
ಬೆಂಗಳೂರು (ಜೂ.20): ನಮ್ಮ ಮೆಟ್ರೋ(Namma Metro) ಮೂರನೇ ಹಂತದ ಹೊಸಹಳ್ಳಿ ನಿಲ್ದಾಣದಿಂದ ಕಡಬಗೆರೆ ನಿಲ್ದಾಣದವರೆಗಿನ ಮಾರ್ಗ ನಿರ್ಮಾಣಕ್ಕಾಗಿ 3627 ಮರಗಳ ತೆರವಿಗೆ ಬಿಎಂಆರ್ಸಿಎಲ್ನಿಂದ ಜಿಬಿಎಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಹೊಸಹಳ್ಳಿ ಮೆಟ್ರೋ ನಿಲ್ದಾಣದಿಂದ ಕಡಬಗೆರೆ ಮೆಟ್ರೋ ನಿಲ್ದಾಣದವರೆಗಿನ 12.50 ಕಿಮೀ ಉದ್ದದ ಎಲಿವೇಟೆಡ್ ಮಾರ್ಗ ನಿರ್ಮಾಣಕ್ಕೆ ಬಿಎಂಆರ್ಸಿಎಲ್ ಯೋಜನೆ ರೂಪಿಸಿದೆ. ಈ ಮಾರ್ಗದಲ್ಲಿ ಒಟ್ಟು 9 ಎಲಿವೇಟೆಡ್ ಮೆಟ್ರೋ ನಿಲ್ದಾಣಗಳು ನಿರ್ಮಾಣವಾಗಲಿದೆ. ಅದರ ಜತೆಗೆ ವಯಾಡಕ್ಟ್, ಪೋರ್ಟಲ್ ಪಿಯರ್ಸ್, ಸರ್ವೀಸ್ ರಸ್ತೆ, ಯುಟಿಲಿಟಿ ಡೈವರ್ಷನ್ ಹಾಗೂ ರಸ್ತೆ ವಿಸ್ತರಣೆ ಕಾಮಗಾರಿಗಳನ್ನೂ ಕೈಗೊಳ್ಳಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಬರುವ ವಿವಿಧ ಜಾತಿಯ 2426 ಮರಗಳು ಹಾಗೂ 1201 ಅಡಕೆ ಮರಗಳ ತೆರವಿಗೆ ಅನುಮತಿ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದೆ.
ಹೊಸಹಳ್ಳಿ, ಕೆಎಚ್ಬಿ ಕಾಲೋನಿ, ಕಾಮಾಕ್ಷಿಪಾಳ್ಯ, ಸುಮನಹಳ್ಳಿ ಕ್ರಾಸ್, ಸುಂಕದಕಟ್ಟೆ, ಹೇರೋಹಳ್ಳಿ, ಬ್ಯಾಡರಹಳ್ಳಿ, ಕಾಮತ್ ಲೇಔಟ್ ಹಾಗೂ ಕಡಬಗೆರೆ ಪ್ರದೇಶಗಳ ಮರಗಳನ್ನು ತೆರವು ಮಾಡಲು ಗುರುತಿಸಲಾಗಿದೆ.
ಬಿಎಂಆರ್ಸಿಎಲ್ ಪ್ರಸ್ತಾವನೆಗೆ ಸಂಬಂಧಿಸಿದಂತೆ ಇದೀಗ ಜಿಬಿಎ ಜೂ.17ರಂದು ಸಾರ್ವಜನಿಕ ಆಕ್ಷೇಪಣೆ ಆಹ್ವಾನಿಸಿದೆ. ಮುಂದಿನ 10 ದಿನಗಳಲ್ಲಿ ಸಾರ್ವಜನಿಕರು ಆಕ್ಷೇಪಣೆ ಮತ್ತು ಸಲಹೆ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅದಾದ ನಂತರ ಮರಗಳ ತೆರವಿಗೆ ಸಂಬಂಧಿಸಿದಂತೆ ಜನರ ಅಭಿಪ್ರಾಯದಂತೆ ಜಿಬಿಎ ಕ್ರಮ ಕೈಗೊಳ್ಳುವುದಾಗಿ ತಿಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ