ಬಿಟ್ಕಾಯಿನ್‌ ಪ್ರಕರಣ: ಡಿವೈಎಸ್ಪಿ ಬಂಧಿಸದಂತೆ ಸಿಐಡಿಗೆ ಹೈಕೋರ್ಟ್‌ ಸೂಚನೆ

Published : Jun 07, 2024, 07:28 AM IST
ಬಿಟ್ಕಾಯಿನ್‌ ಪ್ರಕರಣ: ಡಿವೈಎಸ್ಪಿ ಬಂಧಿಸದಂತೆ ಸಿಐಡಿಗೆ ಹೈಕೋರ್ಟ್‌ ಸೂಚನೆ

ಸಾರಾಂಶ

ಬಿಟ್ ಕಾಯಿನ್ ಪ್ರಕರಣದಲ್ಲಿ ಆಂತರಿಕ ಭದ್ರತಾ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್‌ಪಿ) ಶ್ರೀಧರ್ ಕೆ. ಪೂಜಾರ್‌ ಅವರನ್ನು ಜೂ.12ರವರೆಗೆ ಬಂಧಿಸದಂತೆ ಸಿಐಡಿ ಪೊಲೀಸರಿಗೆ ಹೈಕೋರ್ಟ್‌ ಗುರುವಾರ ಸೂಚಿಸಿದೆ. 

ಬೆಂಗಳೂರು (ಜೂ.07): ಬಿಟ್ ಕಾಯಿನ್ ಪ್ರಕರಣದಲ್ಲಿ ಆಂತರಿಕ ಭದ್ರತಾ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್‌ಪಿ) ಶ್ರೀಧರ್ ಕೆ. ಪೂಜಾರ್‌ ಅವರನ್ನು ಜೂ.12ರವರೆಗೆ ಬಂಧಿಸದಂತೆ ಸಿಐಡಿ ಪೊಲೀಸರಿಗೆ ಹೈಕೋರ್ಟ್‌ ಗುರುವಾರ ಸೂಚಿಸಿದೆ. ಪ್ರಕರಣ ಸಂಬಂಧ ಬಂಧನ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಶ್ರೀಧರ್‌ ಪೂಜಾರ್‌ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ಅವರ ಪೀಠ ಈ ಆದೇಶ ಮಾಡಿದೆ. 

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಎಂ.ಅರುಣ್‌ ಶ್ಯಾಮ್‌ ಹಾಜರಾಗಿ, ಬಿಟ್‌ ಕಾಯಿನ್‌ ಹಗರಣದ ಪ್ರಮುಖ ಆರೋಪಿ ಶ್ರೀಕಿಯು ತನ್ನ ಸ್ನೇಹಿತರನ್ನು ಸಂಧಿಸಲು ಅವಕಾಶ ಮಾಡಿಕೊಟ್ಟಿರುವುದು ಮತ್ತು ಶ್ರೀಕಿ ಹಾಗೂ ಇತರರನ್ನು ಅಕ್ರಮವಾಗಿ ಬಂಧನದಲ್ಲಿಟ್ಟುಕೊಂಡಿರುವ ಆರೋಪ ಪೂಜಾರ್ ಮೇಲಿದೆ. ಈ ಹಿಂದೆ ಹೈಕೋರ್ಟ್‌ ಸೂಚನೆಯಂತೆ ಮೂರು ಬಾರಿ ತನಿಖಾಧಿಕಾರಿಯ ಮುಂದೆ ಪೂಜಾರ್ ಹಾಜರಾಗಿದ್ದಾರೆ. ಈಗಲೂ ಪೂಜಾರ್‌ ತನಿಖಾಧಿಕಾರಿಯ ಮುಂದೆ ಹಾಜರಾಗಲು ಸಿದ್ಧರಿದ್ದಾರೆ. ಅರ್ಜಿದಾರರು ಡಿವೈಎಸ್‌ಪಿ ಶ್ರೇಣಿಯ ಅಧಿಕಾರಿಯಾಗಿದ್ದು, ಬಂಧನ ಮಾಡಿದರೆ ಅವರ ಇಡೀ ವೃತ್ತಿ ಬದುಕು ನಾಶವಾಗಲಿದೆ. ಅವರ ಹಿತಾಸಕ್ತಿ ಕಾಪಾಡಬೇಕಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಚನ್ನಪಟ್ಟಣಕ್ಕೆ ಡಿಕೆಸು ನಿಲ್ಲಿಸುವ ಚಿಂತನೆಯಿಲ್ಲ: ಡಿ.ಕೆ.ಶಿವಕುಮಾರ್‌

ಸರ್ಕಾರ ಪರ ಎಸ್‌ಪಿಪಿ ಬಿ.ಎನ್‌. ಜಗದೀಶ್‌ ಅವರು, ಶ್ರೀಕಿ ಭಾಗಿಯಾಗಿರುವ ಬಿಟ್‌ ಕಾಯಿನ್‌ ಹಗರಣ ಗಂಭೀರ ಪ್ರಕರಣವಾಗಿದೆ. ಸಾವಿರಾರು ಕೋಟಿ ರುಪಾಯಿಯ ಹಗರಣ ಇದಾಗಿದೆ. ಆತ ಕೆಲ ಲೈವ್‌ ಸರ್ವರ್‌ಗಳನ್ನು ಹ್ಯಾಕ್ ಮಾಡಿ, ಬಿಟ್‌ಕಾಯಿನ್‌ಗಳನ್ನು ಕದ್ದಿದ್ದಾನೆ. ಆತನನ್ನು ಅಕ್ರಮವಾಗಿ ಬಂಧನದಲ್ಲಿಟ್ಟುಕೊಂಡು, ಹ್ಯಾಕಿಂಗ್, ಬಿಟ್ ಕಾಯಿನ್‌ಗಳ ವರ್ಗಾವಣೆ ಮತ್ತು ಪಾಸ್‌ವರ್ಡ್‌ ಬದಲಾವಣೆ ಮಾಡಿದ ಆರೋಪ ಪೂಜಾರ್ ಮೇಲಿದೆ. ಅವರು ತನಿಖಾಧಿಕಾರಿಯ ಮುಂದೆ ಹಾಜರಾಗಿ, ಇಡೀ ತನಿಖೆಯನ್ನು ದಾರಿ ತಪ್ಪಿಸಿದ್ದಾರೆ. ಅಂತಹವರಿಗೆ ಮಧ್ಯಂತರ ರಕ್ಷಣೆ ನೀಡುವುದು ಸೂಕ್ತವಲ್ಲ ಎಂದು ಆಕ್ಷೇಪಿಸಿದರು. ವಾದ-ಪ್ರತಿವಾದ ಆಲಿಸಿದ ಪೀಠ, ವಿಚಾರಣೆಯನ್ನು ಜೂ.12ಕ್ಕೆ ಮುಂದೂಡಿ, ಅಲ್ಲಿಯವರೆಗೆ ಅರ್ಜಿದಾರರನ್ನು ಬಂಧಿಸಬಾರದು ಎಂದು ಸೂಚಿಸಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಉ.ಕ. ಚರ್ಚೆ ವೇಳೆ ವಿಪಕ್ಷಕ್ಕೆ ತಿರುಗೇಟು: ಸಿಎಲ್‌ಪಿ ನಿರ್ಧಾರ
ಅಧಿವೇಶನದಲ್ಲಿ ಉತ್ತರ ಕರ್ನಾಟಕ ಬಗ್ಗೆ ಚರ್ಚೆ ಶುರು