ಗುರುವಾರ ಬಸ್ ಸಂಚಾರ ಇರುತ್ತೋ? ಇಲ್ವೋ? ಸ್ಪಷ್ಟನೆ ಕೊಟ್ಟ ಕೋಡಿಹಳ್ಳಿ

Published : Apr 07, 2021, 06:59 PM ISTUpdated : Apr 07, 2021, 07:04 PM IST
ಗುರುವಾರ ಬಸ್ ಸಂಚಾರ ಇರುತ್ತೋ? ಇಲ್ವೋ? ಸ್ಪಷ್ಟನೆ ಕೊಟ್ಟ ಕೋಡಿಹಳ್ಳಿ

ಸಾರಾಂಶ

ಕರ್ನಾಟಕ ರಾಜ್ಯ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ಯಾವುದೇ ಬಸ್‌ಗಳು ರಸ್ತೆಗಿಳಿದಿಲ್ಲ. ಈ ಮುಷ್ಕರ ಮುಂದುವರೆಯುವ ಬಗ್ಗೆ ಕೋಡಿಳ್ಳಿ ಚಂದ್ರಶೇಖರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಬೆಂಗಳೂರು, (ಏ.07): ವಿವಿಧ ಬೇಡಿಕೆ ಈಡೇರಿಸುವಂತೆ ರಾಜ್ಯ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರಿಂದಾಗಿ ಪ್ರಯಾಣಿಕರಿಗೆ ಭಾರೀ ತೊಂದರೆಯಾಗಿದೆ.

ಈ ಮುಷ್ಕರ ನಾಳೆಯೂ (ಏ.08) ಮುಂದುವರೆಯುತ್ತಿದ್ದು, ಬಸ್ ಗಳು ರಸ್ತೆಗೆ ಇಳಿಯುವುದಿಲ್ಲ ಎಂದು ಇಂದು (ಬುಧವಾರ) ರಾಜ್ಯ ರಸ್ತೆ ಸಾರಿಗೆ ನೌಕರರ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸ್ಪಷ್ಟಪಡಿಸಿದ್ದಾರೆ.

'ಮಠ-ಮಂದಿರ, ಅಭಿವೃದ್ಧಿ ನಿಗಮಗಳಿಗೆ ಕೊಡಲು ಹಣವಿದೆ, ಸಾರಿಗೆ ನೌಕರರಿಗೆ ಹಣವಿಲ್ಲವೇ'? 

ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ನಾವು ಸಿದ್ಧರಿದ್ದೇವೆ. ಸರ್ಕಾರವು ಕೋವಿಡ್ ನೆಪ ಹೇಳಿ ಸಂಬಳ ಕಡಿಮೆ ನೀಡುತ್ತಿದೆ. ಮಠ, ಮಂದಿರಗಳಿಗೆ ಹಣ ನೀಡಲು ಎಲ್ಲಿಂದ ಬರುತ್ತದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರಕ್ಕೆ ಪ್ರಶ್ನೆ ಮಾಡಿದರು.

ರಾಜ್ಯ ಸರ್ಕಾರ ಈ ತಾರತಮ್ಯ ನೀತಿಯನ್ನು ಬಿಡಬೇಕು. 6ನೇ ವೇತನ ಆಯೋಗದಂತೆ ವೇತನ ನೀಡಬೇಕು. ಇದು ನಮ್ಮ ಮುಖ್ಯ ಬೇಡಿಕೆ. ಎಸ್ಮಾ ಜಾರಿ ಮಾಡುವ ಅನಿವಾರ್ಯತೆ ಸೃಷ್ಟಿಯಾಗಿಲ್ಲ ಎಂದು ಹೇಳಿದ್ದಾರೆ.

ಇನ್ನು ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂದು ಸಾರಿಗೆ ನೌಕರರ ಪರ ಹೋರಾಟಗಾರರು ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದಾರೆ.

ಸಾರಿಗೆ ನೌಕರರ ಮುಷ್ಕರದಿಂದಾಗಿ ಸರ್ಕಾರ ಪರ್ಯಾಯ ವ್ಯವಸ್ಥೆಗಳನ್ನು ಮಾಡಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಖಾಸಗಿ ಬಸ್ಸುಗಳ ಓಡಾಟಕ್ಕೆ ಅವಕಾಶ ಮಾಡಿಕೊಟ್ಟಿದೆ. ಅಲ್ಲದೇ, ರಾಜ್ಯವ್ಯಾಪಿ ಹೆಚ್ಚುವರಿ ರೈಲುಗಳ ವ್ಯವಸ್ಥೆಯನ್ನು ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!