
ಮೈಸೂರು, (ಏ.20): ಚಾಮರಾಜನಗರ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಆಪ್ತ ಕಾರ್ಯದರ್ಶಿ ಶಂಕರ್ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.
ಇಂದು (ಮಂಗಳವಾರ) ಚಿಕಿತ್ಸೆ ಫಲಿಸದೆ ಖಾಸಗಿ ಆಸ್ಪತ್ರೆಯಲ್ಲಿ ಶಂಕರ್(78) ಕೊನೆಯುಸಿರೆಳೆದಿದ್ದಾರೆ. ಕಳೆದ 40 ವರ್ಷಗಳಿಂದ ಶ್ರೀನಿವಾಸ್ ಪ್ರಸಾದ್ ಬಳಿ ಆಪ್ತ ಸಹಾಯಕರಾಗಿದ್ದ ಶಂಕರ್ ಅವರಿಗೆ ಒಂದು ವಾರದ ಹಿಂದೆ ಕೊವಿಡ್-19 ಸೋಂಕು ಕಾಣಿಸಿಕೊಂಡಿತ್ತು. ಬಳಿಕ, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಶಂಕರ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
"
ಸಚಿವ ಸುರೇಶ್ ಕುಮಾರ್ ಆಪ್ತ ಸಹಾಯ ಕೊರೋನಾಗೆ ಬಲಿ
ಸುರೇಶ್ ಕುಮಾರ್ ಆಪ್ತ ಸಹಾಯಕ ನಿಧನ
ಹೌದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರ ಆಪ್ತ ಕಾರ್ಯದರ್ಶಿ ಹೆಜ್.ಜೆ. ರಮೇಶ್ (53) ಕೊರೋನಾ ಸೋಂಕಿಗೆ ಬಲಿಯಾಗಿದ್ದರು. ಮಡಿವಾಳದ ಸಮೀಪದ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೂಕ್ತ ಸಮಯಕ್ಕೆ ಆಕ್ಸಿಜನ್ ಸಿಗದೆ ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ರಮೇಶ್ ಸಾವಿಗೀಡಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ