ಭಾರತ್ ಬಂದ್: ರೈತರ ಹೆಸರಿನಲ್ಲಿ ದಲ್ಲಾಳಿಗಳು ಪ್ರತಿಭಟಿಸುವುದು ಸರಿಯಲ್ಲ ಎಂದ ಸಿ.ಟಿ.ರವಿ

Published : Sep 27, 2021, 09:28 PM IST
ಭಾರತ್ ಬಂದ್: ರೈತರ ಹೆಸರಿನಲ್ಲಿ ದಲ್ಲಾಳಿಗಳು ಪ್ರತಿಭಟಿಸುವುದು ಸರಿಯಲ್ಲ ಎಂದ ಸಿ.ಟಿ.ರವಿ

ಸಾರಾಂಶ

* ಭಾರತ್ ಬಂದ್‌ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯ * ರೈತರ ಹೆಸರಿನಲ್ಲಿ ದಲ್ಲಾಳಿಗಳು ಪ್ರತಿಭಟಿಸದ್ರು ಎಂದ ಸಿಟಿ ರವಿ * ಸಿದ್ದರಾಮಯ್ಯ ವಿರುದ್ಧವೂ ವಾಗ್ದಾಳಿ

ಬೆಂಗಳೂರು, (ಸೆ.27): ರೈತರ ಹೆಸರಿನಲ್ಲಿ ದಲ್ಲಾಳಿಗಳು ಪ್ರತಿಭಟಿಸುತ್ತಿರುವುದು ಸರಿಯಲ್ಲ. ರೈತರನ್ನು ಶೋಷಿಸಿ ರೈತರ ಹೆಸರಿನಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.

ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಇಂದು (ಸೆ.27) ಭಾರತ್ ಬಂದ್ ವಿಚಾರವಾಗಿ ಪ್ರಧಾನ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ರೈತರ ಹೆಸರಿನಲ್ಲಿ ಮೂರು ಪ್ರಮುಖ ಕಾಯ್ದೆ ವಿರೋಧಿಸಿ ಭಾರತ್ ಬಂದ್ ಮಾಡಿದ್ದಾರೆ. ಆದರೆ ರೈತರು ಭಾರತ್ ಬಂದ್ ವಿರೋಧಿಸಿ, ಮೋದಿ ಪರ ನಿಂತಿದ್ದಾರೆ. ಕೃಷಿ ಯೋಜನೆ ಪರವಾಗಿದ್ದು, ಮೋದಿಯನ್ನು ರೈತರು ಬೆಂಬಲಿಸಿದ್ದಾರೆ ಎಂದರು.

ಭಾರತ್‌ ಬಂದ್‌: ಪ್ರಧಾನಿ ಮೋದಿ ಭಾವಚಿತ್ರಕ್ಕೆ ಈರುಳ್ಳಿ ಹಾರ ಹಾಕಿ ಪ್ರತಿಭಟನೆ

ಅಂತೆಯೇ ಎಲ್ಲ ಪಕ್ಷಗಳು ರೈತರ ವಿರೋಧವಾಗಿ ನಿಂತು ಭಾರತ್ ಬಂದ್ ನಡೆಸಿರುವುದನ್ನು ರೈತರೇ ವಿರೋಧಿಸಿ ಕೇಂದ್ರದ ಈ ಕೃಷಿ ಕಾಯಿದೆಗಳು ರೈತರ ಪರ ಎನ್ನುವುದನ್ನು ರೈತರೇ ಹೇಳಿ ತಮ್ಮ ಹಕ್ಕಿಗಾಗಿ ನಿಂತಿದ್ದಾರೆ. ಕಳೆದ ಒಂದು ವರ್ಷದಿಂದ ರೈತ ಮಸೂದೆ ವಿರೋಧವಾಗಿ ಕೆಲವರು ನಿಂತಿದ್ದಾರೆ. ಯಾವುದನ್ನು ಬದಲಿಸಬೇಕೆಂದು ಸ್ಪಷ್ಟವಾಗಿ ಹೇಳಲು ವಿರೋಧಿಗಳಿಂದಾಗುತ್ತಿಲ್ಲ ಎಂದು ಹೇಳಿದರು. 

ರೈತರಿಗೆ 6000 ಹಣವನ್ನು ಸಿದ್ದರಾಮಯ್ಯ ಹಾಕಿದ್ರಾ? ಅದನ್ನು ಮೋದಿ ಹಾಕಿರೋದು. ಬೇರೆ ದೇಶಗಳಿಗೆ ಹೋಲಿಸಿದ್ರೆ ನಮ್ ದೇಶದ ಜಿಡಿಪಿ ಚೆನ್ನಾಗಿದೆ. ಸಿದ್ದರಾಮಯ್ಯ ಮತ್ತೆ ಸುಳ್ಳು ಒಂದೇ ನಾಣ್ಯದ ಎರಡು ಮುಖಗಳು ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ