ಕಾರ್ಗಿಲ್ ಗೆದ್ದು ಸೋಲುಂಡಿತ್ತು : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭವಿಷ್ಯವೇನು?

Published : Feb 28, 2019, 02:11 PM IST
ಕಾರ್ಗಿಲ್ ಗೆದ್ದು  ಸೋಲುಂಡಿತ್ತು : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭವಿಷ್ಯವೇನು?

ಸಾರಾಂಶ

ಭಾರತ ಪಾಕ್ ನಡುವೆ ಯುದ್ಧದ ವಾತಾವರಣವಿದ್ದು, ಭಾರತ ನಡೆಸಿದ ವಾಯುದಾಳಿ ಬಿಜೆಪಿಗೆ ಲಾಭವಾಗಲಿದೆ ಎನ್ನುವ ಯಡಿಯೂರಪ್ಪ ಹೇಳಿಕೆಗೆ ಎಚ್.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ. 

ಹಾಸನ : ವಾಯು ದಾಳಿ ಬಳಿಕ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಲಾಭವಾಗಲಿದ್ದು, ರಾಜ್ಯದಲ್ಲಿ ಬಿಜೆಪಿ 22 ಸ್ಥಾನ ಪಡೆಯುವುದು ಖಚಿತ ಎಂದು ಹೇಳಿದ ಬಿ.ಎಸ್.ಯಡಿಯೂರಪ್ಪ ಹೇಳಿಕೆ ಸಂಬಂಧ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ. 

ಹಾಸನದಲ್ಲಿ ಮಾತನಾಡಿದ ಅವರು ಯಡಿಯೂರಪ್ಪ ಇಂತಹ ವಿಚಾರಗಳನ್ನು ಸ್ವಾರ್ಥಕ್ಕಾಗಿ ಹೇಳುತ್ತಿದ್ದಾರೆ. ಹಿಂದೆ ವಾಜಪೇಯಿ ಅವರ ಸರ್ಕಾರವಿದ್ದಾಗ ಕಾರ್ಗಿಲ್ ಯುದ್ಧ ಗೆದ್ದು ಚುನಾವಣೆಯಲ್ಲಿ ಸೋತರು. 

ಮಾತುಗಳಿಂದ ಜನರನ್ನು ಗೆಲ್ಲಲು ಆಗುವುದಿಲ್ಲ. ಇನ್ನೇನು ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಬಿಜೆಪಿಗೂ ಅದೇ ಸ್ಥಿತಿ ಆಗಲಿದೆ ಎಂದರು.

ಇನ್ನು ಪಾಕಿಸ್ತಾನ ನಿರಂತರವಾಗಿ ಭಾರತದ ಮೇಲೆ ದಾಳಿ ಮಾಡುತ್ತಿದೆ. ಆದರೆ ಪಾಕಿಗೂ ಕೂಡ ಸಹಾಯ ಮಾಡುವ ಹೊರ ಶಕ್ತಿಗಳಿವೆ ಎನ್ನುವುದು ಗಮನದಲ್ಲಿಟ್ಟುಕೊಳ್ಳಬೇಕು ಎಂದರು.

ತಮ್ಮ ಚುನಾವಣಾ ಸ್ಪರ್ಧೆ ಬಗ್ಗೆಯೂ ಪ್ರಸ್ತಾಪಿಸಿದ ಗೌಡರು, ಚುನಾವಣೆಯಲ್ಲಿ ನಿಲ್ಲುವುದು ದೊಡ್ಡ ವಿಚಾರವಲ್ಲ. ಹೊರಗಿದ್ದುಕೊಂಡೂ ರಾಜಕೀಯ ಮಾಡಬಹುದು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Kerala Bus crash: ಬೆಂಗಳೂರು-ಮೈಸೂರು ಹೆದ್ದಾರಿ ಬಳಿ ಭೀಕರ ಅಪಘಾತ: ಶೈನಿಂಗ್ ಬೋರ್ಡ್‌ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ!
Karnataka Latest News Live: ಮುದುಕ-ಮುದುಕಿಯಾದ ಅಮೂಲ್ಯ ಗೌಡ & ನಿರಂಜನ್; ರಿಷಿ ಸರ್ ಎಷ್ಟು ರೊಮ್ಯಾಂಟಿಕ್ ಅಲ್ಲವಾ?