
ಚಾಮರಾಜನಗರ(ಡಿ.18): ಚಾಮರಾಜನಗರ ಜಿಲ್ಲೆಯ ಹನೂರಿನ ಮಾರಮ್ಮ ದೇವಸ್ಥಾನದ ಪ್ರಸಾದದಲ್ಲಿ ವಿಷ ಬೆರೆಸಿದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.
ಈ ಕುರಿತು ಪೊಲೀಸರ ಮುಂದೆ ಸತ್ಯ ಬಾಯ್ಬಿಟ್ಟಿರುವ ದೇವಸ್ಥಾನದ ಆಡಳಿತ ಮಂಡಳಿ ಮ್ಯಾನೇಜರ್ ಪತ್ನಿ ಅಂಬಿಕಾ, ಸಾಲೂರು ಮಠದ ಕಿರಿಯ ಸ್ವಾಮಿಜೀಯಾಗಿರುವ ಇಮ್ಮಡಿ ಮಹಾದೇವ್ ಸ್ವಾಮಿ ಆದೇಶದ ಮೇರೆಗೆ ಪ್ರಸಾದದಲ್ಲಿ ವಿಷ ಬೆರೆಸಿದ್ದಾಗಿ ತಪ್ಪೊಪ್ಪಿಕೊಂಡಿದ್ದಾಳೆ.
ಸಾಲೂರು ಮಠದ ಕಿರಿಯ ಸ್ವಾಮಿಜೀಯಾಗಿರುವ ಇಮ್ಮಡಿ ಮಹಾದೇವ್ ಸ್ವಾಮಿ, ಮಾರಮ್ಮಾ ದೇವಸ್ಥಾನದ ಪ್ರಸಾದದಲ್ಲಿ ವಿಷ ಬೆರೆಸುವಂತೆ ತನಗೆ ತಿಳಿಸಿದ್ದರು ಎಂದು ಮ್ಯಾನೇಜರ್ ಮಾದೇಶ್ ಪತ್ನಿ ಅಂಬಿಕಾ ಹೇಳಿಕೆ ನೀಡಿದ್ದಾಳೆ.
ದೇವಸ್ಥಾನದ ಆದಾಯವೆಲ್ಲಾ ತಮ್ಮ ವಶಕ್ಕೆ ಪಡೆದುಕೊಳ್ಳುವ ಹುನ್ನಾರದ ಭಾಗವಾಗಿ ಪ್ರಸಾದದಲ್ಲಿ ವಿಷ ಬೆರೆಸಲಾಗಿತ್ತು ಎಂದು ಅಂಬಿಕಾ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾಳೆ ಎಂದು ಮೂಲಗಳು ತಿಳಿಸಿವೆ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ