ಸಿದ್ದುಗೆ ಸಿಎಂ ಕುರ್ಚಿಯಲ್ಲಿ ಒಂದು ಕ್ಷಣವೂ ಕೂರುವ ನೈತಿಕತೆ ಇಲ್ಲ: ಸಿ.ಟಿ.ರವಿ

Published : Jul 14, 2024, 04:30 AM ISTUpdated : Jul 14, 2024, 11:04 AM IST
ಸಿದ್ದುಗೆ ಸಿಎಂ ಕುರ್ಚಿಯಲ್ಲಿ ಒಂದು ಕ್ಷಣವೂ ಕೂರುವ ನೈತಿಕತೆ ಇಲ್ಲ: ಸಿ.ಟಿ.ರವಿ

ಸಾರಾಂಶ

ಮುಡಾ ಹಗರಣವನ್ನು ಬೇರೆ ಯಾರಾದರೂ ಮಾಡಿದ್ದರೆ ಸಿದ್ದರಾಮಯ್ಯ ಇದೇ ರೀತಿ ಸಮರ್ಥನೆ ಮಾಡಿಕೊಳ್ಳುತ್ತಿದ್ದರಾ? ಎಲ್ಲರನ್ನೂ ಭ್ರಷ್ಟರೆಂದು ಹೇಳುತ್ತಿದ್ದ ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಒಂದು ಕ್ಷಣ ಸಹ ಕೂಡುವ ನೈತಿಕತೆ ಇಲ್ಲ ಎಂದು ಕಿಡಿಕಾರಿದ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ 

ದಾವಣಗೆರೆ(ಜು.14): ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ಬಗ್ಗೆ ಇಡಿ (ಜಾರಿ ನಿರ್ದೇಶನಾಲಯ), ಎಸ್‌ಐಟಿ ತಂಡಗಳು ತನಿಖೆ ಕೈಗೊಂಡಿವೆ. ಉಪ್ಪು ತಿಂದವನು ನೀರು ಕುಡಿಯಲೇಬೇಕೆಂದು ಸಿದ್ದರಾಮಯ್ಯ ಹೇಳುತ್ತಾರೆ. ಹೀಗಾಗಿ, ನಿಗಮದ ಹಗರಣದಲ್ಲಿ ಭಾಗಿಯಾದವರಿಂದ ಹಣ ವಸೂಲು ಮಾಡಿ, ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಿ ಎಂದು ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಆಗ್ರಹಿಸಿದ್ದಾರೆ. 

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಹಗರಣವನ್ನು ಬೇರೆ ಯಾರಾದರೂ ಮಾಡಿದ್ದರೆ ಸಿದ್ದರಾಮಯ್ಯ ಇದೇ ರೀತಿ ಸಮರ್ಥನೆ ಮಾಡಿಕೊಳ್ಳುತ್ತಿದ್ದರಾ? ಎಲ್ಲರನ್ನೂ ಭ್ರಷ್ಟರೆಂದು ಹೇಳುತ್ತಿದ್ದ ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಒಂದು ಕ್ಷಣ ಸಹ ಕೂಡುವ ನೈತಿಕತೆ ಇಲ್ಲ ಎಂದು ಕಿಡಿಕಾರಿದರು. ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದು, ಅದೇ ದಲಿತರಿಗೆ ಅನ್ಯಾಯ ಮಾಡಲಾಗುತ್ತಿದೆ. ಈ ಸರ್ಕಾರದಲ್ಲಿ ಇನ್ನೂ ಯಾವ್ಯಾವ ಇಲಾಖೆಗಳಲ್ಲಿ ಹಗರಣ ಆಗಿದೆಯೋ ಗೊತ್ತಿಲ್ಲ ಎಂದರು.

ಬೆನ್ನು ಬೆನ್ನಿಗೆ ಎರಡು ಕಂಟಕ.. ! ಅವಳಿ ಕಂಟಕದ ಸುಳಿಯಲ್ಲಿ ಸಿಲುಕಿದರಾ ಸಿಎಂ ಸಿದ್ದರಾಮಯ್ಯ?

ರಾಜ್ಯದ ಖಜಾನೆಗೆ ಕನ್ನ ಹಾಕುವ ಹೆಗ್ಗಣಗಳೇ ತುಂಬಿವೆ. ಪರಿಸ್ಥಿತಿ ಹೀಗಿರುವಾಗ ರಾಜ್ಯದ ಖಜಾನೆಯಾದರೂ ಎಲ್ಲಿ ಉಳಿಯುತ್ತದೆ ಎಂದು ಅವರು ಪ್ರಶ್ನಿಸಿದರು. ಸಿದ್ದರಾಮಯ್ಯನವರ ಆಪ್ತರ ನಕಲಿ ಖಾತೆಗಳಿಗೆ ವಾಲ್ಮೀಕಿ ನಿಗಮದ ಹಣ ಜಮಾ ಆಗಿದೆ. ಇನ್ನು, ಮುಡಾದಲ್ಲಿ ಪಿಂಚಣಿ ಹಣ, ಜೀವಮಾನವಿಡಿ ದುಡಿದು ಕೂಡಿಟ್ಟ ಹಣ ಸೇರಿಸಿ, ನಿವೇಶನಕ್ಕೆ ಅರ್ಜಿ ಹಾಕಿದವರಿಗೆ ನಿವೇಶನ ಇಲ್ಲ, ಸಿದ್ದರಾಮಯ್ಯನವರ ಮನೆಯವರ ಹೆಸರಿಗೆ 14 ಸೈಟ್ ಇವೆ. ಹೀಗಾಗಿ, ಮುಡಾ ಸೇರಿದಂತೆ ಎಲ್ಲಾ ಪಾಲಿಕೆಯಲ್ಲೂ ನಿವೇಶನ ಹಂಚಿಕೆ ಸಂಬಂಧ ತನಿಖೆ ಆಗಬೇಕು ಎಂದು ಆಗ್ರಹಿಸಿದರು.

ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರೇ ಅಭಿವೃದ್ಧಿಗೆ ಹಣ ಇಲ್ಲ. ಎಲ್ಲವನ್ನೂ ಗ್ಯಾರಂಟಿ ಯೋಜನೆಗಳಿಗೆ ಹಾಕಲಾಗಿದೆ ಎಂದಿದ್ದಾರೆ. ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡುವುದಾಗಿ ಗ್ಯಾರಂಟಿಯಾಗಿ ಹೇಳಿದ್ದೀರಿ. ಅದಕ್ಕೆ ನೀವು ಅಭಿವೃದ್ಧಿ ಮಾಡುವ ಸ್ಥಾನದಲ್ಲಿ ಕುಳಿತಿದ್ದೀರಿ. ನಮ್ಮನ್ನು ಪ್ರಶ್ನಿಸುವ ಸ್ಥಾನದಲ್ಲಿ ಜನರು ಕೂಡಿಸಿದ್ದಾರೆ. ಅದಕ್ಕಾಗಿ ನೀವು ಜನರ ಕೆಲಸ ಮಾಡಿ, ಜನರ ಪರವಾಗಿ ಪ್ರಶ್ನಿಸುವ ಕೆಲಸವನ್ನು ನಾವು ಮಾಡುತ್ತೇವೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಿಸಬಾರದು. ಜನರಿಗೆ ತೆರಿಗೆ ಹೆಚ್ಚಿಸಬಾರದು. ಅಭಿವೃದ್ಧಿ ಕಾರ್ಯವನ್ನೂ ಮಾಡಬೇಕು ಎಂದು ಅವರು ತಾಕೀತು ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್