ರಾಜ್ಯದಲ್ಲಿ ಬರಲಿದೆಯಾ ಜನಸಂಖ್ಯಾ ನಿಯಂತ್ರಣ ಕಾಯ್ದೆ?

Kannadaprabha News   | Asianet News
Published : Jul 18, 2021, 07:18 AM IST
ರಾಜ್ಯದಲ್ಲಿ ಬರಲಿದೆಯಾ ಜನಸಂಖ್ಯಾ ನಿಯಂತ್ರಣ ಕಾಯ್ದೆ?

ಸಾರಾಂಶ

ರಾಜ್ಯದ ಹಿತದೃಷ್ಟಿಯಿಂದ ಒಳ್ಳೆದಾಗುವುದಿದ್ದರೆ ಜನಸಂಖ್ಯಾ ನಿಯಂತ್ರಣ ಕಾಯ್ದೆಯನ್ನು ಏಕೆ ಜಾರಿ ತರಬಾರದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ  ಡಿ.ಕೆ.ಶಿವಕುಮಾರ್‌ ಸೇರಿದಂತೆ ಇತರೆ ಕಾಂಗ್ರೆಸ್‌ ಮುಖಂಡರ ಟೀಕೆಗೆ ಪ್ರತಿಕ್ರಿಯೆ

ಚಿಕ್ಕಮಗಳೂರು (ಜು.18): ಶಾಸನ ಸಭೆಗಳಲ್ಲಿ ಚರ್ಚೆ ಆಗಿ, ರಾಜ್ಯದ ಹಿತದೃಷ್ಟಿಯಿಂದ ಒಳ್ಳೆದಾಗುವುದಿದ್ದರೆ ಜನಸಂಖ್ಯಾ ನಿಯಂತ್ರಣ ಕಾಯ್ದೆಯನ್ನು ಏಕೆ ಜಾರಿ ತರಬಾರದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಶನಿವಾರ ಪ್ರಶ್ನಿಸಿದರು.

ಈ ಕುರಿತು ತಮ್ಮ ಟ್ವೀಟ್‌ಗೆ ಡಿ.ಕೆ.ಶಿವಕುಮಾರ್‌ ಸೇರಿದಂತೆ ಇತರೆ ಕಾಂಗ್ರೆಸ್‌ ಮುಖಂಡರ ಟೀಕೆಗೆ ಪ್ರತಿಕ್ರಿಯಿಸಿದ ಅವರು, ‘ಈ ವಿಚಾರದಲ್ಲಿ ಜನಾಭಿಪ್ರಾಯ ಪರವಾಗಿದ್ದರೆ ಜಾರಿಗೆ ತರಲಿ. ಒತ್ತಾಯಪೂರ್ವಕವಾಗಿ ಮಾಡಲು ಇದು ತುರ್ತು ಪರಿಸ್ಥಿತಿ ಅಲ್ಲ. 

ಕರ್ನಾಟಕದಲ್ಲೂ ಜನಸಂಖ್ಯೆ ನಿಯಂತ್ರಣ ನೀತಿ ಜಾರಿಗೊಳಿಸಲು ಇದು ಸಕಾಲ: ಸಿ.ಟಿ.ರವಿ

ನಾವು ಸಂವಿಧಾನದ ಮೇಲೆ ನಂಬಿಕೆ ಇಟ್ಟಿದ್ದೇವೆ. ನಾವು ಬಂದೂಕಿನ ಮೂಲಕ ಬೆದರಿಸಲು ನಕ್ಸಲರಲ್ಲ. ನಮ್ಮದೇನಿದ್ದರೂ ಬ್ಯಾಲೆಟ್‌ನಲ್ಲಿ ನಂಬಿಕೆ’ ಎಂದು ಹೇಳಿದರು. ತುರ್ತು ಪರಿಸ್ಥಿತಿಯಲ್ಲಿ ಒತ್ತಾಯ ಪೂರ್ವಕವಾಗಿ ಶಸ್ತ್ರಚಿಕಿತ್ಸೆ ಮಾಡಿದರು. ಆಗ ಸಿದ್ದರಾಮಯ್ಯ ಕಾಂಗ್ರೆಸ್‌ನಲ್ಲಿ ಇರಲಿಲ್ಲ. ಅವರು ಕಾಂಗ್ರೆಸ್‌, ಇಂದಿರಾಗಾಂಧಿ ವಿರುದ್ಧ ಇದ್ದರು ಎಂದರು.

ಹಿಂದೆ ತುರ್ತು ಪರಿಸ್ಥಿತಿಯಲ್ಲಿ ಇಂದಿರಾ ಬ್ರಿಗೇಡ್‌, ಸಂಜಯ್‌ ಗಾಂಧಿ ಬ್ರಿಗೇಡ್‌ ಹೆಸರಿನಲ್ಲಿ ನಸ್‌ಬಂದಿ ಕಾರ್ಯಕ್ರಮ ಮಾಡಿದರು.

ಡಿ.ಕೆ.ಶಿವಕುಮಾರ್‌ ಯುವ ಕಾಂಗ್ರೆಸ್‌ನಲ್ಲಿ ಇದ್ದರು ಎನ್ನಿಸುತ್ತದೆ. ಎಷ್ಟು ನಸ್‌ಬಂದಿ ಮಾಡಿಸಿದರು ಎನ್ನುವುದನ್ನು ಅವರಿಗೆ ಕೇಳಬೇಕು. ಆಗ ಸಿ.ಟಿ.ರವಿ ಹೇಳುತ್ತಿರುವುದು ತಪ್ಪೋ, ಸರಿಯೋ ಎನ್ನುವುದು ಗೊತ್ತಾಗುತ್ತದೆ ಎಂದರು.

ಅಂದು ಯುವ ಕಾಂಗ್ರೆಸ್‌ನಲ್ಲಿ ಸ್ಥಾನ ಸಿಗಬೇಕು ಎಂದರೆ ಅವರು ನಸ್‌ಬಂದಿ ಎಷ್ಟುಜನರಿಗೆ ಮಾಡಿಸಿದ್ದರು ಅಷ್ಟುಅವರಿಗೆ ಬಡ್ತಿ ಸಿಗುತ್ತಿತ್ತು. ಎಷ್ಟುಜನರನ್ನು ಮಾಡಿಸಿದ್ದರು ಎನ್ನುವುದನ್ನು ಅವರೇ ಹೇಳಬೇಕು. ನಾನು ಆ ರೀತಿ ಯಾವುದೇ ಒತ್ತಾಯದ ವಿಚಾರ ಹೇಳುತ್ತಿಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ
ಬಿಡಿಎ ಸೈಟ್ ತಗೊಂಡ್ರೆ ಚಿಪ್ಪೇ ಗತಿ; ಕೆಂಪೇಗೌಡ ಲೇಔಟ್ ಸೈಟ್ ತಗೊಂಡು 15 ವರ್ಷವಾದ್ರೂ ಸೈಟೂ ಇಲ್ಲ, ಸಾಲನೂ ಸಿಗ್ತಿಲ್ಲ!