
ರಾಜ್ಯದಲ್ಲಿ ನಿಯಮ ಉಲ್ಲಂಘನೆ ಮಾಡಿ ಕಟ್ಟಡ ಕಟ್ಟಿದವರಿಗೆ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ನಗರ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪರವಾನಗಿ ಉಲ್ಲಂಘಟನೆ ಮಾಡಿ ಕಟ್ಟಿದ ಕಟ್ಟಡಗಳಿಗೆ ವಿನಾಯಿತಿ ಘೋಷಿಸಿದೆ. ರಾಜ್ಯ ಸರ್ಕಾರ ದಂಡ ಕಟ್ಟಿ ಪರಿಷ್ಕೃತ ನಕ್ಷೆ ಪಡೆಯಲು ಅವಕಾಶ ನೀಡಿದೆ. ಶೇಕಡಾ 15 ರ ಮಿತಿಯೊಳಗೆ ನಿಯಮ ಉಲ್ಲಂಘಟನೆ ಮಾಡಿದ ಕಟ್ಟಡಗಳಿಗೆ ಮಾತ್ರ ಇದು ಅನ್ವಯ ಆಗಲಿದೆ.
ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಂಡ ನಿಗದಿಯಾಗಿದೆ. ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿ, ಕೈಗಾರಿಕೆ ಕಟ್ಟಡಕ್ಕೆ ಪ್ರತಿ ಚ.ಮೀ ಗೆ 1000 ರೂ ದಂಡ. ವಾಣಿಜ್ಯ ಕಟ್ಟಡಕ್ಕೆ ಪ್ರತಿ ಚ.ಮೀ ಗೆ 1500 ರೂ ದಂಡ ನಿಗದಿಯಾಗಿದೆ. ಪುರಸಭೆ ವ್ಯಾಪ್ತಿಯಲ್ಲಿ ವಸತಿ, ಕೈಗಾರಿಕಾ ಕಟ್ಟಡಕ್ಕೆ 1200 - ವಾಣಿಜ್ಯ ಕಟ್ಟಡಕ್ಕೆ 1800 ರೂ ದಂಡ ಇರಲಿದೆ.
ನಗರಪಾಲಿಕೆ ವ್ಯಾಪ್ತಿಯಲ್ಲಿ ವಸತಿ, ಕೈಗಾರಿಕಾ ಕಟ್ಟಡಕ್ಕೆ 1500 - ವಾಣಿಜ್ಯ ಕಟ್ಟಡಕ್ಕೆ 2250 ರೂ ದಂಡ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಸತಿ, ಕೈಗಾರಿಕಾ ಕಟ್ಟಡಕ್ಕೆ 2000 ರೂ ದಂಡ ನಿಗದಿ. ವಾಣಿಜ್ಯ ಕಟ್ಟಡಕ್ಕೆ ಪ್ರತಿ ಚ.ಮೀ ಗೆ 300 ರೂ ದಂಡ ನಿಗದಿಪಡಿಸಿ ಆದೇಶ. ನಿಯಮ ಉಲ್ಲಂಘನೆ ಮಾಡಿ ನಿರ್ಮಾಣ ಮಾಡಲಾದ ಕಾರ್ ಪಾರ್ಕಿಂಗ್ ಗೂ ದಂಡ ನಿಗದಿ. ಪಟ್ಟಣ ಪಂಚಾಯಿತಿ ಮತ್ತು ಪುರಸಭೆ ವ್ಯಾಪ್ತಿಯಲ್ಲಿ 5000 ರೂ ದಂಡ ನಿಗದಿ. ಆದರೆ ನಗರಸಭೆ, ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕಾರ್ ಪಾರ್ಕಿಂಗ್ ಗೆ ದಂಡ ನಿಗದಿಯಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ