ಕೊಚ್ಚಿ-ಬೆಂಗಳೂರು ವಿಮಾನದಲ್ಲಿ ಬಾಂಬ್ ಬೆದರಿಕೆ; ಏರ್‌ಲೈನ್ಸ್ ಸಿಇಒಗಳ ಜೊತೆ ತುರ್ತು ಸಭೆ

By Gowthami KFirst Published Oct 19, 2024, 8:03 PM IST
Highlights

ದೇಶದ ಹಲವು ಕಡೆಗಳಲ್ಲಿ ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬರುತ್ತಲೇ ಇವೆ. ಈ ಪರಿಸ್ಥಿತಿಯನ್ನು ಕೇಂದ್ರ ವಿಮಾನಯಾನ ಸಚಿವಾಲಯ ಗಂಭೀರವಾಗಿ ಪರಿಗಣಿಸಿದೆ.

ಕೊಚ್ಚಿ: ಕೊಚ್ಚಿ ವಿಮಾನ ನಿಲ್ದಾಣದಿಂದ ಹೊರಡಬೇಕಿದ್ದ ಕೊಚ್ಚಿ-ಬೆಂಗಳೂರು ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದೆ. ರಾತ್ರಿ ಬೆಂಗಳೂರಿಗೆ ಹೊರಡಬೇಕಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದೆ. ಬೆದರಿಕೆಯ ನಂತರ ವಿಮಾನದಲ್ಲಿ ತಪಾಸಣೆ ಹೆಚ್ಚಿಸಲಾಗಿದೆ. ವಿಮಾನದಲ್ಲಿ ಪ್ರಯಾಣಿಸಬೇಕಿದ್ದ ಪ್ರಯಾಣಿಕರನ್ನು ದೇಹ ತಪಾಸಣೆಗೆ ಒಳಪಡಿಸಲಾಗಿದೆ. ಜೊತೆಗೆ ವಿಮಾನದ ಒಳಗೂ ತಪಾಸಣೆ ಹೆಚ್ಚಿಸಲಾಗಿದೆ. ಟ್ವಿಟರ್ ಮೂಲಕ ವಿಮಾನ ನಿಲ್ದಾಣಕ್ಕೆ ಬೆದರಿಕೆ ಬಂದಿದೆ. ಬಳಿಕ ತಪಾಸಣೆ ನಡೆಸಲಾಗಿದೆ.

ಸಲ್ಲು ಸಹಿತ ಬುಲೆಟ್‌ಪ್ರೂಫ್ ಕಾರು ಹೊಂದಿರುವ 7 ಬಾಲಿವುಡ್ ತಾರೆಯರಿವರು

Latest Videos

ದೇಶದ ಹಲವು ಕಡೆಗಳಲ್ಲಿ ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬರುತ್ತಲೇ ಇವೆ. ಈ ಪರಿಸ್ಥಿತಿಯನ್ನು ಕೇಂದ್ರ ವಿಮಾನಯಾನ ಸಚಿವಾಲಯ ಗಂಭೀರವಾಗಿ ಪರಿಗಣಿಸಿದೆ. ಅದೇ ಸಮಯದಲ್ಲಿ, ದೇಶದಲ್ಲಿ ಬಾಂಬ್ ಬೆದರಿಕೆ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಯಾನ ಕಂಪನಿಗಳ ಸಿಇಒಗಳ ಜೊತೆ ದೆಹಲಿಯಲ್ಲಿ ಸಭೆ ನಡೆಯುತ್ತಿದೆ. ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸಿಇಒಗಳನ್ನು ದೆಹಲಿಗೆ ಕರೆಸಿದೆ.

ಅವಮಾನದಿಂದ ಕರ್ನಾಟಕದ ಮೊದಲ ಟ್ರಾನ್ಸ್‌ಜೆಂಟರ್‌ ಆಟೋ ಚಾಲಕಿಯಾಗಿ ಬೆಳೆದ ಕಾವೇರಿಯ ಸ್ಫೂರ್ತಿದಾಯಕ ಕಥೆ

 ವಿಸ್ತಾರಾ, ಏರ್ ಇಂಡಿಯಾ ಮತ್ತು ಇಂಡಿಗೋ ಸೇರಿದಂತೆ ವಿವಿಧ ಭಾರತೀಯ ವಿಮಾನಯಾನ ಸಂಸ್ಥೆಗಳ 30 ಕ್ಕೂ ಹೆಚ್ಚು ವಿಮಾನಗಳಿಗೆ ಶನಿವಾರ ಬಾಂಬ್ ಬೆದರಿಕೆ ಬಂದಿತ್ತು ಎಂದು ವರದಿಗಳು ತಿಳಿಸಿವೆ. ಈ ವಾರ, ಭಾರತದಲ್ಲಿ ಕನಿಷ್ಠ 70 ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಏರ್ ಇಂಡಿಯಾ, ಇಂಡಿಗೋ, ಆಕಾಶ ಏರ್, ವಿಸ್ತಾರಾ, ಸ್ಪೈಸ್ ಜೆಟ್, ಸ್ಟಾರ್ ಏರ್ ಮತ್ತು ಅಲಯನ್ಸ್ ಏರ್ ವಿಮಾನಗಳಿಗೆ ಬೆದರಿಕೆ ಬಂದಿದೆ ಎಂದು ಮೂಲಗಳು ತಿಳಿಸಿವೆ.

 

click me!