ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಠಾಣೆ ಎದುರು ಬಿಜೆಪಿ ಪ್ರತಿಭಟನೆ: 43 ಮಂದಿ ವಿರುದ್ಧ ಎಫ್ಐಆರ್, ಆರ್ ಅಶೋಕ್ ಎ1 ಆರೋಪಿ!

Published : Jan 07, 2024, 07:16 AM IST
ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಠಾಣೆ ಎದುರು ಬಿಜೆಪಿ ಪ್ರತಿಭಟನೆ: 43 ಮಂದಿ ವಿರುದ್ಧ ಎಫ್ಐಆರ್, ಆರ್ ಅಶೋಕ್ ಎ1 ಆರೋಪಿ!

ಸಾರಾಂಶ

1992ರ ಅಯೋಧ್ಯೆ ರಾಮಮಂದಿರ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ ಪೂಜಾರಿ ಬಂಧನ ಖಂಡಿಸಿ ಜನವರಿ 3ರಂದು ನಗರದ ಶಹರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಸೇರಿದಂತೆ 43 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. 

ಹುಬ್ಬಳ್ಳಿ (ಜ.7): 1992ರ ಅಯೋಧ್ಯೆ ರಾಮಮಂದಿರ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ ಪೂಜಾರಿ ಬಂಧನ ಖಂಡಿಸಿ ಜನವರಿ 3ರಂದು ನಗರದ ಶಹರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಸೇರಿದಂತೆ 43 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. 

ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರು ಜನವರಿ 5ರಂದು ದೂರು ನೀಡಿದ್ದು ದೂರಿನಲ್ಲಿ ಪ್ರತಿಭಟನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಪದಗಳನ್ನು ಬಳಸಿ ಘೋಷಣೆ ಕೂಗಿದ್ದಲ್ಲದೆ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. 

ಇದು ನೋಡಿ ಸಾಮಾಜಿಕ ನ್ಯಾಯ; 31 ವರ್ಷದ ಹಿಂದಿನ ಕೇಸ್‌ಗೆ ಜೈಲು, ಪೊಲೀಸ್‌ ಸ್ಟೇಷನ್‌ ಸುಟ್ಟವರು ಅಮಾಯಕರು!

ಪ್ರತಿಭಟನೆ ಪ್ರಕರಣದಲ್ಲಿ ಆರ್ ಅಶೋಕ್ ಎ1 ಆರೋಪಿಯಾಗಿದ್ದು ಶಾಸಕರಾದ ಅರವಿಂದ ಬೆಲ್ಲ, ಮಹೇಶ್ ಟೆಂಗಿನಕಾಯಿ ಕ್ರಮವಾಗಿ ಎ2, ಎ3 ಆರೋಪಿಯಾಗಿದ್ದಾರೆ.

ಇನ್ನುಳಿದಂತೆ ಎಂ.ಆರ್‌. ಪಾಟೀಲ, ವಿಧಾನಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ್‌, ಪಾಲಿಕೆ ಸದಸ್ಯರಾದ ಸಂತೋಷ ಚವ್ಹಾಣ್‌, ಶಿವು ಮೆಣಸಿನಕಾಯಿ, ರೂಪಾ ಶೆಟ್ಟಿ, ಉಮೇಶಗೌಡ ಕೌಜಲಗಿ, ತಿಪ್ಪಣ್ಣ ಮಜ್ಜಗಿ ಸೇರಿದಂತೆ ಬಿಜೆಪಿಯ ಇತರ ಮುಖಂಡರ ಹಾಗೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.

ಕರಸೇವಕ ಶ್ರೀಕಾಂತ್ ಪೂಜಾರಿ ಜೈಲಿನಿಂದ ಬಿಡುಗಡೆ: ಬಿಜೆಪಿ, ಹಿಂದು ಸಂಘಟನೆಗಳಿಂದ ಭರ್ಜರಿ ಸ್ವಾಗತ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ