ಛಲವಾದಿ ನಾರಾಯಣಸ್ವಾಮಿ ಮೇಲ್ಮನೆ ಪ್ರತಿಪಕ್ಷದ ನಾಯಕರಾಗಿ ನೇಮಕ!

Published : Jul 23, 2024, 06:56 AM ISTUpdated : Jul 23, 2024, 09:50 AM IST
ಛಲವಾದಿ ನಾರಾಯಣಸ್ವಾಮಿ ಮೇಲ್ಮನೆ ಪ್ರತಿಪಕ್ಷದ ನಾಯಕರಾಗಿ ನೇಮಕ!

ಸಾರಾಂಶ

ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕರನ್ನಾಗಿ ಛಲವಾದಿ ನಾರಾಯಣಸ್ವಾಮಿ ಅವರನ್ನು ನೇಮಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಆದೇಶದ ಮೇರೆಗೆ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್‌ವಾಲ್  ಸೋಮವಾರ ಅಧಿಕೃತವಾಗಿ ಪ್ರಕಟಿಸಿದ್ದಾರೆ.

ಬೆಂಗಳೂರು (ಜು.23): ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕರನ್ನಾಗಿ ಛಲವಾದಿ ನಾರಾಯಣಸ್ವಾಮಿ ಅವರನ್ನು ನೇಮಿಸಲಾಗಿದೆ.ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಆದೇಶದ ಮೇರೆಗೆ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್‌ವಾಲ್ ಅವರು ಛಲವಾದಿ ನಾರಾಯಣಸ್ವಾಮಿ ಅವರ ನೇಮಕವನ್ನು ಸೋಮವಾರ ಅಧಿಕೃತವಾಗಿ ಪ್ರಕಟಿಸಿದ್ದಾರೆ.

ಪ್ರತಿಪಕ್ಷದ ನಾಯಕನ ರೇಸ್‌ನಲ್ಲಿ ಎನ್.ರವಿಕುಮಾರ್‌, ಸಿ.ಟಿ.ರವಿ ಹಾಗೂ ಛಲವಾದಿ ನಾರಾಯಣಸ್ವಾಮಿ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬಂದಿದ್ದವು. ಆದರೆ, ಪಕ್ಷದ ರಾಜ್ಯಾಧ್ಯಕ್ಷ ಸ್ಥಾನವನ್ನು ಲಿಂಗಾಯತ ಸಮುದಾಯಕ್ಕೆ ಮತ್ತು ವಿಧಾನಸಭೆಯ ಪ್ರತಿಪಕ್ಷದ ನಾಯಕನ ಸ್ಥಾನವನ್ನು ಒಕ್ಕಲಿಗ ಸಮುದಾಯಕ್ಕೆ ನೀಡಿರುವುದರಿಂದ ಪರಿಷತ್ತಿನ ಪ್ರತಿಪಕ್ಷದ ನಾಯಕನ ಸ್ಥಾನವನ್ನು ಹಿಂದುಳಿದ ವರ್ಗಗಳಿಗೆ, ಅದರಲ್ಲೂ ದಲಿತ ವರ್ಗಕ್ಕೆ ನೀಡಲು ಬಿಜೆಪಿ ವರಿಷ್ಠರು ನಿರ್ಧರಿಸಿ ಛಲವಾದಿ ನಾರಾಯಣಸ್ವಾಮಿ ಅವರನ್ನು ನೇಮಿಸಿದ್ದಾರೆ.

ನೀಟ್‌, 'ಒಂದು ದೇಶ ಒಂದು ಚುನಾವಣೆ’, ಕ್ಷೇತ್ರ ವಿಂಗಡಣೆ ವಿರದ್ಧ ನಿರ್ಣಯಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ

ಈ ಸಂಬಂಧ ಕರ್ನಾಟಕದ ಎಲ್ಲ ಕಾರ್ಯಕರ್ತರು, ಎಲ್ಲ ಶಾಸಕರು, ಎಲ್ಲ ಮೇಲ್ಮನೆ ಸದಸ್ಯರು, ಎಲ್ಲ ಕೇಂದ್ರ ಸಚಿವರು, ಪಕ್ಷದ ಮುಖಂಡರ ಪರವಾಗಿ ಛಲವಾದಿ ಅವರನ್ನು ಅಗರ್‌ವಾಲ್ ಅವರು ಅಭಿನಂದಿಸಿದ್ದಾರೆ. ಮೇಲ್ಮನೆಯ ನೂತನ ವಿಪಕ್ಷ ನಾಯಕರಾಗಿ ಆಯ್ಕೆಯಾದ ಛಲವಾದಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ(BY Vijayendra) ಮತ್ತು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್(R ashok) ಅವರು ಅಭಿನಂದಿಸಿದ್ದು, ಶುಭ ಹಾರೈಸಿದ್ದಾರೆ. ಅವರ ನೇತೃತ್ವದಲ್ಲಿ ಮೇಲ್ಮನೆಯಲ್ಲಿ ಪಕ್ಷವು ಅತ್ಯಂತ ಸಕ್ರಿಯವಾಗಿ ಕೆಲಸ ಮಾಡುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್