
ಬೆಂಗಳೂರು (ಏ.25): ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನದ ಏ.26ರಂದು ನಡೆಯುವ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ಗಳನ್ನು ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ತುಮಕೂರು, ಚಿತ್ರದುರ್ಗ, ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಗಳಿಗೆ ಇಂದು ರಾತ್ರಿ ವೇಳೆ(ಏ.25) 575 ಹಾಗೂ ನಾಳೆ (ಏ.26) ಬೆಳಗ್ಗೆಯಿಂದ ರಾತ್ರಿವರೆಗೆ 465 ಹೆಚ್ಚುವರಿ ಬಿಎಂಟಿಸಿ ಬಸ್ಗಳು ಸಂಚಾರ ಮಾಡಲಿವೆ ಎಂದು ಬಿಎಂಟಿಸಿ ತಿಳಿಸಿದೆ.
ಲೋಕಸಭಾ ಚುನಾವಣೆಯ ಕರ್ನಾಟಕದ ಮೊದಲ ಹಂತದ 14 ಜಿಲ್ಲೆಗಳಲ್ಲಿನ ಬೆಂಗಳೂರಿನಲ್ಲಿರುವ ಮತದಾರರು ತಮ್ಮ ಊರುಗಳಿಗೆ ತೆರಳಲು ಅನುಕೂಲ ಆಗುವಂತೆ ಹೆಚ್ಚುವರಿಯಾಗಿ ಬಿಎಂಟಿಸಿ ಬಸ್ಗಳ ಸೇವೆಯನ್ನು ನೀಡಲಾಗುತ್ತಿದೆ. ಕೆಎಸ್ಆರ್ಟಿಸಿ ಬಸ್ಗಳು ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್ಗಳ ಸಂಚಾರ ಮಾಡಲಾಗುತ್ತದೆ. ಏ.25ರಂದು 575 ಹಾಗೂ ಏ.26ರಮದು 465 ಬಿಎಂಟಿಸಿ ಬಸ್ಗಳು ತನ್ನ ವ್ಯಾಪ್ತಿಯನ್ನು ಬಿಟ್ಟು ಹೊರ ಜಿಲ್ಲೆಗಳ ಕೆಎಸ್ಆರ್ಟಿಸಿ ಬಸ್ ಸಂಚರಿಸುವ ವ್ಯಾಪ್ತಿಗೆ ಸಂಚಾರ ಸೇವೆಯನ್ನು ನೀಡಲಾಗುತ್ತದೆ. ಇನ್ನು ಏ.27ರಂದು ಮೈಸೂರು ನಗರಕ್ಕೆ ಮಾತ್ರ ಹೆಚ್ಚುವರಿಯಾಗಿ 40 ಬಿಎಂಟಿಸಿ ಬಸ್ಗಳು ಸಂಚಾರ ಮಾಡಲಿವೆ ಎಂದು ಸಾರಿಗೆ ಸಂಸ್ಥೆಯು ಮಾಹಿತಿ ನೀಡಿದೆ.
ಬೆಂಗಳೂರು ಮತದಾರರಿಗೆ ಗುಡ್ ನ್ಯೂಸ್: ಏ.26ರಂದು ನಮ್ಮ ಮೆಟ್ರೋ ಸಂಚಾರದ ಅವಧಿ ವಿಸ್ತರಿಸದ ಬಿಎಂಆರ್ಸಿಎಲ್
ಎಲ್ಲೆಲ್ಲಿ ವಿಶೇಷ ಬಸ್ ಸೇವೆ?
ಬಸ್ಗಳು ಎಲ್ಲಿಂದ ಹೊರಡಲಿವೆ?
- ಮೆಜೆಸ್ಟಿಕ್ ಕೆಂಪೇಗೌಡ ಬಸ್ ನಿಲ್ದಾಣ
- ಜಾಲಹಳ್ಳಿ ಕ್ರಾಸ್
- ಟಿನ್ ಪ್ಯಾಕ್ಟರಿ
- ಮೈಸೂರು ರೋಡ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣ (ಸ್ಯಾಟಲೈಟ್)
- ಕಲಾಸಿಪಾಳ್ಯ ಬಸ್ ನಿಲ್ದಾಣ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ