
ಮಂಡ್ಯ,(ಜುಲೈ.24): ಇಂದು ಭೀಮನ ಅಮವಾಸ್ಯೆಯ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಪ್ರಸಿದ್ಧ ಶಕ್ತಿ ದೇಗುಲಗಳಾದ ಕಾಳಿಕಾಂಭ ದೇವಸ್ಥಾನ ಮತ್ತು ಬಿಸಿಲು ಮಾರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ಜರುಗಿದವು. ಮಧ್ಯರಾತ್ರಿಯಿಂದಲೇ ಸಾವಿರಾರು ಭಕ್ತರು ದೇಗುಲಕ್ಕೆ ಹರಿದು ಬಂದು, ವಿಶೇಷ ಅಲಂಕಾರಗೊಂಡ ದೇವಿಯ ದರ್ಶನ ಪಡೆದರು. ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದ ಭಕ್ತರು, ದೋಷ ನಿವಾರಣೆಗಾಗಿ ತಡೆ ಒಡೆಯುವ ಕೈಂಕರ್ಯದಲ್ಲಿ ಭಾಗವಹಿಸಿದರು.
ದೇವಾಲಯದ ಆವರಣದಲ್ಲಿ ನೂಕುನುಗ್ಗಲು ತಡೆಯಲು ಪೊಲೀಸರನ್ನು ನಿಯೋಜಿಸಲಾಗಿತ್ತು. ಸ್ಥಳೀಯರ ಜೊತೆಗೆ ದೂರದ ಊರುಗಳಿಂದ ಆಗಮಿಸಿದ ಭಕ್ತರು, ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.
ಪತ್ನಿಯೊಂದಿಗೆ ಮಂಡ್ಯ ಎಸ್ಪಿ ವಿಶೇಷ ಪೂಜೆ:
ಭೀಮನ ಅಮವಾಸ್ಯೆ ಹಿನ್ನೆಲೆ ಆರತಿ ಉಕ್ಕಡಕ್ಕೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಪತ್ನಿಯೊಂದಿಗೆ ಭೇಟಿ ನೀಡಿ, ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಪೂಜೆಯ ಬಳಿಕ ತಡೆ ಒಡೆಸಿದ ಎಸ್ಪಿ, ಭೀಮನ ಅಮವಾಸ್ಯೆ ದಿನ ಪತ್ನಿಯೊಂದಿಗೆ ಪೂಜೆ ಸಲ್ಲಿಸಿದರೆ ಗಂಡನ ಆಯುಷ್ಯ ವೃದ್ಧಿಯಾಗುವ ಪ್ರತೀತಿ ಇದೆ. ಈ ದಿನದ ವಿಶೇಷತೆಯಿಂದಾಗಿ ದೇಗುಲಗಳು ಭಕ್ತರಿಂದ ಕಿಕ್ಕಿರಿದು ತುಂಬಿದ್ದವು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ