಬಳಸಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಓರಾಯನ್‌ ಮಾಲ್‌ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಕೆ. ಆರ್‌. ಮಾರುಕಟ್ಟೆ ಆರಂಭವಾಗುವುದು ಡೌಟ್‌!

ಮಾಲ್‌ಗಳಲ್ಲಿನ ಎಲ್ಲ ವಿಭಾಗವಾರು ಸ್ವಚ್ಛತಾ ಸಿಬ್ಬಂದಿ ಪ್ರತಿ ತಾಸಿಗೊಮ್ಮೆ ಎಲ್ಲ ಭಾಗಗಳಲ್ಲಿ ಸ್ಯಾನಿಟೈಜ್‌ ಮಾಡಿ ಶುದ್ಧಗೊಳಿಸಲು ಸೂಚನೆ ನೀಡಲಾಗಿದೆ. ಹೆಚ್ಚುವರಿ ಸಿಬ್ಬಂದಿ ನೇಮಿಸಿದ್ದು ಕಾಲ ಕಾಲಕ್ಕೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲು ಸೂಚನೆ ನೀಡಲಾಗಿದೆ ಎಂದು ಗರುಡಾ ಮಾಲ್‌ನ ಸಿಬ್ಬಂದಿ ತಿಳಿಸಿದ್ದಾರೆ.

ಮಾಸ್ಕ್‌ ಧರಿಸಿದವರಿಗೆ ಮಾತ್ರ ಮಾಲ್‌ ಪ್ರವೇಶಕ್ಕೆ ಅವಕಾಶ ನೀಡುತ್ತಿದ್ದು, ಪ್ರವೇಶ ದ್ವಾರದಲ್ಲಿಯೇ ಸ್ಯಾನಿಟೈಸರ್‌ನ್ನು ಸಾರ್ವಜನಿಕರಿಗೆ ನೀಡಲಾಗುತ್ತಿದೆ. ಜೊತೆಗೆ ಪ್ರತಿಯೊಬ್ಬರಿಗೂ ಥರ್ಮಲ್‌ ಸ್ಕಾ್ಯನಿಂಗ್‌ ಕಡ್ಡಾಯ ಮಾಡಲಾಗಿದೆ ಎಂದು ಅವರ ವಿವರಿಸಿದರು.

ಹೊರಗಡೆಯಿಂದ ಬಂದ ಸಿಬ್ಬಂದಿ ಕ್ವಾರಂಟೈನ್‌ಗೆ

ಕಳೆದ ಮೂರು ತಿಂಗಳಿನಿಂದ ಮಾಲ್‌ಗಳು ಪ್ರಾರಂಭವಾಗದ ಹಿನ್ನೆಲೆಯಲ್ಲಿ ಎಲ್ಲ ಸಿಬ್ಬಂದಿ ಊರುಗಳಿಗೆ ತೆರಳಿದ್ದಾರೆ. ಈ ಸಿಬ್ಬಂದಿ ಹೊರ ಭಾಗದಿಂದ ಬೆಂಗಳೂರಿಗೆ ಬರುತ್ತಿದ್ದಂತೆ 15 ದಿನ ಕ್ವಾರಂಟೈನ್‌ ಮಾಡಲು ಸೂಚನೆ ನೀಡಲಾಗಿದೆ. ಮಾಲ್‌ಗಳ ಪ್ರವೇಶ ಮಾಡುತ್ತಿದ್ದಂತೆ ಎಲ್ಲ ವಾಹನಗಳ ಚಕ್ರಗಳನ್ನು ಸ್ಯಾನಿಟೈಜ್‌ ಮಾಡಿ ಪ್ರವೇಶಕ್ಕೆ ಅವಕಾಶ ನೀಡಲಾಗುವುದು ಎಂದು ಫೋರಂ ಮಾಲ್‌ ಸಿಬ್ಬಂಂದಿ ವಿವರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ನವೋದಯ ಪರೀಕ್ಷೆಯಲ್ಲಿ ಅಕ್ರಮ ಆರೋಪ; ಬೀದರ್‌ನಲ್ಲಿ ಬಿಇಓಗೆ ವಿದ್ಯಾರ್ಥಿ ಪೋಷಕರಿಂದ ತರಾಟೆ
ಹೋರಾಟದ ದನಿ ಅಡಗಿಸಲು ಈ ದೂರೇ? ರೈತರು, ಕನ್ನಡ ಪರ ಹೋರಾಟಗಾರರ ವಿರುದ್ಧ ತಲಾ 41 ಪ್ರಕರಣ ದಾಖಲು!