ವಿದ್ಯುತ್ ಟ್ರಾನ್ಸ್ ಫಾಮ್೯ ಏರಿ ಕುಳಿತ ಆಸಾಮಿ; ಬೆಸ್ಕಾಂಗೆ ತಲೆನೋವಾದ ಹುಚ್ಚರು!

Published : Jul 05, 2024, 07:59 PM ISTUpdated : Jul 05, 2024, 08:16 PM IST
ವಿದ್ಯುತ್ ಟ್ರಾನ್ಸ್ ಫಾಮ್೯ ಏರಿ ಕುಳಿತ ಆಸಾಮಿ; ಬೆಸ್ಕಾಂಗೆ ತಲೆನೋವಾದ ಹುಚ್ಚರು!

ಸಾರಾಂಶ

ವಿದ್ಯುತ್ ಟ್ರಾನ್ಸ್‌ಫಾರ್ಮ್ ಏರಿ ವ್ಯಕ್ತಿಯೊಬ್ಬ ಹುಚ್ಚಾಟ ಮಾಡಿದ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಸಾರ್ತುವಳ್ಳಿ-ನೆಲಗೊಂಡ ಹಳ್ಳಿಯಲ್ಲಿ ನಡೆದಿದೆ. ಚಿಕ್ಕನಾಯಕನಹಳ್ಳಿ ತಾಲೂಕು ಲಕ್ಕುವನಹಳ್ಳಿ ಗ್ರಾಮದ  ಬಸವರಾಜ್  ಎಂಬಾತನಿಂದ ಹುಚ್ಚಾಟ.

ತುಮಕೂರು (ಜು.5): ವಿದ್ಯುತ್ ಟ್ರಾನ್ಸ್‌ಫಾರ್ಮ್ ಏರಿ ವ್ಯಕ್ತಿಯೊಬ್ಬ ಹುಚ್ಚಾಟ ಮಾಡಿದ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಸಾರ್ತುವಳ್ಳಿ-ನೆಲಗೊಂಡ ಹಳ್ಳಿಯಲ್ಲಿ ನಡೆದಿದೆ.

ಚಿಕ್ಕನಾಯಕನಹಳ್ಳಿ ತಾಲೂಕು ಲಕ್ಕುವನಹಳ್ಳಿ ಗ್ರಾಮದ  ಬಸವರಾಜ್  ಎಂಬಾತನಿಂದ ಹುಚ್ಚಾಟ. ವಿದ್ಯುತ್ ಟ್ರಾನ್ಸ್‌ಫಾರ್ಮರ್ ಏರಿದ ಬಸವರಾಜನ ಹುಚ್ಚಾಟ ಕಂಡು ಗ್ರಾಮಸ್ಥರು ಗಾಬರಿಯಾದರು. ಕೆಳಗಿಳಿಯುವಂತೆ ಹೇಳಿದರೂ ಇಳಿಯದೇ ಹುಚ್ಚಾಟ ಮುಂದುವರಿಸಿದ ಆಸಾಮಿ. ಬಳಿಕ ಸ್ಥಳೀಯರು ಬೆಸ್ಕಾಂ, ಪೊಲೀಸ್ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಆಗ್ರೋ ಅಂಗಡಿ ಮಾಲೀಕನ‌ ಮಾತು ನಂಬಿ ಕೆಟ್ಟ ರೈತ! ನಕಲಿ ಕ್ರಿಮಿನಾಶಕ ಸಿಂಪಡಿಸಿ ಬೆಳೆ ಕಳೆದುಕೊಂಡ ಅನ್ನದಾತ! 

ಅನಂತರ ಸ್ಥಳಕ್ಕೆ ಬಂದ ಪೊಲೀಸರು. ಪೊಲೀಸರು ಸ್ಥಳಕ್ಕೆ ಬರುವ ಮೊದಲೇ ಕರೆಂಟ್ ಶಾಕ್ ತಗುಲಿಸಿಕೊಂಡಿದ್ದ ಬಸವರಾಜು. ತಕ್ಷಣ ಬೆಸ್ಕಾಂ ಸಿಬ್ಬಂದಿ ಆ ಮಾರ್ಗದ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ್ದರಿಂದ ತಪ್ಪಿದ ಅನಾಹುತ. ಸಣ್ಣಪುಟ್ಟ ಗಾಯಗಳೊಂದಿಗೆ ಬಚಾವ್ ಆದ ಆಸಾಮಿ. ಟ್ರಾನ್ಸ್‌ಫಾರ್ಮರ್ ನಲ್ಲಿ ಸಿಲುಕಿ ನರಳಾಡುತ್ತಿದ್ದ ವ್ಯಕ್ತಿಯನ್ನ ರಕ್ಷಿಸಿದ ಬೆಸ್ಕಾಂ ಸಿಬ್ಬಂದಿ. ಬಳಿಕ 108 ಆಂಬುಲೆನ್ಸ್ ಮೂಲಕ ಚಿಕಿತ್ಸೆಗೆ ಗಾಯಳುವನ್ನ ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಹೊನ್ನವಳ್ಳಿ ಪೊಲೀಸರು ಹಾಗೂ ಬೆಸ್ಕಾಂ ಇಲಾಖೆ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತವೊಂದು ತಪ್ಪಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್