'ಹಬ್ಬದ ದಿನವೇ ದೇಗುಲ ನೆಲಸಮ ಮಾಡಿದ್ದು ಅತೀವ ನೋವು ತಂದಿದೆ'

Published : Sep 14, 2021, 04:32 PM IST
'ಹಬ್ಬದ ದಿನವೇ ದೇಗುಲ ನೆಲಸಮ ಮಾಡಿದ್ದು ಅತೀವ ನೋವು ತಂದಿದೆ'

ಸಾರಾಂಶ

* ನಂಜನಗೂಡು ದೇಗುಲ ತೆರವು ವಿವಾದ * ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ * ಹಬ್ಬದ ದಿನವೇ ದೇಗುಲ ನೆಲಸಮ ಮಾಡಿದ್ದು ನನಗೆ ಅತೀವ ನೋವು ತಂದಿದೆ ರವಿ

ಮೈಸೂರು, (ಸೆ.14): ನಂಜನಗೂಡು ದೇಗುಲ ತೆರವು ಮಾಡಿರುವುದಕ್ಕೆ ತೀವ್ರ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಜಿಲ್ಲಾಡಳಿತದ ನಡೆಗೆ ಹಿಂದೂಪರ ಸಂಘಟನೆಗಳು ಸಿಡಿದೆದ್ದಿವೆ.

ಇನ್ನು ಈ ಕುರಿತು ಇಂದು (ಸೆ.14) ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ದೇವಸ್ಥಾನ ತೆರವುಗೊಳಿಸಿರುವುದು ಸರಿಯಲ್ಲ. ಈ ಘಟನೆ ಕೋಟ್ಯಾಂತರ ಜನರಿಗೆ ನೋವು ತಂದಿದೆ ಎಂದು ಅಸಮಾಧಾನ ಹೊರಹಾಕಿದರು.

ದೇಗುಲ ಧ್ವಂಸ : ಇದಕ್ಕೆಲ್ಲಾ ಬಿಜೆಪಿ ಸರ್ಕಾರವೇ ಕಾರಣ

ದೇಗುಲ ತೆರವು ಮಾಡುವುದಕ್ಕು ಒಂದು ಗೌರವಯುತವಾದ ರೀತಿ ನೀತಿ ಇರುತ್ತೆ. ಆದರೆ ಹಬ್ಬದ ದಿನವೇ ದೇಗುಲ ತೆರವುಗೊಳಿಸಿರೋದು ನಮಗೆಲ್ಲ ನೋವು ತಂದಿದೆ ಎಂದರು.

ನಾನು ಮುಖ್ಯಮಂತ್ರಿಗಳ ಜೊತೆ ಮಾತಾಡ್ತೇನೆ. ಅವರ ಮುಂದೆ ನನ್ನ ಭಾವನೆಗಳನ್ನ ವ್ಯಕ್ತಪಡಿಸುತ್ತೇನೆ. ಅನುಷ್ಠಾನಗೊಳಿಸಲು ಸಾಧ್ಯವಾಗದ ನ್ಯಾಯಲಾಯದ ಹಲವು ತೀರ್ಪುಗಳ ವಿಚಾರದಲ್ಲಿ ಮೇಲ್ಮನವಿ ಸಲ್ಲಿಸಲಾಗುತ್ತದೆ. ಹಾಗೆಯೇ ಈ ತೀರ್ಪಿನ ಕುರಿತು ಮೇಲ್ಮನವಿ ಸಲ್ಲಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ