ಜನರ ಮೇಲೆ ಸಾಲ ಹೊರಿಸಿ ಬಜೆಟ್‌ ಮಂಡಿಸುವ ಅಗತ್ಯ ಏನಿತ್ತು: ಎನ್‌ಆರ್‌ ರಮೇಶ್ ಕಿಡಿ

Published : Feb 20, 2024, 01:12 PM ISTUpdated : Feb 20, 2024, 01:13 PM IST
ಜನರ ಮೇಲೆ ಸಾಲ ಹೊರಿಸಿ ಬಜೆಟ್‌ ಮಂಡಿಸುವ ಅಗತ್ಯ ಏನಿತ್ತು: ಎನ್‌ಆರ್‌ ರಮೇಶ್ ಕಿಡಿ

ಸಾರಾಂಶ

ರಾಜ್ಯದ ಪ್ರತಿ ಪ್ರಜೆಯ ತಲೆಗೆ ₹28,821 ಮೊತ್ತದ ಸಾಲದ ಹೊರೆ ಹೊರಿಸಿ ಆಯವ್ಯಯವನ್ನು ಮಡಿಸುವ ಅಗತ್ಯವೇನಿತ್ತು ಎಂದು ಬಿಜೆಪಿ ಮುಖಂಡ ಎನ್‌.ಆರ್‌.ರಮೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.

ಬೆಂಗಳೂರು (ಫೆ.20) :  ರಾಜ್ಯದ ಪ್ರತಿ ಪ್ರಜೆಯ ತಲೆಗೆ ₹28,821 ಮೊತ್ತದ ಸಾಲದ ಹೊರೆ ಹೊರಿಸಿ ಆಯವ್ಯಯವನ್ನು ಮಡಿಸುವ ಅಗತ್ಯವೇನಿತ್ತು ಎಂದು ಬಿಜೆಪಿ ಮುಖಂಡ ಎನ್‌.ಆರ್‌.ರಮೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.

2024-25ನೇ ಸಾಲಿಗೆ ರಾಜ್ಯದ ₹3,71,383 ಕೋಟಿ ಬೃಹತ್ ಮೊತ್ತದ ಆಯವ್ಯಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ್ದಾರೆ. ಆದರೆ ಸರ್ಕಾರಕ್ಕೆ ಯಾವ ಮೂಲಗಳಿಂದ ಆದಾಯ ಬರುತ್ತದೆ ಎಂಬುದನ್ನು ಸ್ಪಷ್ಟಪಡಿಸಿಲ್ಲ. ಹೀಗಾಗಿ ಜನರ ತಲೆಗೆ ಸಾಲದ ಹೊರೆ ಹೊರಿಸಿ ಆಯವ್ಯಯ ಮಂಡಿಸುವ ಅಗತ್ಯವೇನಿತ್ತು ಎಂದು ರಮೇಶ್ ಆಕ್ಷೇಪಿಸಿದ್ದಾರೆ.

1 ಲಕ್ಷ ಕೋಟಿ ಸಾಲ ಮಾಡಿ 52 ಸಾವಿರ ಕೋಟಿ ಗ್ಯಾರೆಂಟಿಗೆ ನೀಡಿದ್ರೆ ಬಡವರ ಬಜೆಟ್ ಅಂತಾರಾ? ಸಿಎಂ ವಿರುದ್ಧ ಎಚ್‌ಡಿಕೆ ವಾಗ್ದಾಳಿ!

ಪ್ರಸುತ್ತ ಸರ್ಕಾರಕ್ಕೆ ವಿವಿಧ ಮೂಲಗಳಿಂದ ಲಭಿಸುತ್ತಿರುವುದು ಸುಮಾರು ₹2.10 ಲಕ್ಷ ಕೋಟಿ ಆದಾಯ ಬರುತ್ತದೆ. ಹೀಗಿದ್ದರೂ ವಾರ್ಷಿಕ ಆದಾಯಕ್ಕಿಂತಲೂ ಒಂದೂವರೆ ಪಟ್ಟು ಹೆಚ್ಚು ಮೊತ್ತದ ಆಯವ್ಯಯವನ್ನು ಮಂಡಿಸಿರುವುದು ನಿಜಕ್ಕೂ ಈ ನಾಡಿನ ದೌರ್ಭಾಗ್ಯವಾಗಿದೆ ಎಂದು ಕಿಡಿಕಾರಿದ್ದಾರೆ.

 

ಅಧಿಕಾರಕ್ಕಾಗಿ ಚುನಾವಣೆ ವೇಳೆ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ಈಗ ಅವುಗಳ ಕಾರ್ಯರೂಪಕ್ಕಿಳಿಸಲು ಮುಖ್ಯಮಂತ್ರಿಗಳು ಹೆಣಗಾಡುತ್ತಿದ್ದಾರೆ. ಕಳೆದ ಒಂಭತ್ತು ತಿಂಗಳಿಂದ ರಾಜ್ಯದ ಪ್ರಮುಖ 37 ಇಲಾಖೆಗಳ ಮೂಲಕ ಒಂದು ನಯಾಪೈಸೆಯ ಅಭಿವೃದ್ಧಿ ಕಾರ್ಯವನ್ನೂ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

 

ಈ ಆಯವ್ಯಯವು ‘ಸಾಲ ಮಾಡಿಯಾದರೂ ತುಪ್ಪ ತಿನ್ನು’ ಎನ್ನುವಂತಿದೆ. ಸಿದ್ದರಾಮಯ್ಯನವರು ಎರಡನೇ ಬಾರಿಗೆ ಮುಖ್ಯಮಂತ್ರಿಗಳಾದ ನಂತರ ಕಳೆದ ಸಾಲಿನಲ್ಲಿ -2023-24 ರ ಸಾಲಿನಲ್ಲಿ ಒಟ್ಟು ₹85,818 ಕೋಟಿ ಸಾಲವನ್ನು ಮಾಡಿದ್ದರು. ಮತ್ತೆ ₹1.05 ಲಕ್ಷ ಕೋಟಿ ಸಾಲ ಮಾಡಲು ಮುಖ್ಯಮಂತ್ರಿಗಳು ಮುಂದಾಗಿದ್ದಾರೆ. ಈ ಬೃಹತ್ ಮೊತ್ತದ ಸಾಲವನ್ನು ತೆಗೆದುಕೊಂಡು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ ಎಂದು ದೂರಿದ್ದಾರೆ.

ಕರ್ನಾಟಕ ಬಜೆಟ್ ಸಾಮಾನ್ಯ ಅಲ್ಲ, ಐತಿಹಾಸಿಕ ಬಜೆಟ್: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ

ಸ್ವಾರ್ಥದ ಬಜೆಟ್‌ಗಾಗಿರಾಜ್ಯದ ಜನರಿಗೆ ಬರೆ

ಪ್ರಸ್ತುತ ರಾಜ್ಯದ ಒಟ್ಟು ಜನಸಂಖ್ಯೆ 6,78,33,000 ಆಗಿದ್ದು, 2024-25 ರ ಸಾಲಿನಲ್ಲಿ ಆಯವ್ಯಯದಲ್ಲಿ ತಿಳಿಸಿರುವಂತೆ ₹1,05 ಮೊತ್ತದ ಸಾಲವನ್ನು ರಾಜ್ಯದ ಪ್ರತಿಯೊಬ್ಬ ಪ್ರಜೆಯ ತಲೆಗೆ ₹15,516 ಸಾಲ ಬರುತ್ತದೆ. ನಿಮ್ಮ ಸ್ವಾರ್ಥದ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ರಾಜ್ಯದ ಪ್ರತಿಯೊಬ್ಬ ಪ್ರಜೆಯ ಜೀವನದೊಂದಿಗೆ ಚೆಲ್ಲಾಟವಾಡೋದು ಸರಿಯಲ್ಲ ಎಂದು ಅವರು ಪ್ರಕಟಣೆ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌