
ಮಲ್ಲಿಕಾರ್ಜುನ ಹೊಸಮನಿ
ಜಮಖಂಡಿ(ನ.1): ಜಮಖಂಡಿ ಉಪ ಚುನಾವಣೆಯ ಬಿಜೆಪಿ ಪ್ರಚಾರ ಮೆರವಣಿಗೆಯಲ್ಲಿ ಪಕ್ಷದ ಕಾರ್ಯಕರ್ತರು ಹಣದ ಪ್ರದರ್ಶನ ಮಾಡಿರುವ ಘಟನೆ ನಡೆದಿದೆ. ಮೆರವಣಿಗೆಯಲ್ಲಿ ಕೈಯಲ್ಲಿ ಹಣ ಹಿಡಿದು ಕಾರ್ಯಕರ್ತನೋರ್ವ ಭಜ೯ರಿ ಸ್ಟೆಪ್ ಹಾಕುತ್ತಿದ್ದ ದೃಶ್ಯ ಕಂಡು ಬಂದಿದೆ.
ದಾರಿಯುದ್ದಕ್ಕೂ ಕಾರ್ಯಕರ್ತ ಹಣ ತೋರಿಸುತ್ತಾ ಡ್ಯಾನ್ಸ್ ಮಾಡಿದ್ದು, ನಬಿಜೆಪಿಗೆ ತೀವ್ರ ಮುಜುಗರ ಎದುರಾಗಿದೆ. ಬಿಜೆಪಿ ಭಾವುಟ ಹಿಡಿದು ಕುಣಿಯುತ್ತಿದ್ದ ಕಾರ್ಯಕರ್ತ, ಜೊತೆಗೆ ಹಣವನ್ನೂ ಪ್ರದರ್ಶನ ಮಾಡಿದ್ದಾನೆ.
"
ನಗರದ ಹಳೇ ತಹಶೀಲ್ದಾರ ಕಚೇರಿಯಿಂದ ಬಸವ ಭವನದವರೆಗೆ ನಡೆದ ಮೆರವಣಿಗೆಯಲ್ಲಿ ಈ ಘಟನೆ ನಡೆದಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್, ಪ್ರಹ್ಲಾದ ಜೋಷಿ ನೇತೃತ್ವದಲ್ಲಿ ಈ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ