ಬೆಂಗಳೂರಲ್ಲಿ ಭಾರೀ ಮಳೆ ಮುನ್ಸೂಚನೆ; ಮುಂಜಾಗ್ರತಾ ಕ್ರಮವಾಗಿ ನಾಳೆ ಶಾಲೆಗಳಿಗೆ ರಜೆ ಘೋಷಣೆ

Published : Oct 22, 2024, 09:14 PM ISTUpdated : Oct 22, 2024, 09:32 PM IST
 ಬೆಂಗಳೂರಲ್ಲಿ ಭಾರೀ ಮಳೆ ಮುನ್ಸೂಚನೆ; ಮುಂಜಾಗ್ರತಾ ಕ್ರಮವಾಗಿ ನಾಳೆ ಶಾಲೆಗಳಿಗೆ ರಜೆ ಘೋಷಣೆ

ಸಾರಾಂಶ

ಬೆಂಗಳೂರು ನಗರಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಹವಾಮಾನ ಇಲಾಖೆ ಮುನ್ಸೂಚನೆಯಂತೆ ನಾಳೆ ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಾಳೆ(ಅಕ್ಟೋಬರ್ 23) ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಿಸಿ ಜಗದೀಶ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು (ಅ.22): ಬೆಂಗಳೂರು ನಗರಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ನಾಳೆ ಬುಧವಾರ(ಅ.23)ರಂದು ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಎಲ್ಲ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಸರ್ಕಾರಿ, ಖಾಸಗಿ ಶಾಲೆಗಳಿಗೆ  ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಿಸಿ ಜಗದೀಶ್ ಆದೇಶ ಹೊರಡಿಸಿದ್ದಾರೆ.

 ಇಂದು (ಅ.22) ಸಹ ಮಧ್ಯಾಹ್ನದಿಂದ ದಟ್ಟ ಮೋಡ ಆವರಿಸಿ ಗುಡುಗು ಸಿಡಿಲು ಸಮೇತ ಭಾರೀ ಮಳೆಯಾಗುತ್ತಿದ್ದು, ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ. ಇದರಿಂದಾಗಿ ಇಂದು ಶಾಲೆಗೆ ಹೋಗಿದ್ದ ಮಕ್ಕಳು ಮನೆ ವಾಪಸ್ ತೆರಳಲು ಪರದಾಡುವಂತಾಯಿತು. ಶಾಲಾ ಮಕ್ಕಳ ಹೊತ್ತ ಆಟೋಗಳು ರಸ್ತೆಯಲ್ಲಿನ ಮಳೆನೀರಲ್ಲಿ ಮುಂದೆ ಚಲಿಸಲಾದ ಪರದಾಡಿದರು. ನಾಳೆಯೂ ಭಾರೀ ಮಳೆಯಾಗುವ ಸಾಧ್ಯತೆ ಬಗ್ಗೆ  ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆ ಮಕ್ಕಳು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಕಳೆದೊಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ. ಧಾರಾಕಾರ ಮಳೆಯಿಂದ ಕೆಲವಡೆ ಮರ ಧರೆಗುರುಳಿ, ರಸ್ತೆಗಳಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿದೆ. ಇಂದು ಸಹ ಮೆಜೆಸ್ಟಿಕ್, ಕಾರ್ಪೋರೇಷನ್ ಸರ್ಕಲ್, ಶಾಂತಿನಗರ, ಕೆ.ಆರ್. ಮಾರ್ಕೆಟ್, ಹೆಬ್ಬಗೋಡಿ, ಚಂದಾಪುರ, ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ, ಸಂಪಂಗಿರಾಮನಗರ, ಚಾಲುಕ್ಯ ಸರ್ಕಲ್, ವಿಧಾನಸೌಧ, ಹೆಬ್ಬಾಳ, ಜಕ್ಕೂರು, ಬಾಣಸವಾಡಿ, ವಿದ್ಯಾರಣ್ಯಪುರ, ಮಾರತ್ ಹಳ್ಳಿ, ಕೋರಮಂಗಲ, ಬಿಟಿಎಂ ಲೇಔಟ್, ಜಯನಗರ, ಮಲ್ಲೇಶ್ವರ, ಬಸವೇಶ್ವರನಗರ, ರಾಜಾಜಿನಗರ, ಚಾಮರಾಜಪೇಟೆ, ಸದಾಶಿವನಗರ, ರಾಮಮೂರ್ತಿನಗರ, ಕೆ.ಆರ್. ಪುರ, ರಾಜರಾಜೇಶ್ವರಿನಗರ ಮತ್ತಿತರ ಪ್ರದೇಶಗಳಲ್ಲಿ ಹೆಚ್ಚು ಮಳೆ ಸುರಿದಿದೆ. ಎಡಬಿಡದೇ ಧಾರಾಕಾರವಾಗಿ ಸುರಿದ ಭಾರೀ ಮಳೆ ಪರಿಣಾಮ ನಗರದ ರಸ್ತೆಗಳಿಗೆ ನೀರು ನುಗ್ಗಿ ಕೆರೆಯಂತಾಗಿ ವಾಹನ ಸವಾರರು ಪರದಾಡುವಂತಾಯಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ
ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ