ಶಿವಮೊಗ್ಗ: ಅಪ್ರಾಪ್ತನಿಂದ ಬೈಕ್‌ ಚಾಲನೆ; ತಂದೆಗೆ ₹25 ಸಾವಿರ ದಂಡ ವಿಧಿಸಿದ ಕೋರ್ಟ್

Published : Sep 08, 2023, 11:22 AM IST
ಶಿವಮೊಗ್ಗ: ಅಪ್ರಾಪ್ತನಿಂದ ಬೈಕ್‌ ಚಾಲನೆ; ತಂದೆಗೆ ₹25 ಸಾವಿರ ದಂಡ ವಿಧಿಸಿದ ಕೋರ್ಟ್

ಸಾರಾಂಶ

ಅಪ್ರಾಪ್ತ ಪುತ್ರನಿಗೆ ಮೋಟಾರ್ ಬೈಕ್ ಓಡಿಸಲು ಅವಕಾಶ ನೀಡಿದ ತಂದೆಗೆ ನಗರದ ನ್ಯಾಯಾಲಯ ₹25 ಸಾವಿರ ದಂಡ ವಿಧಿಸಿದ ಘಟನೆ ನಡೆದಿದೆ. 17 ವರ್ಷದ ಬಾಲಕನ ತಂದೆ ಓಂಪ್ರಕಾಶ್ ಅವರಿಗೆ ಜೆಎಂಎಫ್‌ಸಿ ನ್ಯಾಯಾಲಯದ 4ನೇ ಎಸಿಜೆ ನ್ಯಾಯಾಧೀಶರು ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಶಿವಮೊಗ್ಗ (ಸೆ.8): ಅಪ್ರಾಪ್ತ ಪುತ್ರನಿಗೆ ಮೋಟಾರ್ ಬೈಕ್ ಓಡಿಸಲು ಅವಕಾಶ ನೀಡಿದ ತಂದೆಗೆ ನಗರದ ನ್ಯಾಯಾಲಯ ₹25 ಸಾವಿರ ದಂಡ ವಿಧಿಸಿದ ಘಟನೆ ನಡೆದಿದೆ. 17 ವರ್ಷದ ಬಾಲಕನ ತಂದೆ ಓಂಪ್ರಕಾಶ್ ಅವರಿಗೆ ಜೆಎಂಎಫ್‌ಸಿ ನ್ಯಾಯಾಲಯದ 4ನೇ ಎಸಿಜೆ ನ್ಯಾಯಾಧೀಶರು ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

2023ರ ಆ.12ರಂದು ಕೆಎಸ್ ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಪಶ್ಚಿಮ ಠಾಣೆ ಪಿಎಸ್‌ಐ ತಿರುಮಲೇಶ್  ವಾಹನಗಳ ತಪಾಸಣೆ ವೇಳೆ ಅಪ್ರಾಪ್ತ ಬೈಕ್‌ ಚಲಾಯಿಸುತ್ತಿದ್ದ. ಈ ವೇಳೆ ಅಪ್ರಾಪ್ತನೊಬ್ಬ ಬೈಕ್ ಚಾಲನೆ ಮಾಡಿಕೊಂಡು ಬರುತ್ತಿದ್ದ.ಬೈಕ್ ತಡೆದು ಪರಿಶೀಲಿಸಿದಾಗ ಚಾಲನಾ ಪರವಾನಗಿ ಇಲ್ಲದೆ ಬೈಕ್ ಓಡಿಸಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದ.  ಇನ್ನಷ್ಟು ತನಿಖೆ ಮಾಡಿದಾಗ ಈತ ಅಪ್ರಾಪ್ತ ಎಂದು ಗೊತ್ತಾಯಿತು. ಅಪ್ರಾಪ್ತನಿಗೆ ಬೈಕ್ ಓಡಿಸಲು ಅವಕಾಶ ನೀಡಿದ ಆತನ ತಂದೆ ವಿರುದ್ಧ ಪಶ್ಚಿಮ ಸಂಚಾರ ಠಾಣೆಯಲ್ಲಿ ಲಘು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಷಣ ಪಟ್ಟಿ ಸಲ್ಲಿಸಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶರು. ಕಾನೂನಿನ ಪ್ರಕಾರ ಅಪ್ರಾಪ್ತರಿಗೆ ದ್ವಿಚಕ್ರ ವಾಹನ  ಚಾಲನೆ ಮಾಡಲು ಅವಕಾಶ ನೀಡಿರುವು ತಪ್ಪು. ಹೀಗಾಗಿ ವಾಹನ ಮಾಲೀಕರೂ ಆದ ಅಪ್ರಾಪ್ತನ ತಂದೆ ಕ್ಲಾರ್ಕ್ ಪೇಟೆಯ ಓಂ ಪ್ರಕಾಶ್ ಗೆ ದಂಡ ವಿಧಿಸಿದ್ದಾರೆ.

ಅಪ್ರಾಪ್ತನಿಗೆ ಬೈಕ್ ಕೊಟ್ಟಿದ್ದಕ್ಕೆ ಮಾಲೀಕನಿಗೆ ₹20 ಸಾವಿರ ದಂಡ ವಿಧಿಸಿದ ಕೋರ್ಟ್!

ಪಾಲಕರು ತಮ್ಮ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ತಮ್ಮ ವಾಹನ (ಬೈಕ್‌ಗಳನ್ನು) ಚಾಲನೆಗಾಗಿ ನೀಡಿದರೆ ಅಂತಹ ಬಾಲಕರ ತಂದೆ-ತಾಯಿಗೆ 25 ಸಾವಿರ ರು. ದಂಡ ಹಾಗೂ ತಪ್ಪಿದಲ್ಲಿ 3 ವರ್ಷ ಜೈಲು ಶಿಕ್ಷೆಯಾಗುತ್ತದೆ. ಪೋಷಕರು ಈ ಬಗಗೆ ತಿಳಿದು ಅಪ್ರಾಪ್ತರ ಕೈಗೆ ಬೈಕ್ ಚಾಲನೆ ಅವಕಾಶ ನೀಡದಂತೆ ಎಚ್ಚರ ವಹಿಸಬೇಕು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ
'ನೀನೇ ಹಿಂದಿಯಲ್ಲಿ ಮಾತಾಡು..' ಕನ್ನಡದಲ್ಲಿ ಮಾತಾಡು ಎಂದ ಗ್ರಾಹಕನಿಗೆ ಹಿಂದಿವಾಲಾನ ದುರಹಂಕಾರ ನೋಡಿ ಹೇಗಿದೆ!