
ಹುಬ್ಬಳ್ಳಿ (ನ.19): ಬಿಹಾರ ಚುನಾವಣೆಯಲ್ಲಿ ಬಿಜೆಪಿ ಮೋಸದಿಂದ ಗೆದ್ದಿದೆ ಎಂದು ಸಚಿವ ಸಂತೋಷ ಲಾಡ್ ಆರೋಪಿಸಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋಸದಿಂದ ಚುನಾವಣೆ ಗೆದ್ದ ಪ್ರಧಾನಿಯನ್ನು ನಾನು ಎಲ್ಲೂ ನೋಡೇ ಇಲ್ಲ, ದೇಶದಲ್ಲಿ ಬಾಂಬ್ ಬ್ಲಾಸ್ಟ್ ಆದಾಗ ಪ್ರಧಾನಿ ಭೂತಾನ್ ರಾಜನ ಹುಟ್ಟುಹಬ್ಬವನ್ನು ಮುಗಿಸಿ ಬಂದಿದ್ದಾರೆ. ದೆಹಲಿ ಸ್ಫೋಟ ಆದಾಗ ಪ್ರಧಾನಿ ವಾಪಾಸ್ ಬರಬಹುದಿತ್ತು ಆದರೆ ವಾಪಾಸ್ ಬರದೇ ಭೂತಾನ್ ಪ್ರಧಾನಿ ಹುಟ್ಟುಹಬ್ಬವೇ ಮುಖ್ಯವಾಗಿತ್ತು ಎಂದು ವಾಗ್ದಾಳಿ ನಡೆಸಿರು.
ಇಂದಿರಾಗಾಂಧಿ ಜನ್ಮದಿನಾಚರಣೆ:
ಇಡೀ ದೇಶದಲ್ಲಿ ಬಡವನಿಗೆ ಭೂಮಿ ಕೊಟ್ಟದ್ದು ಇಂದಿರಾಗಾಂಧಿ ಕೊಡುಗೆ, ಪಾಕಿಸ್ತಾನ ವಿಭಾಗ ಮಾಡಿ ಬಾಂಗ್ಲಾದೇಶ ಮಾಡಿದ್ದು ಇಂದಿರಾಗಾಂಧಿ, ಅವರನ್ನು ಅಟಲ್ ಬಿಹಾರಿ ವಾಜಪೇಯಿ ಐರನ್ ಲೇಡಿ ಎಂದು ಕರೆದಿದ್ದಾರೆ. ಅಂತವರ ಜನ್ಮದಿನವನ್ನು ಆಚರಣೆ ಮಾಡಲಾಗುತ್ತಿದೆ ಎಂದರು.
ಅಧಿಕಾರ ಬದಲಾವಣೆ ಹೈಕಮಾಂಡ್ ನಿರ್ಧಾರ:
ರಾಜ್ಯದಲ್ಲಿ ಅಧಿಕಾರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಹೈಕಮಾಂಡ್ ನಿರ್ಣಯ ತೆಗೆದುಕೊಳ್ಳುತ್ತದೆ. ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಹೋಗಿದ್ದಾರೆ. ಐದು ಪ್ರಮುಖ ಬೇಡಿಕೆಯನ್ನು ಕೇಂದ್ರ ಸರ್ಕಾರದ ಮುಂದೆ ಇಡಲಾಗಿದೆ. ಏನು ಆಗುತ್ತದೋ ಕಾದು ನೋಡೋಣ ಎಂದರು. ಇದೇ ವೇಳೆ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಈ ಭಾಗದ ಸಮಸ್ಯೆ ಬಗ್ಗೆ ಚರ್ಚೆ ಆಗಬೇಕು. ಆದಷ್ಟು ಈ ಭಾಗದ ಸಮಸ್ಯೆಗಳಿಗೆ ಪರಿಹಾರ ಕಂಡಿಕೊಳ್ಳಬೇಕು ಎಂದು ತಿಳಿಸಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ