BESCOM : ಹಳ್ಳಿ, ಪಟ್ಟಣಗಳಲ್ಲಿ ಸ್ಮಾರ್ಟ್‌ ಮೀಟರ್‌ಗೆ ಕಡ್ಡಾಯಕ್ಕೆ ಬ್ರೇಕ್, ಗ್ರಾಹಕರಿಗೆ ಬಿಗ್ ರಿಲೀಫ್!

Published : Mar 07, 2025, 05:56 AM ISTUpdated : Mar 07, 2025, 06:00 AM IST
BESCOM : ಹಳ್ಳಿ, ಪಟ್ಟಣಗಳಲ್ಲಿ ಸ್ಮಾರ್ಟ್‌ ಮೀಟರ್‌ಗೆ ಕಡ್ಡಾಯಕ್ಕೆ ಬ್ರೇಕ್, ಗ್ರಾಹಕರಿಗೆ ಬಿಗ್ ರಿಲೀಫ್!

ಸಾರಾಂಶ

ಬೆಸ್ಕಾಂ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ಸ್ಮಾರ್ಟ್‌ ಮೀಟರ್‌ ಕಡ್ಡಾಯ ನಿಯಮಕ್ಕೆ ತಡೆ ನೀಡಲಾಗಿದೆ. ತಂತ್ರಾಂಶದ ಸಮಸ್ಯೆ ಹಿನ್ನೆಲೆ, ಸದ್ಯಕ್ಕೆ ಸ್ಮಾರ್ಟ್‌ ಮೀಟರ್‌ ಬೇಡ ಎಂದು ಬೆಸ್ಕಾಂ ಸೂಚನೆ ನೀಡಿದೆ.

ಬೆಂಗಳೂರು (ಮಾ.7): ಬೆಸ್ಕಾಂ ವ್ಯಾಪ್ತಿಯಲ್ಲಿ ಬರುವ 8 ಜಿಲ್ಲೆಗಳ ಗ್ರಾಮೀಣ ಹಾಗೂ ಸಣ್ಣ ಪಟ್ಟಣ ಪ್ರದೇಶಗಳಲ್ಲಿ ಎಲ್‌ಟಿ ಗ್ರಾಹಕರಿಗೆ ಸ್ಮಾರ್ಟ್‌ ಮೀಟರ್‌ ಪಡೆಯಲು ಒತ್ತಾಯ ಮಾಡದಂತೆ ಬೆಸ್ಕಾಂ ಸೂಚನೆ ನೀಡಿದೆ. ಇದರಿಂದಾಗಿ ಶೇ.400ರಿಂದ ಶೇ.800ರಷ್ಟು ಅಧಿಕ ದರ ತೆತ್ತು ಸ್ಮಾರ್ಟ್‌ ಮೀಟರ್‌ ಖರೀದಿಸುವ ಆತಂಕದಿಂದ ಅಲ್ಲಿನ ಜನರು ಪಾರಾಗಿದ್ದಾರೆ. ಮೀಟರ್‌ ದರ ಏರಿಕೆ ಬಗ್ಗೆ ‘ಕನ್ನಡಪ್ರಭ’ ಮಾತ್ರ ಮಾ.5ರಂದು ವರದಿ ಮಾಡಿತ್ತು.

ಸ್ಮಾರ್ಟ್‌ ಮೀಟರ್‌ ತಂತ್ರಾಂಶದ ಜತೆ ‘ನಾನ್‌- ಆರ್‌ಎಪಿಡಿಆರ್‌ಪಿ’ (ಪುನಾರಚಿತ ವೇಗವರ್ಧಿತ ವಿದ್ಯುತ್‌ ಅಭಿವೃದ್ಧಿ ಹಾಗೂ ಸುಧಾರಣಾ ಕಾರ್ಯಕ್ರಮಕ್ಕೆ ಒಳಪಡದ) ಪ್ರದೇಶದ ತಂತ್ರಾಂಶವು ಸಂಯೋಜನೆಗೊಳ್ಳದ ಹಿನ್ನೆಲೆಯಲ್ಲಿ ಗ್ರಾಮೀಣ ಹಾಗೂ ಸಣ್ಣ ಪಟ್ಟಣ ಪ್ರದೇಶಗಳಲ್ಲಿ ಸ್ಮಾರ್ಟ್‌ ಮೀಟರ್‌ ಪಡೆಯಲು ಒತ್ತಾಯಿಸಬಾರದು ಎಂದು ತಿಳಿಸಲಾಗಿದೆ.

ಈ ಬಗ್ಗೆ ಬೆಸ್ಕಾಂ ಗ್ರಾಹಕ ವ್ಯವಹಾರಗಳ ವಿಭಾಗದ ಪ್ರಧಾನ ವ್ಯವಸ್ಥಾಪಕ ಎಂ.ಎಲ್‌. ರಾಜೋಜಿ ರಾವ್ ಅವರು, ಆರ್‌ಎಪಿಡಿಆರ್‌ಪಿ ಅಲ್ಲದ ಪ್ರದೇಶಗಳಲ್ಲಿ ಸ್ಮಾರ್ಟ್‌ ಮೀಟರ್‌ ಸಾಫ್ಟ್‌ವೇರ್ ಇನ್ನೂ ಸಂಯೋಜನೆಗೊಂಡಿಲ್ಲ. ಹೀಗಾಗಿ ಪ್ರಧಾನ ಕಚೇರಿಯಿಂದ ಸೂಚನೆ ಬರುವವರೆಗೆ ಈ ವ್ಯಾಪ್ತಿಯಲ್ಲಿ ಸ್ಮಾರ್ಟ್‌ ಮೀಟರ್‌ ಪಡೆಯುವಂತೆ ಒತ್ತಾಯ ಮಾಡಬೇಡಿ. ಬದಲಿಗೆ ಹಾಲಿ ಇರುವ ವ್ಯವಸ್ಥೆಯಡಿಯೇ ನೋಂದಣಿ ಮಾಡಿ ಸಂಪರ್ಕ ನೀಡಿ ಎಂದು ಕ್ಷೇತ್ರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸುವರ್ಣ ನ್ಯೂಸ್ ವರದಿ ಮಾಡಿತ್ತು: BESCOM: ವಿದ್ಯುತ್‌ ಸ್ಮಾರ್ಟ್‌ ಮೀಟರ್ ದರ ಶೇ.400ರಿಂದ ಶೇ.800ರಷ್ಟು ಏರಿಕೆ ಬಿಗ್ ಶಾಕ್!

ಇದರಿಂದ ತಂತ್ರಾಂಶ ಸಿದ್ಧತೆ ಮಾಡಿಕೊಳ್ಳದೆಯೇ ಫೆ.15 ರಿಂದ ಬೆಸ್ಕಾಂ ವ್ಯಾಪ್ತಿಯಲ್ಲಿ ಸ್ಮಾರ್ಟ್‌ ಮೀಟರ್ ಕಡ್ಡಾಯ ಮಾಡಿರುವುದು ಸಾಬೀತಾದಂತಾಗಿದೆ.
ಏನಿದು ನಾನ್‌-ಆರ್‌ಎಡಿಪಿಆರ್‌ಪಿ?:

ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್‌ ಸರಬರಾಜು ವ್ಯವಸ್ಥೆಯನ್ನು ಕೇಂದ್ರದ ಯೋಜನೆಯಡಿ ಎರಡು ಭಾಗಗಳಾಗಿ ವಿಂಗಡಿಸಲಾಗಿದೆ. ಆರ್‌ಎಡಿಪಿಆರ್‌ಪಿ ಅಡಿ ನಗರ, ಜಿಲ್ಲಾ ಕೇಂದ್ರ ಹಾಗೂ ತಾಲೂಕು ಕೇಂದ್ರ ಸೇರಿ 25 ನಗರ ಹಾಗೂ ಪಟ್ಟಣಗಳ ವ್ಯಾಪ್ತಿಯಲ್ಲಿ ವಿದ್ಯುತ್‌ ಸರಬರಾಜು ಮಾಡಲಾಗುತ್ತಿದೆ. ಈ ಪ್ರದೇಶಗಳ ವಿದ್ಯುತ್‌ ಸರಬರಾಜು, ನಿರ್ವಹಣೆ ಹಾಗೂ ಬಿಲ್ಲಿಂಗ್‌ಗೆ ಪ್ರತ್ಯೇಕ ಸಾಫ್ಟ್‌ವೇರ್‌ ವ್ಯವಸ್ಥೆ ಮಾಡಲಾಗಿದೆ. ಉಳಿದಂತೆ ನಗರ, ಪಟ್ಟಣ ಪ್ರದೇಶ ಅಲ್ಲದ ಸಣ್ಣ ಪಟ್ಟಣ ಹಾಗೂ ಗ್ರಾಮೀಣ ಭಾಗವನ್ನು ನಾನ್‌-ಆರ್‌ಎಡಿಪಿಆರ್‌ಪಿ ಪ್ರದೇಶ ಎಂದು ಪರಿಗಣಿಸಲಾಗುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್