ಬೆಂಗಳೂರು: ಬಿಎಂಟಿಸಿ ಗುಜರಿ ಬಸ್ ಈಗ ನೌಕರರ ಪಾಲಿಗೆ ಭೋಜನ ಬಂಡಿ!

Published : Feb 23, 2024, 05:20 AM IST
ಬೆಂಗಳೂರು: ಬಿಎಂಟಿಸಿ ಗುಜರಿ ಬಸ್ ಈಗ ನೌಕರರ ಪಾಲಿಗೆ ಭೋಜನ ಬಂಡಿ!

ಸಾರಾಂಶ

ಕ್ಯಾಂಟೀನ್‌ಗಳಿಲ್ಲದ ಬಿಎಂಟಿಸಿ ಬಸ್‌ ನಿಲ್ದಾಣ ಮತ್ತು ಘಟಕಗಳಲ್ಲಿ ನಿಗಮದ ಸಿಬ್ಬಂದಿ ಕುಳಿತು ಅರಾಮಾಗಿ ಊಟ ಮಾಡುವ ಸಲುವಾಗಿ ಗುಜರಿಗೆ ಹಾಕಬೇಕಿದ್ದ ಬಸ್ಸನ್ನು ಊಟದ ಹಾಲ್‌ ಆಗಿ ಪರಿವರ್ತಿಸಿ ಶೀಘ್ರದಲ್ಲಿ ಸೇವೆಗೆ ನೀಡಲು ಉದ್ದೇಶಿಸಲಾಗಿದೆ.

ಬೆಂಗಳೂರು (ಫೆ.23) :  ಕ್ಯಾಂಟೀನ್‌ಗಳಿಲ್ಲದ ಬಿಎಂಟಿಸಿ ಬಸ್‌ ನಿಲ್ದಾಣ ಮತ್ತು ಘಟಕಗಳಲ್ಲಿ ನಿಗಮದ ಸಿಬ್ಬಂದಿ ಕುಳಿತು ಅರಾಮಾಗಿ ಊಟ ಮಾಡುವ ಸಲುವಾಗಿ ಗುಜರಿಗೆ ಹಾಕಬೇಕಿದ್ದ ಬಸ್ಸನ್ನು ಊಟದ ಹಾಲ್‌ ಆಗಿ ಪರಿವರ್ತಿಸಿ ಶೀಘ್ರದಲ್ಲಿ ಸೇವೆಗೆ ನೀಡಲು ಉದ್ದೇಶಿಸಲಾಗಿದೆ.

ಬಿಎಂಟಿಸಿಯ ಉತ್ತರ ವಲಯದ ಕಾರ್ಯಾಗಾರ 4ರಲ್ಲಿನ ಲೇಲ್ಯಾಂಡ್‌ ಉಗ್ರಾಣ ಬಸ್‌ 10.64 ಲಕ್ಷ ಕಿ.ಮೀ. ಕ್ರಮಿಸಿದ್ದು, ಗುಜರಿಗೆ ಹಾಕಬೇಕಿತ್ತು. ಆದರೆ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಆರ್‌.ರಾಮಚಂದ್ರನ್ ಅವರ ನಿರ್ದೇಶನದ ಮೇರೆಗೆ ಬಸ್ಸನ್ನು ಕಾರ್ಯಾಗಾರದ ತಾಂತ್ರಿಕ ಸಿಬ್ಬಂದಿ, ಬಸ್ಸನ್ನು ಊಟದ ಹಾಲ್‌ ಆಗಿ ಪರಿವರ್ತಿಸಿದ್ದಾರೆ. ಅದಕ್ಕೆ ಭೋಜನ ಬಂಡಿ ಎಂದು ಹೆಸರಿಡಲಾಗಿದ್ದು, ಅದರಲ್ಲಿ ಒಮ್ಮೆಲೇ 10 ಮಂದಿ ಕುಳಿತು ಊಟ ಮಾಡಲು ಅನುವಾಗುವಂತೆ ಆಸನ ಮತ್ತು ಟೇಬಲ್‌ ಅಳವಡಿಸಲಾಗಿದೆ. ಅಲ್ಲದೆ, ಬಸ್‌ನಲ್ಲಿ ಕುಡಿಯಲು ಮತ್ತು ಕೈತೊಳೆಯಲು ಪ್ರತ್ಯೇಕವಾಗಿ ನೀರಿನ ವ್ಯವಸ್ಥೆ ಮಾಡಲಾಗಿದೆ.

ಬಿಬಿಎಂಪಿ ನೌಕರರಿಗೆ 10 ಲಕ್ಷ ವಿಮೆ: ಏನಿದು ಗುಂಪು ವಿಮಾ ಯೋಜನೆ?

ನೂತನ ಭೋಜನ ಬಂಡಿಯನ್ನು ಗುರುವಾರ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್‌, ಮುಖ್ಯ ಸಂಚಾರ ವ್ಯವಸ್ಥಾಪಕ ಜಿ.ಟಿ.ಪ್ರಭಾಕರ ರೆಡ್ಡಿ, ತಾಂತ್ರಿಕ ಎಂಜಿನಿಯರ್‌ ಎ.ಎನ್‌.ಗಜೇಂದ್ರಕುಮಾರ್‌ ಅವರು ಪರಿಶೀಲಿಸಿದರು. ಶೀಘ್ರದಲ್ಲಿ ಭೋಜನ ಬಂಡಿ ಸೇವೆಗೆ ಲಭ್ಯವಾಗಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ರಾಮನಗರದ ರೇವಣಸಿದ್ದೇಶ್ವರ ಬೆಟ್ಟದಲ್ಲಿ ದುರಂತ - ದೇವರ ದರ್ಶನಕ್ಕೂ ಮುನ್ನವೇ ಕಂದಕ ಸೇರಿದ ಭಕ್ತ!