BMTC, KSRTC ನೌಕರರ ಉಪವಾಸ ಸತ್ಯಾಗ್ರಹ: ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ!

Published : Jan 27, 2020, 08:46 AM ISTUpdated : Jan 27, 2020, 10:29 AM IST
BMTC, KSRTC ನೌಕರರ ಉಪವಾಸ ಸತ್ಯಾಗ್ರಹ: ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ!

ಸಾರಾಂಶ

ಬೆಂಗಳೂರು ಪ್ರಯಾಣಿಕರೇ ಎಚ್ಚರ ಎಚ್ಚರ..!| ಇವತ್ತು BMTC, KSRTC ರಸ್ತೆಗಿಳಿಯೋದು ಅನುಮಾನ| ಫ್ರೀಡಂಪಾರ್ಕ್ ನಲ್ಲಿ ಸಾರಿಗೆ ನೌಕರರ ಉಪವಾಸ ಸತ್ಯಾಗ್ರಹ| ಬೆಳಗ್ಗೆ 9 ರಿಂದ ಸಂಜೆ 5 ರ ತನಕ ಉಪವಾಸ ಸತ್ಯಾಗ್ರಹ 

ಬೆಂಗಳೂರು[ಜ.27]: ನಿಗಮ ಬದಲು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ಇಂದು ಸೋಮವಾರ ಫ್ರೀಡಂಪಾರ್ಕ್ ನಲ್ಲಿ ಸಾರಿಗೆ ನೌಕರರ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಹೀಗಾಗಿ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಗಳಿವೆ.

ಹೌದು ಬಜೆಟ್ ನಲ್ಲಿ ತಮ್ಮನ್ನು ನಿಗಮ ಬದಲಾಗಿ, ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ಬೆಳಗ್ಗೆ 9 ರಿಂದ ಸಂಜೆ 5 ರ ತನಕ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಈ ಧರಣಿ ನಡೆಸಲಾಗುತ್ತಿದೆ. BMTC ಹಾಗೂ KSRTCಯ ಸುಮಾರು 8 ಸಾವಿರ ನೌಕರರು ಹಾಗೂ ಕುಟುಂಬಸ್ಥರು ಈ ಸತ್ಯಾಗ್ರಹದಲ್ಲಿ ಭಾಗಿ ಸಾಧ್ಯತೆ ಇದೆ.

"

ಗಾರ್ಮೆಂಟ್ಸ್‌ ಮಹಿಳಾ ಕಾರ್ಮಿಕರಿಗೆ ಉಚಿತ ಬಸ್‌ ಪಾಸ್‌ ?

ಪ್ರಯಾಣಿಕರಿಗೆ ಸಮಸ್ಯೆಯಾಗಲ್ಲ

ಈ ಧರಣಿಯಿಂದ ಜನ ಸಾಮಾನ್ಯರಿಗೆ ಯಾವುದೇ ಸಮಸ್ಯೆಯಾಗಲ್ಲ ಎನ್ನಲಾಗಿದೆ. ಎಂದಿನಂತೆ ಬಸ್ ಗಳು ರಸ್ತೆಗಿಳಿಯಲಿವೆ. ಕೇವಲ ವಾರದ ರಜೆ, ಪಾಳಿ ಮುಗಿದ ಬಿಎಂಟಿಸಿ ನೌಕರರು ಭಾಗಿಯಾಗುತ್ತಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. 

ಅಂದು ಬಿಎಂಟಿಸಿ ಪಾಸ್, ಇಂದು ಆಡಿಗೆ ಬಾಸ್.. ಇದು ರಕ್ಷ್ ಪ್ರಯಾಣ

ಹೀಗಿದ್ದರೂ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಗಳಿದ್ದು, ಎಂದಿಗಿಂತ ಕಡಿಮೆ ಸಂಖ್ಯೆಯಲ್ಲಿ ಬಸ್‌ಗಳು ಓಡಾಡಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್