
ಬೆಂಗಳೂರು, (ಏ.27): ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿಯ ಬದಲಿಗೆ ಸಹಿ ಮಾಡಲು ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಕೊರೋನಾ ವೈರಸ್ನ ವ್ಯಾಪಕವಾಗಿ ಹರಡುತ್ತಿರುವ ಕಾರಣ ಬಯೋಮೆಟ್ರಿಕ್ ಹಾಜರಾತಿ ಬದಲಿಗೆ ನೌಕರರು ಸಹಿ ಮಾಡಲು ಬಿ.ಎಸ್.ರವಿಕುಮಾರ್ ಸರ್ಕಾರದ ಉಪ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
'ಈ ಇಲಾಖೆಗಳ ಶೇ.100ರಷ್ಟು ಅಧಿಕಾರಿ, ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಬೇಕು'
ಯಾಕಂದ್ರೆ ಕಚೇರಿಯ ಸಿಬ್ಬಂದಿಗಳು ಒಂದೇ ಬಯೋಮೆಟ್ರಿಕ್ನಲ್ಲಿ ಕೈ ಬೆರಳು ಇಡುವುದರಿಂದ ಸೋಂಕು ಹರಡುವ ಸಾಧ್ಯತೆಗಳಿವೆ. ಇದರಿಂದ ಮುಂಜಾಗ್ರತಾ ಕ್ರಮವಾಗಿ ಬಯೋಮೆಟ್ರಿಕ್ ಸ್ಥಗಿತಗೊಳಿಸಲಾಗಿದೆ.
ಇನ್ನು ಕಳೆದ ಮೊದಲ ಅಲೆ ಸಂದರ್ಭದಲ್ಲಿ ಇದೇ ಕ್ರಮವನ್ನು ಕೈಗೊಳ್ಳಲಾಗಿತ್ತು. ಇದು ಸರ್ಕಾರಿ ಇಲಾಖೆಗಳಿಗೆ ಮಾತ್ರವಲ್ಲ ಖಾಸಗಿ ಕಂಪನಿಗಳು ಅನ್ವಯವಾಗುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ