ಎಚ್.ಎಸ್.ದೊರೆಸ್ವಾಮಿ ನಿಧನ: ಹಲವು ಗಣ್ಯರ ಸಂತಾಪ

Published : May 26, 2021, 03:13 PM ISTUpdated : May 26, 2021, 03:35 PM IST
ಎಚ್.ಎಸ್.ದೊರೆಸ್ವಾಮಿ ನಿಧನ: ಹಲವು ಗಣ್ಯರ ಸಂತಾಪ

ಸಾರಾಂಶ

* ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ನಿಧನ * ಹಲವು ರಾಜಕೀಯ ನಾಯಕರಿಂದ ಸಂತಾಪ * ಸಾಮಾಜಿಕ ಜಾಲತಾಣಗಳ ಮೂಲಕ ಕಂಬನಿ ಮಿಡಿದ ರಾಜಕೀಯ ಮಂದಿ

ಬೆಂಗಳೂರು, (ಮೇ.26): ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರು ಇಂದು (ಬಧವಾರ) ಹೃದಯಾಘಾತದಿಂದ ನಿಧನರಾಗಿದ್ದಾರೆ.  

ಅವರ ನಿಧನಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ, ಡಿಸಿಎಂ ಅಶ್ವತ್ಥ್ ನಾರಾಯಣ, ದೇವೇಗೌಡ, ಸಿದ್ದರಾಮಯ್ಯ ಸೇರಿದಂತೆ ಹಲವು ರಾಜಕೀಯ ನಾಯಕರುಗಳು ಸಂತಾಪ ಸೂಚಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ ಎಚ್‌. ಎಸ್. ದೊರೆಸ್ವಾಮಿ ವಿಧಿವಶ 

ಈ ಕುರಿತಂತೆ ಟ್ವಿಟ್ ಮಾಡಿರುವಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಗಾಂಧೀವಾದಿ, ಪತ್ರಕರ್ತ, ಸಮಾಜ ಸೇವಕರು, ನಾಡುನುಡಿ ಜನಪರ ಕಾಳಜಿಗಳಿಗೆ ಸದಾ ಧ್ವನಿಯಾಗಿದ್ದ ಶತಾಯುಷಿ ಹೆಚ್.ಎಸ್.ದೊರೆಸ್ವಾಮಿ ವಿಧಿವಶರಾದ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತಾ, ದೇವರು ಅವರ ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಕೋರಿದ್ದಾರೆ.

ಸಿದ್ದರಾಮಯ್ಯ ಕಂಬನಿ
ಹಿರಿಯ ಸ್ವಾತಂತ್ರ್ಯ ಸೇನಾನಿ, ಶತಾಯುಷಿ ಎಚ್.ಎಸ್. ದೊರೆಸ್ವಾಮಿಯವರ ನಿಧನ ನನಗೆ ಆಘಾತ ಉಂಟುಮಾಡಿದೆ.‌  ಮನೆ ಹಿರಿಯನನ್ನು ಕಳೆದುಕೊಂಡ ದು:ಖ ನನ್ನದಾಗಿದೆ. ಅವರ ಕುಟುಂಬದ ಸದಸ್ಯರು ಮತ್ತು ಅಪಾರ ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ.
ನಮ್ಮನ್ನು ಅಗಲಿ ಹೋದ ಎಚ್.ಎಸ್.ದೊರೆಸ್ವಾಮಿ ಅವರು ನಮ್ಮೆಲ್ಲರ. ಆತ್ಮ ಸಾಕ್ಷಿಯಾಗಿದ್ದರು. ತಪ್ಪು ಕಂಡಾಗ ಎಚ್ಚರಿಸಿ,  ಸರಿ ಕಂಡಾಗ ಬೆಂಬಲಿಸುತ್ತಿದ್ದ ಮಾರ್ಗದರ್ಶಕರಾಗಿದ್ದರು. ಇಳಿ ವಯಸ್ಸಿನಲ್ಲಿಯೂ ಜಗ್ಗದೆ, ಕುಗ್ಗದೆ ಅನ್ಯಾಯ-ಅಕ್ರಮ‌ ಕಂಡಾಗ ಬೀದಿಗಿಳಿಯುತ್ತಿದ್ದ ಅವರು ಎಲ್ಲರ ಪಾಲಿನ ಸ್ಪೂರ್ತಿಯಾಗಿದ್ದರು.

ಎಚ್‌ಡಿ ದೇವೇಗೌಡ ಸಂತಾಪ
ಸ್ವಾತಂತ್ರ್ಯ ಹೋರಾಟಗಾರರು, ಪತ್ರಕರ್ತರು, ಶತಾಯುಷಿಗಳಾದ ಶ್ರೀ ಹೆಚ್. ಎಸ್. ದೊರೆಸ್ವಾಮಿಯವರು ನಿಧನರಾದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ನೋವುಂಟಾಯಿತು. ತಮ್ಮ ಜೀವನದುದ್ದಕ್ಕೂ ಸಮಾಜದ ಏಳಿಗೆಗೆ ದುಡಿದ ಒಬ್ಬ ಮಹಾನ್ ಸಾಮಾಜಿಕ ಹೋರಾಟಗಾರರನ್ನು ಕಳೆದುಕೊಂಡು ನಮ್ಮ ರಾಜ್ಯ ಇಂದು ಬಡವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ಮತ್ತು ಹಿತೈಷಿಗಳಿಗೆ ಈ ದುಃಖ ಭರಿಸುವ ಶಕ್ತಿ ದೊರೆಯಲಿ.

ಎಚ್‌ಡಿ ಕುಮಾರಸ್ವಾಮಿ
ಸ್ವಾತಂತ್ರ್ಯಪೂರ್ವ, ಸ್ವಾತಂತ್ರ್ಯೋತ್ತರ ನಂತರ ಸೆರೆವಾಸ ಅನುಭವಿಸಿದ್ದ ದೊರೆಸ್ವಾಮಿಯವರ ಬದುಕಿನ ಆದರ್ಶ, ಮೌಲ್ಯಗಳು ಎಲ್ಲರಿಗೂ ಸ್ಪೂರ್ತಿ.ಇಂತಹ ಮಹಾನ್ ಚೇತನ ಎರಡು ಶತಮಾನಗಳ ಕಾಲಘಟ್ಟದಲ್ಲಿ ನಮ್ಮೆಲ್ಲರಿಗೂ ಹೋರಾಟದ ಸ್ಪೂರ್ತಿಯ ಸೆಲೆಯಾಗಿ ಮುಂಚೂಣಿಯ ಮಾರ್ಗದರ್ಶಕರಾಗಿದ್ದರು ಎಂಬುದನ್ನು ಅತ್ಯಂತ ವಿನೀತ ಭಾವದಿಂದ ಸ್ಮರಿಸಿಕೊಳ್ಳುತ್ತೇನೆ. ಮೃತರ ಕುಟುಂಬದ ಸದಸ್ಯರು, ಅವರ ಅಸಂಖ್ಯ ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ
ಶತಾಯುಷಿ, ಹಿರಿಯ ಸಾಮಾಜಿಕ ಚಿಂತಕ ದೊರೆಸ್ವಾಮಿಯವರು ಅಗಲಿಕೆಯ ಸುದ್ದಿ ಕೇಳಿ ದುಃಖವಾಗಿದೆ. ಶ್ರೀಯುತರ ಆತ್ಮಕ್ಕೆ ಮೋಕ್ಷ ಪ್ರಾಪ್ತಿಯಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ