ಕಾಂಗ್ರೆಸ್ಸಲ್ಲಿ ಪ್ರಮೋಷನ್‌ ಸಿಗಬೇಕಿದ್ರೆ ಜೈಲಿಗೆ ಹೋಗಬೇಕು : ಸಿ.ಟಿ.ರವಿ

Kannadaprabha News   | Asianet News
Published : Aug 25, 2021, 08:15 AM ISTUpdated : Aug 25, 2021, 08:30 AM IST
ಕಾಂಗ್ರೆಸ್ಸಲ್ಲಿ ಪ್ರಮೋಷನ್‌ ಸಿಗಬೇಕಿದ್ರೆ ಜೈಲಿಗೆ ಹೋಗಬೇಕು : ಸಿ.ಟಿ.ರವಿ

ಸಾರಾಂಶ

ಕಾಂಗ್ರೆಸ್‌ನಲ್ಲಿ ಪ್ರಮೋಷನ್‌ ಸಿಗಬೇಕಾದರೆ ಜೈಲಿಗೆ ಹೋಗಬೇಕು ಪ್ರಮೋಷನ್‌ಗೆ ಭ್ರಷ್ಟಾಚಾರ ಮಾಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವ್ಯಂಗ್ಯ

 ಚಿಕ್ಕಮಗಳೂರು (ಆ.25):  ಕಾಂಗ್ರೆಸ್‌ನಲ್ಲಿ ಪ್ರಮೋಷನ್‌ ಸಿಗಬೇಕಾದರೆ ಜೈಲಿಗೆ ಹೋಗಬೇಕು, ಭ್ರಷ್ಟಾಚಾರ ಮಾಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವ್ಯಂಗ್ಯವಾಡಿದ್ದಾರೆ.

ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿ ಮಾಡಿರುವ ವಿಷಯ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಮಂಗಳವಾರ ಪ್ರತಿಕ್ರಿಯಿಸಿದ ಅವರು, ‘ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರು ಈ ಹಿಂದೆ ಗೂಂಡಾಗಳಿಗೆ ವಿಶೇಷ ಆದ್ಯತೆ ನೀಡಬೇಕೆಂದು ಹೇಳಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಗೆ ಬೆಳೆದುಕೊಂಡು ಬಂದರೋ ಆ ರೀತಿಯ ಆಲೋಚನೆ ಮಾಡುತ್ತಿದ್ದಾರೆ. ಭ್ರಷ್ಟಚಾರ ಎಂಬುದು ಕಾಂಗ್ರೆಸ್‌ನ ರಾಜಕೀಯ ವ್ಯವಸ್ಥೆಯೊಳಗೇ ಇದೆ. ಅಲ್ಲಿ ಗೂಂಡಾಗಿರಿ, ಪ್ರಮೋಷನ್‌ನ ಒಂದು ಮಾದರಿ. ಹಾಗಾಗಿ ಅವರು ಅದನ್ನು ಒಪ್ಪಿಕೊಂಡಿದ್ದಾರೆ’ ಎಂದು ಟೀಕಿಸಿದರು.

ಕಾಂಗ್ರೆಸ್ಸಿಗರ ವಿರುದ್ಧ ಮಾನಹಾನಿ ದಾವೆ : ಸಿ.ಟಿ. ರವಿ

ಮೋದಿ ಹೆಸರಿಡಿ: ಇದೇ ವೇಳೆ, ಸ್ವಚ್ಛ ಭಾರತ ಅಭಿಯಾನ ಯೋಜನೆಯಡಿ ನಿರ್ಮಾಣ ಮಾಡಿರುವ ಶೌಚಾಲಯಗಳಿಗೆ ಪ್ರಧಾನಿ ಮೋದಿ ಹೆಸರಿಡಬೇಕೆಂದು ಸಿ.ಟಿ.ರವಿ ಅವರು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ‘ದೇಶದಲ್ಲಿ 13 ಕೋಟಿ ಶೌಚಾಲಯಗಳನ್ನು ನಿರ್ಮಾಣ ಮಾಡಿ, ತಾಯಿಯಂದಿರ ಮರ್ಯಾದೆ ಉಳಿಸಿರುವುದು ಅಗೌರವದ ಸಂಗತಿ ಅಲ್ಲ. ಗೌರವದ, ಸ್ವಾಭಿಮಾನದ ಸಂಗತಿ’ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!