ಮೆಟ್ರೋ ನಿಲ್ದಾಣದಲ್ಲಿ ಹೀಗೆ ಮಾಡಿದ್ರೆ ನಿಮಗೆ ಬಸ್ ಬರುವ ಸ್ಥಳ, ಸಮಯ ಮಾಹಿತಿ ಸಿಗುತ್ತೆ! ಏನಿದು BMTC Feeder?

Published : Feb 25, 2024, 06:08 AM ISTUpdated : Feb 25, 2024, 06:10 AM IST
ಮೆಟ್ರೋ ನಿಲ್ದಾಣದಲ್ಲಿ ಹೀಗೆ ಮಾಡಿದ್ರೆ ನಿಮಗೆ ಬಸ್ ಬರುವ ಸ್ಥಳ, ಸಮಯ ಮಾಹಿತಿ ಸಿಗುತ್ತೆ! ಏನಿದು BMTC Feeder?

ಸಾರಾಂಶ

ಮೆಟ್ರೋ ರೈಲು ನಿಲ್ದಾಣಗಳಲ್ಲಿ ಬಿಎಂಟಿಸಿ ಬಸ್‌ ಫೀಡರ್‌ ಸೇವೆ ಕುರಿತಂತೆ ಮಾಹಿತಿ ಪಡೆಯಲು ಹೊಸ ವಿಧಾನ ಅನುಸರಿಸಲಾಗಿದೆ. ಮೆಟ್ರೋ ನಿಲ್ದಾಣಗಳಲ್ಲಿ ಕ್ಯೂಆರ್‌ ಕೋಡ್‌ ಅಳವಡಿಸಲಾಗಿದ್ದು, ಅದನ್ನು ಮೊಬೈಲ್‌ ಮೂಲಕ ಸ್ಕ್ಯಾನ್‌ ಮಾಡಿದರೆ ಬಿಎಂಟಿಸಿ ಫೀಡರ್‌ ಬಸ್‌ ಸೇವೆಗಳ ಮಾಹಿತಿ ದೊರೆಯುವಂತೆ ಮಾಡಲಾಗಿದೆ.

ಬೆಂಗಳೂರು (ಫೆ.25): ಮೆಟ್ರೋ ರೈಲು ನಿಲ್ದಾಣಗಳಲ್ಲಿ ಬಿಎಂಟಿಸಿ ಬಸ್‌ ಫೀಡರ್‌ ಸೇವೆ ಕುರಿತಂತೆ ಮಾಹಿತಿ ಪಡೆಯಲು ಹೊಸ ವಿಧಾನ ಅನುಸರಿಸಲಾಗಿದೆ. ಮೆಟ್ರೋ ನಿಲ್ದಾಣಗಳಲ್ಲಿ ಕ್ಯೂಆರ್‌ ಕೋಡ್‌ ಅಳವಡಿಸಲಾಗಿದ್ದು, ಅದನ್ನು ಮೊಬೈಲ್‌ ಮೂಲಕ ಸ್ಕ್ಯಾನ್‌ ಮಾಡಿದರೆ ಬಿಎಂಟಿಸಿ ಫೀಡರ್‌ ಬಸ್‌ ಸೇವೆಗಳ ಮಾಹಿತಿ ದೊರೆಯುವಂತೆ ಮಾಡಲಾಗಿದೆ.

ಸದ್ಯ ಬಿಎಂಟಿಸಿಯು 66 ಮೆಟ್ರೋ ನಿಲ್ದಾಣಗಳ ಪೈಕಿ 43 ಮೆಟ್ರೋ ನಿಲ್ದಾಣಗಳಿಂದ ಒಟ್ಟು 151 ಬಸ್‌ಗಳ ಮೂಲಕ ಮೆಟ್ರೋ ಫೀಡರ್‌ ಸೇವೆ ನೀಡುತ್ತಿದೆ. ಅದನ್ನು ಶೀಘ್ರದಲ್ಲಿ 300ಕ್ಕೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಅದಕ್ಕಾಗಿ ಯಾವೆಲ್ಲ ನಿಲ್ದಾಣಗಳಿಂದ ಯಾವ ಮಾರ್ಗದಲ್ಲಿ ಬಸ್‌ಗಳ ಅವಶ್ಯಕತೆಯಿದೆ ಎಂಬ ಬಗ್ಗೆ ಚರ್ಚಿಸಲಾಗುತ್ತಿದೆ.

ಬೆಂಗಳೂರು ಜನತೆಗೆ ಗುಡ್‌ನ್ಯೂಸ್ ಕೊಟ್ಟ ಬಿಎಂಆರ್‌ಸಿಎಲ್: ಮೆಜೆಸ್ಟಿಕ್‌ನಿಂದ ಬೆಳಗ್ಗೆ 5ಕ್ಕೆ ಮೆಟ್ರೋ ಸೇವೆ ಆರಂಭ

ಅದಕ್ಕೂ ಮುನ್ನ ಮೆಟ್ರೋ ಫೀಡರ್‌ ಬಸ್‌ ಸೇವೆಗಳ ಕುರಿತು ಪ್ರಯಾಣಿಕರಿಗೆ ಸಮರ್ಪಕ ಮಾಹಿತಿ ದೊರೆಯುವಂತೆ ಮಾಡಲಾಗಿದೆ. ಅದರಂತೆ 40 ಮೆಟ್ರೋ ನಿಲ್ದಾಣಗಳಲ್ಲಿ ಕ್ಯೂಆರ್‌ ಕೋಡ್‌ ಅಳವಡಿಸಲಾಗಿದೆ. 

ಪ್ರಯಾಣಿಕರು ತಮ್ಮ ಮೊಬೈಲ್‌ನಲ್ಲಿ ಕೋಡ್‌ ಸ್ಕ್ಯಾನ್‌ ಮಾಡಿದರೆ, ಆ ನಿಲ್ದಾಣದಿಂದ ಯಾವೆಲ್ಲ ಮಾರ್ಗದಲ್ಲಿ ಬಿಎಂಟಿಸಿ ಫೀಡರ್‌ ಬಸ್‌ ಸೇವೆ ನೀಡಲಾಗುತ್ತಿದೆ ಎಂಬ ಬಗ್ಗೆ ಮಾಹಿತಿ ದೊರೆಯಲಿದೆ. ಅಲ್ಲದೆ, ಬಸ್‌ ಎಷ್ಟು ಸಮಯಕ್ಕೆ ಹೊರಡಲಿದೆ ಮತ್ತು ಯಾವ ಸಮಯದಲ್ಲಿ ನಿಗದಿತ ನಿಲ್ದಾಣಕ್ಕೆ ಹೋಗಲಿದೆ ಎಂಬುದನ್ನೂ ತಿಳಿಸಲಾಗುತ್ತದೆ.

ಬೆಂಗಳೂರು ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಬಂತು ಡ್ರೈವರ್ ರಹಿತ ರೈಲು: ಹೆಬ್ಬಗೋಡಿಯಲ್ಲಿ ಅನ್‌ಲೋಡಿಂಗ್!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌