ಸೌಜನ್ಯ ಮನೆಗೆ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಭೇಟಿ

Kannadaprabha News   | Kannada Prabha
Published : Sep 02, 2025, 07:06 AM IST
BY Vijayendra

ಸಾರಾಂಶ

  ಹತ್ಯೆಗೀಡಾದ ಪಾಂಗಳದ ಸೌಜನ್ಯ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸೋಮವಾರ ಭೇಟಿ ನೀಡಿ ಸೌಜನ್ಯ ತಾಯಿ ಕುಸುಮಾವತಿ ಅವರೊಂದಿಗೆ ಮಾತುಕತೆ ನಡೆಸಿದರು.

ಬೆಳ್ತಂಗಡಿ :  ಹತ್ಯೆಗೀಡಾದ ಪಾಂಗಳದ ಸೌಜನ್ಯ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸೋಮವಾರ ಭೇಟಿ ನೀಡಿ ಸೌಜನ್ಯ ತಾಯಿ ಕುಸುಮಾವತಿ ಅವರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ, ಕುಸುಮಾವತಿ ಅವರು ತಮ್ಮ ವಿರುದ್ಧ ನಡೆಯುತ್ತಿರುವ ಅಪಪ್ರಚಾರಗಳ ಬಗ್ಗೆ ವಿಜಯೇಂದ್ರ ಅವರ ಗಮನ ಸೆಳೆದರು.

ಧರ್ಮಸ್ಥಳ ವಿರುದ್ಧದ ಅಪಪ್ರಚಾರ ಖಂಡಿಸಿ ಬಿಜೆಪಿ ವತಿಯಿಂದ ಸೋಮವಾರ ‘ಧರ್ಮಸ್ಥಳ ಚಲೋ’ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಸಮಾವೇಶದ ಬಳಿಕ ವಿಜಯೇಂದ್ರ ಹಾಗೂ ಇತರ ನಾಯಕರು ಸೌಜನ್ಯ ನಿವಾಸಕ್ಕೆ ಭೇಟಿ ನೀಡಿದರು. ಸೌಜನ್ಯ ಪರ ಹೋರಾಟದಲ್ಲಿ ಜತೆಗಿರುವುದಾಗಿ ಭರವಸೆ ನೀಡಿದರು. ಈ ವೇಳೆ ವಿಜಯೇಂದ್ರ ಮುಂದೆ, ‘ನನ್ನ ಮಗಳ ಸಾವಿಗೆ ಇನ್ನೂ ನ್ಯಾಯ ಸಿಕ್ಕಿಲ್ಲ’ ಎಂದು ತಾಯಿ ಕುಸುಮಾವತಿ ಕಣ್ಣೀರು ಹಾಕಿದರು.

ಬಳಿಕ ಮಾತನಾಡಿದ ವಿಜಯೇಂದ್ರ, ಸೌಜನ್ಯ ವಿಚಾರದ ಬಗ್ಗೆ ಬೇಸರವಿದೆ. ಈ ಪ್ರಕರಣದ ವಿರುದ್ಧ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದರೆ, ಅದರ ಸಂಪೂರ್ಣ ಖರ್ಚು- ವೆಚ್ಚಗಳ ಜವಾಬ್ದಾರಿಯನ್ನು ಬಿಜೆಪಿ ವಹಿಸಿಕೊಳ್ಳಲಿದೆ. ಜೊತೆಗೆ, ಕಾನೂನು ಹೋರಾಟಕ್ಕೆ ಅಗತ್ಯ ಸಹಕಾರವನ್ನು ನೀಡಲಿದೆ ಎಂದರು. ಸಂಸದ‌ ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಪಕ್ಷದ ಮುಖಂಡರು ವಿಜಯೇಂದ್ರಗೆ ಸಾಥ್‌ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!