'ನಮ್ಮ ಸರ್ಕಾರವೇ ಅಧಿಕಾರದಲ್ಲಿರುವ ಸಮಯದಲ್ಲಿ ಕೊಲೆ ನಡೆದಿರುವುದು ನಾಚಿಕೆಗೇಡು'

Published : Feb 21, 2022, 04:58 PM IST
'ನಮ್ಮ ಸರ್ಕಾರವೇ ಅಧಿಕಾರದಲ್ಲಿರುವ ಸಮಯದಲ್ಲಿ ಕೊಲೆ ನಡೆದಿರುವುದು ನಾಚಿಕೆಗೇಡು'

ಸಾರಾಂಶ

* ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ * ತಮ್ಮ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಪ್ರತಾಪ್ ಸಿಂಹ * ನಮ್ಮ ಸರ್ಕಾರವೇ ಅಧಿಕಾರದಲ್ಲಿರುವ ಸಮಯದಲ್ಲಿ ಕೊಲೆ ನಡೆದಿರುವುದು ನಾಚಿಕೆಗೇಡು ಎಂದ ಸಂಸದ

ಬೆಂಗಳೂರು, (ಫೆ.21): ಶಿವಮೊಗ್ಗದಲ್ಲಿ(Shivamogga) ಭಾನುವಾರ ನಡೆದ ಬಜರಂಗದಳ (Bajrandal) ಕಾರ್ಯಕರ್ತ ಹರ್ಷ ಹತ್ಯೆ(Harsha Murder) (murder) ಪ್ರಕರಣವನ್ನು ಸಂಸದ ಪ್ರತಾಪ್ ಸಿಂಹ (Pratap Simha) ತೀವ್ರವಾಗಿ ಖಂಡಿಸಿದ್ದಾರೆ.

ಇಂದು (ಸೋಮವಾರ) ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತಾಡಿದ ಅವರು, ಬೀದಿಯಲ್ಲಿ ಹರ್ಷ ಅವರ ಕಗ್ಗೊಲೆಯಾಗಿದ್ದು ಅತೀವ ನೋವಾಗಿದೆ ಮತ್ತು ನಮ್ಮ ಸರ್ಕಾರವೇ ಅಧಿಕಾರದಲ್ಲಿರುವ ಸಮಯದಲ್ಲಿ ಕೊಲೆ ನಡೆದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಅಸಮಾಧಾನ ಹೊರಹಾಕಿದರು.

ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹತ್ಯೆ ಕೇಸ್: ಈಶ್ವರಪ್ಪ ಹೇಳಿಕೆಗೆ ಪರೋಕ್ಷವಾಗಿ ಟಾಂಗ್ ಕೊಟ್ಟ ಸಿಎಂ

ಹಿಂದೆ ಮಂಗಳೂರಿನಲ್ಲಿ ಗೋಲಿಬಾರ್ ಮತ್ತು ಕೆ ಜಿ ಹಳ್ಳಿಯಲ್ಲಿ ಗಲಭೆ ನಡೆದಾಗ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಂಡಿದ್ದರೆ ಹರ್ಷ ಅವರ ಕೊಲೆ ನಡೆಯುತ್ತಿರಲಿಲ್ಲ. ಈಗಲಾದರೂ ತಪ್ಪಿತಸ್ಥರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳಲಿ ಆಗ್ರಹಿಸಿದರು.

ಮುಖ್ಯಮಂತ್ರಿ ಮತ್ತು ಗೃಹ ಸಚಿವರು ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಅಂತ ಹೇಳಿದರೆ ಮತ್ತು ನಾಲ್ಕು ಜನರನ್ನು ಬಂಧಿಸಿ ಜೈಲಿಗೆ ಹಾಕಿದರೆ ಸಾಲದು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲೇಬೇಕು, ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಸ್ಥೆಗಳನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದರು.

‘ಹೈದರಾಬಾದ್‌ನಲ್ಲಿ ಅತ್ಯಾಚಾರಿಗಳನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು, ಇಲ್ಲೂ ಅದೇ ರೀತಿ ಕ್ರಮಗಳನ್ನು ಕೈಗೊಂಡರೆ ಪಾಠ ಕಲಿಯುತ್ತಾರೆ. ಕೆ ಜಿ ಹಳ್ಳಿ ಗಲಭೆ ನಡೆದಾಗ ವೇಳೆ ಬೊಮ್ಮಾಯಿ ಗೃಹ ಸಚಿವರಾಗಿದ್ದರು, ಆ ಸಂದರ್ಭದಲ್ಲೇ ಅವರು ಎಸ್ ಡಿ ಪಿ ಐ ಮತ್ತು ಪಿ ಎಫ್ ಐ ಸಂಸ್ಥೆಗಳ ಮೇಲೆ ನಿಷೇಧ ಹೇರಿದ್ದರೆ, ಹರ್ಷ ಅವರ ಕೊಲೆ ನಡೆಯುತ್ತಿರಲಿಲ್ಲ ಎಂದು ಹೇಳಿದರು.

ಬಿಲ್ ಸಂತೋಷ್ ಟ್ವೀಟ್
ಹರ್ಷ ಕೊಲೆಗೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್  (BL Santosh)ಟ್ವೀಟ್ ಮಾಡಿದ್ದು, ಜಿಹಾದಿ ಮೂಲಭೂತವಾದಿಗಳಿಂದ ಹರ್ಷನ (Harsha) ಹತ್ಯೆಯಾಗಿದೆ, ಹಿಜಾಬ್ ವಿರೋಧಿಸಿ ಸಮವಸ್ತ್ರ ಬೆಂಬಲಿಸಿದ್ದಕ್ಕೆ ಅವರನ್ನು ಕೊಲೆ ಮಾಡಲಾಗಿದೆ, ಎಂದು ತಮ್ಮ ಟ್ವೀಟ್​ನಲ್ಲಿ ಹೇಳಿದ್ದು, ಹಿಂದೂ ವಿರೋಧಿಗಳು ಹರ್ಷನನ್ನು ಕೊಲೆ ಮಾಡಿದ್ದಾರೆ, ಅವರ ಕುಟುಂಬದ ಜೊತೆಗೆ ನಾವಿರೋಣ ಅಂತ ಕರೆ ನೀಡಿದ್ದಾರೆ.

ತಮ್ಮ ಮತ್ತೊಂದು ಟ್ವೀಟ್ ನಲ್ಲಿ ಸಂತೋಷ್ ಅವರು, ‘ರಾಷ್ಟ್ರ ವಿರೋಧಿ ಮತ್ತು ಹಿಂದೂ ಮೂಲಭೂತವಾದಿ ಶಕ್ತಿಗಳಿಂದ ಹರ್ಷ ಅವರ ಹತ್ಯೆಯಾಗಿದೆ. ಮುಖಪುಟಗಳಲ್ಲಿ ಅಂತರರಾಷ್ಟ್ರೀಯ ಲಾಬಿಯಿಂದ ಅವರಿಗೆ ಸಂತಾಪ ವ್ಯಕ್ತವಾಗಿಲ್ಲ. ಅವರೊಬ್ಬ ರಾಷ್ಟ್ರವಾದಿ ಮತ್ತು ಹಿಂದೂ ಆಗಿದ್ದರು. ಅವರ ಕುಟುಂಬದ ಜೊತೆ ನಾವಿರೋಣ, ಕೊನೆಯವರೆಗೆ ಅವರೊಂದಿಗಿರೋಣ,’ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್