
ಬೆಂಗಳೂರು (ಆ.22): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾರ್ವಜನಿಕ ಸಾರಿಗೆಗಳನ್ನು ಬಳಸುವ ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಬಿಎಂಟಿಸಿ (ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ) ತನ್ನ ಚಾಲಕರಿಗೆ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ಈ ನಿಯಮಗಳ ಪ್ರಕಾರ, ನಗರದಲ್ಲಿ 2 ಬಾರಿ ಅಪಘಾತಕ್ಕೆ ಕಾರಣರಾದ ಚಾಲಕರನ್ನು ಕೆಲಸದಿಂದ ವಜಾ ಮಾಡಲಾಗುತ್ತದೆ ಮತ್ತು ಚಾಲನೆ ಮಾಡುವಾಗ ಮೊಬೈಲ್ ಬಳಸಿದರೆ ಕೂಡಲೇ ಅಮಾನತು ಮಾಡಲಾಗುತ್ತದೆ ಎಂದು ಆದೇಶ ಹೊರಡಿಸಿದೆ.
ಅಪಘಾತಗಳಿಗೆ ಹೊಸ ಶಿಕ್ಷಾ ಕ್ರಮ:
ಬೆಂಗಳೂರಿನಲ್ಲಿ ಅಪಘಾತಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಬಿಎಂಟಿಸಿ ಚಾಲಕರಿಗೆ ಸೋಮವಾರದಿಂದ ವಿಶೇಷ ತರಬೇತಿ ನೀಡಲಾಗುತ್ತದೆ. ಈ ತರಬೇತಿಯಲ್ಲಿ ಯೋಗ ಮತ್ತು ಅಪಘಾತಗಳನ್ನು ತಡೆಯುವ ಬಗ್ಗೆ ಪರಿಣತರಿಂದ ಮಾರ್ಗದರ್ಶನ ನೀಡಲಾಗುತ್ತದೆ. ಅಲ್ಲದೆ, ಮದ್ಯಪಾನ ಮಾಡಿ ಬಸ್ ಚಲಾಯಿಸುವುದು ಮತ್ತು ಟಿಕೆಟ್ ನೀಡದೆ ಸಿಕ್ಕಿಬೀಳುವುದು ಮುಂತಾದ ಕರ್ತವ್ಯ ಲೋಪಗಳಿಗೂ ಕಠಿಣ ಅಮಾನತು ಕ್ರಮ ಜರುಗಿಸಲಾಗುವುದು ಎಂದು ಬಿಎಂಟಿಸಿ ಸ್ಪಷ್ಟಪಡಿಸಿದೆ. ಈ ಹೊಸ ನಿಯಮಗಳು ರಸ್ತೆ ಸುರಕ್ಷತೆ ಮತ್ತು ಚಾಲಕರ ಜವಾಬ್ದಾರಿಯನ್ನು ಹೆಚ್ಚಿಸುವ ಗುರಿ ಹೊಂದಿವೆ.
ಇನ್ನು ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಲ್ಲಿ ದಿನಕ್ಕೊಬ್ಬರಂತೆ ಪಕ್ಕದಲ್ಲಿ ಬರುವ ವಾಹನ ಸವಾರರು ಹಾಗೂ ಪ್ರಯಾಣಿಕರನ್ನು ಬಿಎಂಟಿಸಿ ಬಸ್ಗಳು ಬಲಿ ಪಡೆದಿದ್ದವು. ಕಳೆದ 15 ದಿನಗಳಲ್ಲಿ ನಾಲ್ವರ ಮೇಲೆ ಬಿಎಂಟಿಸಿ ಬಸ್ ಹರಿದು ಪ್ರಾಣ ಕಸಿದಿವೆ. ಈ ಹಿನ್ನೆಲೆಯಲ್ಲಿ ಬಿಎಂಟಿಸಿ ಚಾಲಕರ ಮೇಲೆ ಕಠಿಣ ಕ್ರಮ ಕೈಗೊಳ್ಳಲಲು ಮುಂದಾಗಿದೆ. ಮೂರು ಪ್ರಕರಣಗಳಲ್ಲಿ ಬೈಕ್ ಸವಾರರು ಕೆಳಗೆ ಬಿದ್ದಾಕ್ಷಣ ಅವರ ಮೇಲೆ ಬಿಎಂಟಿಸಿ ಬಸ್ ಹರಿದು ಸಾವನ್ನಪ್ಪಿದರೆ, ಮತ್ತೊಂದು ಪ್ರಕರಣದಲ್ಲಿ ಬಿಎಂಟಿಸಿ ಬಸ್ಗೆ ಪ್ರಯಾಣಿಕ ಹತ್ತುವಾಗ ಬಾಗಿಲು ಮುಚ್ಚಿದ್ದು, ನಿಯಂತ್ರಣ ಸಿಗದ ಪ್ರಯಾಣಿಕನ ಮೇಲೆ ಬಸ್ ಹತ್ತಿ ಸಾವು ಸಂಭವಿಸಿತ್ತು. ಈ ಘಟನೆ ಜಯನಗರದಲ್ಲಿ ನಡೆದಿದ್ದು, ಸಂಬಂಧಿತ ಬಸ್ ಚಾಲಕನನ್ನು ಸೇವೆಯಿಂದ ವಜಾ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ