ರಾಜ ಕಡಿಮೆ ಮಾತನಾಡಿದಷ್ಟೂ ಒಳ್ಳೆಯದು, ಹೀಗಂತ ಹೇಳಿದ್ಯಾರಿಗೆ?: ಸುರೇಶ್ ಕುಮಾರ್ ಸ್ಪಷ್ಟನೆ

Published : Dec 11, 2018, 10:40 PM ISTUpdated : Dec 11, 2018, 10:44 PM IST
ರಾಜ ಕಡಿಮೆ ಮಾತನಾಡಿದಷ್ಟೂ ಒಳ್ಳೆಯದು, ಹೀಗಂತ ಹೇಳಿದ್ಯಾರಿಗೆ?: ಸುರೇಶ್ ಕುಮಾರ್ ಸ್ಪಷ್ಟನೆ

ಸಾರಾಂಶ

ರಾಜ ಕಡಿಮೆ ಮಾತನಾಡಿದಷ್ಟೂ ಒಳ್ಳೆಯದು, ಹೀಗಂತ ಹೇಳಿದ್ಯಾರಿಗೆ?: ಸುರೇಶ್ ಕುಮಾರ್ ಸ್ಪಷ್ಟನೆ ಹೀಗಿದೆ.

ಬೆಂಗಳೂರು, [ಡಿ.11]: ಇಡೀ ದೇಶದ ಕಣ್ಣು ನೆಟ್ಟಿದ್ದ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಹೊರಬಿದ್ದಿದೆ. ಮೋದಿ ವರ್ಸಸ್ ರಾಹುಲ್ ಗಾಂಧಿ ನಡುವಿನ ನೇರ ಹಣಾಹಣಿ ಎಂಬಂತೆ ಇದ್ದ ಈ ಪಂಚ ಯುದ್ಧದಲ್ಲಿ ಕೈ ಆರ್ಭಟಕ್ಕೆ ಕಮಲ ಪಡೆ ಮುದುರಿ ಕುಳಿತಿದೆ.

ಮತ್ತೊಂದೆಡೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ತಮ್ಮದೇ ರೀತಿಯಲ್ಲಿ ಪಂಚ ರಾಜ್ಯಗಳ ರಿಸಲ್ಟ್ ಅನ್ನು  ವ್ಯಂಗ್ಯ, ವಿಡಂಬನಾತ್ಮಕ, ಟೀಕೆಗಳ ಮೂಲಕ ವಿಮರ್ಶೆ ಮಾಡಿದ್ದಾರೆ.

ಈ ನಡುವೆ ಟ್ರೋಲ್ ಒಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ಹೆಗಲೇರಿದೆ. ಕುಮಾರಸ್ವಾಮಿಯವರು "ಬೇರೆಯವರ ಹಂಗಿನಲ್ಲಿದ್ದೇನೆ ಎಂದಿದ್ದಾಗ, ರಾಜ ಕಡಿಮೆ ಮಾತನಾಡಿದಷ್ಟೂ ಒಳ್ಳೆಯದು ಎಂದು ಸುರೇಶ್ ಕುಮಾರ್ ಅವರು ಟ್ವೀಟ್ ಮಾಡಿದ್ದರು. 

ಆ ಟ್ವೀಟ್ ಅನ್ನು ದುರುಪಯೋಗ ಪಡಿಸಿಕೊಂಡಿರುವ ಕಿಡಿಗೇಡಿಗಳು ತಮಗೆ ಬೇಕಾದಂತೆ ಬರೆದುಕೊಂಡಿದ್ದಾರೆ. 'ರಾಜ ಕಡಿಮೆ ಮಾತನಾಡಿದಷ್ಟೂ ಒಳ್ಳೆಯದು' ಈ ಒಂದು ವಾಕ್ಯವನ್ನು ಈಗ ಪಂಚ ರಾಜ್ಯ ಚುನಾವಣೆ ಫಲಿತಾಂಶಕ್ಕೆ ಹೋಲಿಸಿ, ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

ಇದು ಸುರೇಶ್ ಕುಮಾರ್ ಅವರ ಗಮನಕ್ಕೆ ಬಂದಿದ್ದು, ಈ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದು ಹೀಗೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ