
ಕೊಚ್ಚಿ: ಕೊಚ್ಚಿ ವಿಮಾನ ನಿಲ್ದಾಣದಿಂದ ಹೊರಡಬೇಕಿದ್ದ ಕೊಚ್ಚಿ-ಬೆಂಗಳೂರು ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದೆ. ರಾತ್ರಿ ಬೆಂಗಳೂರಿಗೆ ಹೊರಡಬೇಕಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದೆ. ಬೆದರಿಕೆಯ ನಂತರ ವಿಮಾನದಲ್ಲಿ ತಪಾಸಣೆ ಹೆಚ್ಚಿಸಲಾಗಿದೆ. ವಿಮಾನದಲ್ಲಿ ಪ್ರಯಾಣಿಸಬೇಕಿದ್ದ ಪ್ರಯಾಣಿಕರನ್ನು ದೇಹ ತಪಾಸಣೆಗೆ ಒಳಪಡಿಸಲಾಗಿದೆ. ಜೊತೆಗೆ ವಿಮಾನದ ಒಳಗೂ ತಪಾಸಣೆ ಹೆಚ್ಚಿಸಲಾಗಿದೆ. ಟ್ವಿಟರ್ ಮೂಲಕ ವಿಮಾನ ನಿಲ್ದಾಣಕ್ಕೆ ಬೆದರಿಕೆ ಬಂದಿದೆ. ಬಳಿಕ ತಪಾಸಣೆ ನಡೆಸಲಾಗಿದೆ.
ಸಲ್ಲು ಸಹಿತ ಬುಲೆಟ್ಪ್ರೂಫ್ ಕಾರು ಹೊಂದಿರುವ 7 ಬಾಲಿವುಡ್ ತಾರೆಯರಿವರು
ದೇಶದ ಹಲವು ಕಡೆಗಳಲ್ಲಿ ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬರುತ್ತಲೇ ಇವೆ. ಈ ಪರಿಸ್ಥಿತಿಯನ್ನು ಕೇಂದ್ರ ವಿಮಾನಯಾನ ಸಚಿವಾಲಯ ಗಂಭೀರವಾಗಿ ಪರಿಗಣಿಸಿದೆ. ಅದೇ ಸಮಯದಲ್ಲಿ, ದೇಶದಲ್ಲಿ ಬಾಂಬ್ ಬೆದರಿಕೆ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಯಾನ ಕಂಪನಿಗಳ ಸಿಇಒಗಳ ಜೊತೆ ದೆಹಲಿಯಲ್ಲಿ ಸಭೆ ನಡೆಯುತ್ತಿದೆ. ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸಿಇಒಗಳನ್ನು ದೆಹಲಿಗೆ ಕರೆಸಿದೆ.
ಅವಮಾನದಿಂದ ಕರ್ನಾಟಕದ ಮೊದಲ ಟ್ರಾನ್ಸ್ಜೆಂಟರ್ ಆಟೋ ಚಾಲಕಿಯಾಗಿ ಬೆಳೆದ ಕಾವೇರಿಯ ಸ್ಫೂರ್ತಿದಾಯಕ ಕಥೆ
ವಿಸ್ತಾರಾ, ಏರ್ ಇಂಡಿಯಾ ಮತ್ತು ಇಂಡಿಗೋ ಸೇರಿದಂತೆ ವಿವಿಧ ಭಾರತೀಯ ವಿಮಾನಯಾನ ಸಂಸ್ಥೆಗಳ 30 ಕ್ಕೂ ಹೆಚ್ಚು ವಿಮಾನಗಳಿಗೆ ಶನಿವಾರ ಬಾಂಬ್ ಬೆದರಿಕೆ ಬಂದಿತ್ತು ಎಂದು ವರದಿಗಳು ತಿಳಿಸಿವೆ. ಈ ವಾರ, ಭಾರತದಲ್ಲಿ ಕನಿಷ್ಠ 70 ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಏರ್ ಇಂಡಿಯಾ, ಇಂಡಿಗೋ, ಆಕಾಶ ಏರ್, ವಿಸ್ತಾರಾ, ಸ್ಪೈಸ್ ಜೆಟ್, ಸ್ಟಾರ್ ಏರ್ ಮತ್ತು ಅಲಯನ್ಸ್ ಏರ್ ವಿಮಾನಗಳಿಗೆ ಬೆದರಿಕೆ ಬಂದಿದೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ