ಬೆಂಗ​ಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಬೈಕ್ ಆಟೋಗೆ ಪ್ರವೇಶವಿಲ್ಲ!

Published : Jan 06, 2023, 05:14 PM IST
ಬೆಂಗ​ಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಬೈಕ್ ಆಟೋಗೆ ಪ್ರವೇಶವಿಲ್ಲ!

ಸಾರಾಂಶ

ಬೆಂಗಳೂರು ಮೈಸೂರು ದಶಪಥ ಹೆದ್ದಾರಿ ಫೆಬ್ರವರಿ ಅಂತ್ಯಕ್ಕೆ ಲೋಕಾರ್ಪಣೆಗೊಳ್ಳಲಿದೆ. ವಿಶ್ವದರ್ಜೆಯ ರಸ್ತೆ ಇದೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಆದರೆ ಈ ರಸ್ತೆಯಲ್ಲಿ ಬೈಕ್, ಆಟೋ ಸಂಚಾರಕ್ಕೆ ಅವಕಾಶವಿಲ್ಲ. 

ಬೆಂಗಳೂರು(ಜ.06): ಬೆಂಗ​ಳೂರು-ಮೈಸೂರು ಹೆದ್ದಾ​ರಿಯ ಸಮೀಕ್ಷೆ ನಡೆ​ಸಿದ ಕೇಂದ್ರ ಗೃಹ ಸಚಿವ ನಿತಿನ್ ಗಡ್ಕರಿ ಸಿಹಿ ಸುದ್ದಿ ನೀಡಿದ್ದರು. ಫೆಬ್ರ​ವರಿ ಅಂತ್ಯ​ದಲ್ಲಿ ಹೆದ್ದಾರಿ ಲೋಕಾರ್ಪಣೆ ಮಾಡುವುದಾಗಿ ಘೋಷಿಸಿದ್ದರು. ಇದೀಗ ಬೈಕ್ ಹಾಗೂ ಆಟೋ ಸಂಚಾರಿಗಳಿಗೆ ನಿರಾಸೆ ಎದುರಾಗಿದೆ. ಕಾರಣ ಬೆಂಗಳೂರು ಮೈಸೂರು ದಶಪಥ ಹೆದ್ದಾರಿಯಲ್ಲಿ ಬೈಕ್ ಹಾಗೂ ಆಟೋಗಳಿಗೆ ಪ್ರವೇಶವಿಲ್ಲ ಅನ್ನೋ ಘೋಷಣೆ ಹೊರಬಿದ್ದಿದೆ. ಇದು ಕೇವಲ ಘೋಷಣೆಯಲ್ಲಿ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ನಿಯಮ. ಈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಬೈಕ್ ಹಾಗೂ ಆಟೋ ಪ್ರವೇಶಕ್ಕೆ ಅವಕಾಶವಿರುವುದಿಲ್ಲ. ಇದಕ್ಕೆ ಮುಖ್ಯ ಕಾರಣ ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತ ತಪ್ಪಿಸಲು NHAI ಈ ಕ್ರಮ ಕೈಗೊಂಡಿದೆ. ಸರ್ವೀಸ್ ರಸ್ತೆ ನಿರ್ಮಾಣ ಆಗುವ ವರೆಗೂ ಆಟೋ ಹಾಗೂ ಬೈಕ್ ದಶಪಥ ಹೆದ್ದಾರಿಯಲ್ಲಿ ಸಂಚರಿಸಲು ಅವಕಾಶವಿದೆ. ಆದರೆ ಹೆದ್ದಾರಿ ಅಕ್ಕ ಪಕ್ಕದಲ್ಲಿ ಸರ್ವೀಸ್ ರಸ್ತೆ ನಿರ್ಮಾಣವಾದ ಬಳಿಕ ಬೈಕ್ ಹಾಗೂ ಆಟೋಗಳು ದಶಪಥ ಹೆದ್ದಾರಿ ಪ್ರವೇಶಿಸುವಂತಿಲ್ಲ.

ಬೈಕ್, ಆಟೋ ಮಾತ್ರವಲ್ಲ, ಕೃಷಿ ವಾಹನಗಳಾದ ಟ್ರಾಕ್ಟರ್ ಸೇರಿದಂತೆ ಇತರ ಕೆಲ ವಾಹನಗಳಿಗೂ ನಿರ್ಬಂಧ ವಿಧಿಸಲಾದಿದೆ. ಫೆಬ್ರವರಿ ಅಂತ್ಯಕ್ಕೆ ದಶಪಥ ಹೆದ್ದಾರಿ ಕಾರ್ಯಪೂರ್ಣಗೊಂಡು ರಸ್ತೆ ಲೋಕಾರ್ಪಣೆಗೊಳ್ಳಲಿದೆ. ಇದರ ಬೆನ್ನಲ್ಲೇ ಸರ್ವೀಸ್ ರಸ್ತೆ ಕಾರ್ಯಗಳೂ ಪೂರ್ಣಗೊಳ್ಳಲಿದೆ. 

ಬೆಂಗಳೂರು-ಚೆನ್ನೈ ಹೈವೇ 2024 ಜ.26ಕ್ಕೆ ಲೋಕಾರ್ಪಣೆ: ಸಚಿವ ನಿತಿನ್‌ ಗಡ್ಕರಿ

ಬೆಂಗಳೂರು ಮೈಸೂರು ದಶಪಥ ಹೆದ್ದಾರಿ ಎಕ್ಸ್‌ಪ್ರೆಸ್ ವೇ. ಈ ರಸ್ತೆಯನ್ನು ನಿರ್ದಿಷ್ಠ ವೇಗ, ಸುರಕ್ಷತೆ ಹಾಗೂ ಯಾವುದೇ ಅಡೆ ತಡೆ ಇಲ್ಲದೆ ಪ್ರಯಾಣಿಸಲು ನಿರ್ಮಾಣ ಮಾಡಲಾಗಿದೆ. ಹೀಗಾಗಿ ಕೇಂದ್ರದ ಎಕ್ಸ್‌ಪ್ರೆಸ್ ವೇ ನಿಯಮಗಳು ಅನ್ವಯವಾಗಲಿದೆ. ಎಕ್ಸ್‌ಪ್ರೆಸ್ ವೇ ಒಟ್ಟು ದಶಪಥಗಳನ್ನು ಹೊಂದಿದೆ. ಪ್ರಮುಖ ರಸ್ತೆ 3 ಹಾಗೂ 3 ಲೇನ್ ಹೊಂದಿದೆ. ಇನ್ನು ಎರಡು ಬದಿಯ ಸರ್ವೀಸ್ ರಸ್ತೆಯಲ್ಲಿ ಎರಡೆರಡು ಲೇನ್ ಹೊಂದಿರಲಿದೆ.

ಬೆಂಗಳೂರು ಮೈಸೂರಿ ಹೆದ್ದಾರಿ ಹಲವು ಹಳ್ಳಿ, ಗ್ರಾಮ, ಪಣ್ಣಗಳನ್ನು ಹಾದು ಹೋಗಲಿದೆ. ಇಲ್ಲಿನ ಸ್ಥಳೀಯರು ಬೈಕ್, ಆಟೋ, ಸೇರಿದಂತೆ ಇತರ ಕೃಷಿ ವಾಹನಗಳಲ್ಲಿ ಪ್ರಯಾಣ ಮಾಡುತ್ತಾರೆ. ದಿಢೀರ್ ಈ ವಾಹನಗಳು ಎಕ್ಸ್‌ಪ್ರೆಸ್ ವೇಗೆ ಪ್ರವೇಶ ಪಡೆಯುವುದರಿಂದ ನಿಗದಿತ ವೇಗದಲ್ಲಿ ಸಂಚರಿಸುವ ವಾಹನಗಳು ಅಪಘಾತಕ್ಕೀಡಲಾಗಲಿದೆ. ಇದಕ್ಕಾಗಿ ಸುರಕ್ಷತೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಬೈಕ್, ಆಟೋ, ಕೃಷಿ ವಾಹನ ಸೇರಿದಂತೆ ಇತರ ವಾಹನಗಳಿಗೆ ಸಂಚರಿಸಲು ನಾಲ್ಕು ಪಥದ ಸರ್ವೀಸ್ ರಸ್ತೆ ಇರಲಿದೆ.

ಈ ನಿಯಮ ಬೆಂಗಳೂರು ಹಾಗೂ ಮೈಸೂರು ಎಕ್ಸ್‌ಪ್ರೆಸ್ ವೇಗೆ ಪರಚಯಿಸಿದ ನಿಯಮವಲ್ಲ. ಭಾರತದ ಹೆದ್ದಾರಿ ಪ್ರಾಧಿಕಾರ ಎಕ್ಸ್‌ಪ್ರೆಸ್ ವೇಗೆ ಜಾರಿತಂದಿರುವ ನಿಯಮವಾಗಿದೆ. ದೇಶದಲ್ಲಿ ನಿರ್ಮಾಣವಾಗಿರುವ ಹಲವು ಎಕ್ಸ್‌ಪ್ರೆಸ್ ವೇನಲ್ಲಿ ಇದೇ ನಿಯಮ ಜಾರಿಯಲ್ಲಿದೆ. ಇದು ಮೈಸೂರು ಬೆಂಗಳೂರು ಹೆದ್ದಾರಿಗೂ ಅನ್ವಯವಾಗಲಿದೆ.

17 ಸಾವಿರ ಕೋಟಿ ರೂ. ಮೊತ್ತದ ಬೆಂಗಳೂರು - ಚೆನ್ನೈ ಎಕ್ಸ್‌ಪ್ರೆಸ್‌ವೇ 2024ರ ವೇಳೆಗೆ ಸಿದ್ಧ: ನಿತಿನ್‌ ಗಡ್ಕರಿ

 

 

ನಿನ್ನೆ ಹೆಲಿಕಾಪ್ಟರ್, ಬಸ್ ಮೂಲಕ ಹೆದ್ದಾರಿ ಪರಿಶೀಲನೆ
ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪರಿಶೀಲನೆಗೆ ಆಗಮಿಸಿದ್ದ ಗಡ್ಕರಿ, ಮೊದಲಿಗೆ ಹೆಲಿಕಾಪ್ಟರ್‌ ಮೂಲಕ, ಬಳಿಕ ರಸ್ತೆ ಮಾರ್ಗದ ಮೂಲಕ ಹೆದ್ದಾರಿ ವೀಕ್ಷಣೆ ನಡೆಸಿದ್ದರು. ಮೊದಲಿಗೆ ಹೆಲಿಕಾಪ್ಟರ್‌ನ್ನು ರಾಮನಗರ ಜಿಲ್ಲೆಯ ಜೀಗೇನಹಳ್ಳಿಯ ಮೂಲಕ ಹಾದು ಹೋಗುವ ಹೆದ್ದಾರಿ ಫ್ಲೈ ಓವರ್‌ ಮೇಲೆ ಸುರಕ್ಷಿತವಾಗಿ ಇಳಿಸಲಾಯಿತು.

ಗಡ್ಕರಿ, ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್‌ ಅವರಿದ್ದ ಹೆಲಿಕಾಪ್ಟರ್‌ ಮೊದಲು ಹೆದ್ದಾರಿ ಸ್ಪರ್ಶಿಸಿದರೆ, ಹೆದ್ದಾರಿ ಇಲಾಖೆ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ ಇದ್ದ ಮತ್ತೊಂದು ಹೆಲಿಕ್ಯಾಪ್ಟರ್‌ ಐದು ನಿಮಿಷ ಅಂತರದಲ್ಲಿ ಫ್ಲೇ ಓವರ್‌ ಮೇಲೆ ಬಂದಿಳಿಯಿತು. ಸುಮಾರು 1 ಗಂಟೆ 10 ನಿಮಿ​ಷ​ಗಳ ಕಾಲ ಗಡ್ಕರಿಯವರು ಒಟ್ಟು 118 ಕಿ.ಮೀ ಉದ್ದದ ಬೆಂಗ​ಳೂರು-ಮೈಸೂರು ಹೆದ್ದಾ​ರಿ​ಯ ಸಮೀಕ್ಷೆ ನಡೆಸಿದರು. ಬಳಿಕ, ಬಸ್ಸಿನಲ್ಲಿ ಪ್ರಯಾಣಿಸಿ, ವೀಕ್ಷಣೆ ಮುಂದುವರಿಸಿದರು. ಈ ವೇಳೆ, ಬೆಂಗ​ಳೂರು-ಮೈಸೂರು ಹೆದ್ದಾ​ರಿಯ ಪೂರ್ಣ ಚಿತ್ರ​ಣ​ವುಳ್ಳ ಪ್ರಾಜೆಕ್ಟ್ ಗ್ಯಾಲ​ರಿಗೆ ಭೇಟಿ ನೀಡಿ​ದರು. ಅಲ್ಲಿ ಹೆದ್ದಾರಿ ಯೋಜ​ನೆಯ ​ರೂ​ಪು​ರೇಷೆ ಹಾಗೂ ಕಾಮ​ಗಾರಿ ಪ್ರಗತಿ ಬಗ್ಗೆ ಅಂಕಿ ಅಂಶ​ಗಳ ಸಮೇತ ಯೋಜನಾ ನಿರ್ದೇ​ಶಕ ಶ್ರೀಧರ್‌ ಮತ್ತು ಹಿರಿಯ ಅಧಿ​ಕಾ​ರಿ​ಗಳು ಸಚಿ​ವ​ರಿಗೆ ವಿವ​ರಿ​ಸಿ​ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್