
ಬೆಂಗಳೂರು(ಆ.13): ಲಾಕ್ಡೌನ್ ಅವಧಿಯಲ್ಲಿ ಸೇವೆ ಸಲ್ಲಿಸದಿದ್ದರೂ ಎಲ್ಲ ಸಿಬ್ಬಂದಿಗೆ ವೇತನವನ್ನು ನೀಡಲು ಬಿಎಂಟಿಸಿ ನಿರ್ಧರಿಸಿದೆ.
ಸೋಂಕಿನ ನಿಯಂತ್ರಣಕ್ಕಾಗಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯನ್ನು ಜು.14ರಿಂದ 22ರ ವರೆಗೆ ಲಾಕ್ಡೌನ್ ಮಾಡಿದ ಪರಿಣಾಮ ಬಿಎಂಟಿಸಿ ಸೇರಿ ಎಲ್ಲ ರೀತಿಯ ಸಾರಿಗೆ ಸೇವೆಗಳು ಸ್ಥಗಿತಗೊಂಡಿದ್ದವು. ಹೀಗಾಗಿ ಬಿಎಂಟಿಸಿಗೆ ಕಚೇರಿ ಸಿಬ್ಬಂದಿ ಹೊರತುಪಡಿಸಿ ಚಾಲಕ, ನಿರ್ವಾಹಕ ಸೇರಿ ಇತರರು ಕರ್ತವ್ಯಕ್ಕೆ ಹಾಜರಾಗಿರಲಿಲ್ಲ.
ಬಸ್ನಲ್ಲಿ ಸೈಕಲ್ನೊಂದಿಗೆ ಪ್ರಯಾಣಿಸಿ: ಏನಿದು ಹೊಸ ಯೋಜನೆ?
ಕೆಲಸ ಮಾಡದಿದ್ದರೂ ವೇತನ ನೀಡುವ ಕುರಿತಂತೆ ಅಧಿಕಾರಿಗಳು ಚರ್ಚಿಸಿದ ನಂತರ ಇದೀಗ ಕರ್ತವ್ಯಕ್ಕೆ ಹಾಜರಾಗದಿದ್ದರೂ, ನೌಕರರಿಗೆ ವೇತನ ನೀಡಲು ಬಿಎಂಟಿಸಿ ಮುಂದಾಗಿದೆ. ಆದರೆ, ಲಾಕ್ಡೌನ್ ಅವಧಿಯಲ್ಲಿ ರಜೆಗೆ ಅರ್ಜಿ ಸಲ್ಲಿಸಿದ್ದವರಿಗೆ ರಜೆ ಮಂಜೂರು ಮಾಡುವುದಾಗಿಯೂ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ