ಹೌದು ಸಿದ್ದರಾಮಯ್ಯ ಮತಾಂಧ: ಈಶ್ವರಪ್ಪ!

Published : Nov 10, 2018, 04:20 PM ISTUpdated : Nov 10, 2018, 04:40 PM IST
ಹೌದು ಸಿದ್ದರಾಮಯ್ಯ ಮತಾಂಧ: ಈಶ್ವರಪ್ಪ!

ಸಾರಾಂಶ

‘ಹೌದು.. ಸಿದ್ದು ಮತಾಂಧ..’! ಸಿದ್ದರಾಮಯ್ಯ ಮತಾಂಧ ಎಂದ ನಳಿನ್ ಕುಮಾರ್ ಹೇಳಿಕೆಗೆ ಈಶ್ವರಪ್ಪ ಸಮರ್ಥನೆ! ಸಿದ್ದರಾಮಯ್ಯ ಒಬ್ಬ ಮತಾಂಧ ಅನ್ನೋದ್ರಲ್ಲಿ ಅನುಮಾನವಿಲ್ಲ! ಬಾಗಲಕೋಟೆ ಯಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿಕೆ

ಬಾಗಲಕೋಟೆ(ನ.10): ಸಿದ್ದರಾಮಯ್ಯ ಒಬ್ಬ ಮತಾಂಧ ಎಂಬ ನಳಿನ್​ ಕುಮಾರ್ ಹೇಳಿಕಯನ್ನು ಈಶ್ವರಪ್ಪ ಸಮರ್ಥನೆ ಮಾಡಿಕೊಂಡಿದ್ದಾರೆ.

ಈ ಕುರಿತು ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಒಬ್ಬ ಮತಾಂಧ ಅನ್ನೋದ್ರಲ್ಲಿ ಅನುಮಾನವೇ ಇಲ್ಲ ಅಂತ ಮಾಜಿ ಡಿಸಿಎಂ ಈಶ್ವರಪ್ಪ ಹೇಳಿದ್ದಾರೆ.

ಇನ್ನು ಸಿದ್ದರಾಮಯ್ಯರನ್ನು ಟಿಪ್ಪುಗೆ ಹೋಲಿಕೆ ಬಗ್ಗೆ ನನಗೆ ಗೊತ್ತಿಲ್ಲ, ಈ ಬಗ್ಗೆ ನಾನು ಮಾತನಾಡೋದಿಲ್ಲ ಅಂತ ಹೇಳಿದ್ದಾರೆ.

 ಸಿದ್ದರಾಮಯ್ಯ ಸಂಗೊಳ್ಳಿ ರಾಯಣ್ಣ, ರಾಣಿ ಚನ್ನಮ್ಮ, ಸಿಂಧೂರ ಲಕ್ಷಣ, ಟಿಪ್ಪು ಹೋಲಿಕೆ ವಿಚಾರವಾಗಿ ಕೆ.ಎಸ್ ಈಶ್ವರಪ್ಪ ಗದಗದಲ್ಲಿ ವಾಗ್ದಾಳಿ ನಡೆಸಿದ್ದಾರೆ. 

ಸ್ವಾತಂತ್ರ್ಯ ಹೋರಾಟಗಾರರನ್ನ ಟಿಪ್ಪುವಿಗೆ ಹೋಲಿಸುವ ದುಸ್ಥಿತಿಗೆ ಸಿದ್ದರಾಮಯ್ಯ ಬಂದಿದ್ದಾರೆ. ಅಧಿಕಾರ, ಖುರ್ಚಿ ಕಳೆದುಕೊಂಡರೂ ಸಿದ್ದರಾಮಯ್ಯಗೆ ಬುದ್ಧಿ ಬಂದಿಲ್ಲ.  ಸಂಗೊಳ್ಳಿ ರಾಯಣ್ಣ, ರಾಣಿ ಚನ್ನಮ್ಮ‌ ರಾಷ್ಟ್ರ ಭಕ್ತರನ್ನ ಕೊಲೆ ಮಾಡಲಿಲ್ಲ.  ಸ್ವಾತಂತ್ರ್ಯಕ್ಕೊಸ್ಕರ ಬ್ರಿಟಿಷರ ವಿರುದ್ಧ ಹೋರಾಡಿ ರಾಷ್ಟ್ರ ದ್ರೋಹಿಗಳನ್ನ ಕೊಂದರು. 

ಸ್ವಾತಂತ್ರ್ಯ ಹೋರಾಟಗಾರರನ್ನ ಟಿಪ್ಪು ಗೆ ಹೋಲಿಸುತ್ತಾರೆ ಅಂದರೆ ಕಾಂಗ್ರೆಸ್ ದುಸ್ಥಿತಿ ಎಲ್ಲಿಗೆ ಬಂತು? ಸಿದ್ದರಾಮಯ್ಯ ಭಂಡ ರಾಜಕಾರಣಿ, ಇಂತವರನ್ನ ಕರ್ನಾಟಕದಲ್ಲಿ ನೋಡಿಯೇ ಇಲ್ಲ. ಸ್ವಯಂಘೋಷಿತ ಹಿಂದುಳಿದ ನಾಯಕ, ದಲಿತ, ಅಹಿಂದ್ ನಾಯಕ ಎಂದುಕೊಂಡು ತಿರುಗುತ್ತಿದ್ದಾರೆ.  ಅದಕ್ಕಾಗಿಯೇ ಅವರನ್ನ ಚಾಮುಂಡಿನಲ್ಲಿ ಮನೆಗೆ ಕಳುಹಿಸಿದರು. ಬಾದಾಮಿನಲ್ಲಿ ಸಿದ್ದರಾಮಯ್ಯ ಹಣೆಬರಹ ಗೊತ್ತಿಲ್ಲ. ಮುಂದೆ ಗೊತ್ತಾಗುತ್ತೆ ಅಲ್ಲಿಂದಲೂ ಓಡಿಸ್ತಾರೆ ಎಂದು ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವಾಕ್‌ ಸ್ವಾತಂತ್ರ್ಯ ಕಡಿವಾಣಕ್ಕೆ ದ್ವೇಷ ಭಾಷಣ ಮಸೂದೆ: ಆರ್.ಅಶೋಕ್ ಕಿಡಿ
ವಸತಿ ಯೋಜನೆಗಳಿಗೆ ಸಹಾಯಧನ ಹೆಚ್ಚಳಕ್ಕೆ ಚಿಂತನೆ: ಸಚಿವ ಜಮೀರ್‌ ಅಹಮದ್‌