ಕೊರೋನಾ ಆತಂಕದಲ್ಲಿದ್ದ ಡಿಸಿಎಂ ಗೋವಿಂದ ಕಾರಜೋಳಗೆ ಬಿಗ್ ರಿಲೀಫ್..!

Published : Apr 16, 2020, 04:33 PM ISTUpdated : Apr 16, 2020, 04:36 PM IST
ಕೊರೋನಾ ಆತಂಕದಲ್ಲಿದ್ದ ಡಿಸಿಎಂ ಗೋವಿಂದ ಕಾರಜೋಳಗೆ ಬಿಗ್ ರಿಲೀಫ್..!

ಸಾರಾಂಶ

 ಕೊರೋನಾ ಸೋಂಕು ತಗುಲಿರುವ ಆತಂಕದಲ್ಲಿದ್ದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಕೊಂಚ ನಿರಾಳರಾಗಿದ್ದಾರೆ.

ಬಾಗಲಕೋಟೆ, (ಏ.16): ಕೊರೋನಾ ಸೋಂಕು ಆತಂಕದಲ್ಲಿದ್ದ ಡಿಸಿಎಂ ಗೋವಿಂದ್ ಕಾರಜೋಳ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. 

ಗೋವಿಂದ ಕಾರಜೋಳಗೆ ಭದ್ರತೆ ವೇಳೆ ಸೋಂಕಿತ ಪೇದೆ ಇರಲಿಲ್ಲ ಎಂದು ಬಾಗಲಕೋಟೆ ಎಸ್.ಪಿ. ಲೋಕೇಶ್ ಸ್ಪಷ್ಟಪಡಿಸಿದ್ದು,ಜಿಲ್ಲಾ ಪ್ರವಾಸದ ವೇಳೆ ಕೊರೋನಾ ಸೋಂಕಿತ ಪೇದೆ ಗೋವಿಂದ್ ಕಾರಜೊಳ ಅವರ ಸಂಪರ್ಕದಲ್ಲಿ ಇಲ್ಲ ಎಂದು ಖಚಿತಪಡಿಸಿದರು. ಈ ಹಿನ್ನೆಲೆ ಗೋವಿಂದ ಕಾರಜೋಳ ಅವರು ನಿರಾಳರಾಗಿದ್ದಾರೆ.

ಕೊರೋನಾ ಭೀತಿ: ಕ್ವಾರಂಟೈನ್‌ನಲ್ಲಿ ಪೊಲೀಸ್‌ ಪೇದೆ!

ಬಾಗಲಕೋಟೆಯ ಮುಧೋಳ ಪೊಲೀಸ್‌ ಠಾಣೆಯ ಕರ್ತವ್ಯ ನಿರತರಾಗಿದ್ದ ಪೇದೆಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿರುವ ಹಿನ್ನೆಲೆಯಲ್ಲಿ ಮುಧೋಳ ಸಿಪಿಐ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸ್ತಿದ್ದ ಸಿಪಿಐ ಸೇರಿದಂತೆ 8 ಜನರನ್ನು ಬಾಗಲಕೋಟೆ ಲಾಡ್ಜ್ ನಲ್ಲಿ ಕ್ವಾರಂಟೈನ್​ಗೆ ಒಳಪಡಿಸಲಾಗಿದೆ.

ಪೇದೆಗೆ ಕೊರೋನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಆತಂಕ ಶುರುವಾಗಿತ್ತು. ಮುಧೋಳ ಸಿಪಿಐ, ಪಿಎಸ್ಐ ಹಾಗೂ ಇತರೆ ಪೇದೆಗಳು ಮಾರ್ಚ್ 28, 30 ಹಾಗೂ ಏಪ್ರಿಲ್ 4, 7, 11 ರಂದು ಡಿಸಿಎಂ ಕಾರಜೋಳಗೆ ಭದ್ರತೆ ನೀಡಿದ್ದರು.

ಬಾಗಲಕೋಟೆಯಲ್ಲಿ ಕೋವಿಡ್-19 ಸಭೆ ಹಾಗೂ ಮುಧೋಳ ಪ್ರವಾಸ ಸಂದರ್ಭದಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದರು.  ಮಾರ್ಚ್ 28 ರಂದು ಮುಧೋಳ ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕೊರೋನಾ ಜಾಗೃತಿ ವೇಳೆಯೂ ಈ ಪೊಲೀಸರು ಭದ್ರತೆಯಲ್ಲಿದ್ದರು.

ಗೋವಿಂದ ಕಾರಜೋಳಗೆ ಭದ್ರತೆ ಒದಗಿಸಿದ ಹಿನ್ನೆಲೆ ಸೋಂಕಿತ ಪೇದೆ ಸಂಪರ್ಕಕ್ಕೆ ಬಂದಿರುವ ಶಂಕೆ ವ್ಯಕ್ತವಾಗಿತ್ತು. ಹೀಗಾಗಿ ಗೋವಿಂದ ಕಾರಜೋಳಗೆ ಕೊರೋನಾ ಭೀತಿ ಶುರುವಾಗಿತ್ತು. ಆದ್ರೆ, ಇದೀಗ ಎಸ್‌ಪಿ ಅವರು ಹೇಳಿದ ಪ್ರಕಾರ ಆ ಪೊಲೀಸ್ ಪೇದೆ ಡಿಸಿಎಂ ಸಂಪರ್ಕಕ್ಕೆ ಇಲ್ಲ ಎಂದು ಖಚಿತಪಡಿಸಿದ್ದಾರೆ.

ಆದರೂ ಪೇದೆ ಸಂಪರ್ಕದಲ್ಲಿದ್ದ ಸಿಪಿಐ ಸೇರಿದಂತೆ ಇತರೆ ಪೊಲೀಸ್ ಅಧಿಕಾರಿಗಳು ಕಾರಳಜೋಳ ಅವರ ಭದ್ರತೆಯಲ್ಲಿ ಇರಬಹುದು. ಯಾವುದಕ್ಕೂ ಮುಂಜಾಗ್ರತಾವಾಗಿ ಡಿಸಿಎಂ ಸಾಹೇಬ್ರು ಯಾವುದಕ್ಕೂ ತಪಾಸಣೆಗೆ ಒಳಗಾಗುವುದು ಒಳಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಯಕ್ಷಗಾನ ಕಲಾವಿದರ ಅಪಮಾನ: 'ಬಿಳಿಮಲೆಗೆ ಒಂದು ನೋಟಿಸ್ ಕೊಡೋಕೂ ಕಷ್ಟವೇ? ಸುನೀಲ್ ಕುಮಾರ್ ಪ್ರಶ್ನೆ, ಈ ವಿಷಯ ದೊಡ್ಡದು ಮಾಡೋದು ಬೇಡ ಎಂದ ತಂಗಡಗಿ
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!