ಬ್ರಿಟನ್‌ ರಿಟರ್ನ್ಡ್ ನಾಪತ್ತೆ ಆದವರ ಸಂಖ್ಯೆ 205

Kannadaprabha News   | Asianet News
Published : Jan 08, 2021, 10:40 AM IST
ಬ್ರಿಟನ್‌ ರಿಟರ್ನ್ಡ್ ನಾಪತ್ತೆ ಆದವರ ಸಂಖ್ಯೆ 205

ಸಾರಾಂಶ

ಬ್ರಿಟನ್‌ ರಿಟರ್ನ್ಡ್ ನಾಪತ್ತೆ ಆದವರ ಸಂಖ್ಯೆ 205 | ಬಿಬಿಎಂಪಿ ಮಾಹಿತಿ ಪತ್ತೆ ಹಚ್ಚಲು ಪೊಲೀಸರ ನೆರವು

ಬೆಂಗಳೂರು(ಜ.08): ಬ್ರಿಟನ್‌ನಿಂದ ಬೆಂಗಳೂರು ನಗರಕ್ಕೆ ಆಗಮಿಸಿದ ಪ್ರಯಾಣಿಕರ ಪೈಕಿ ನಾಪತ್ತೆ ಆಗಿರುವವರ ಸಂಖ್ಯೆ 205ಕ್ಕೆ ಏರಿಕೆಯಾಗಿದೆ. ಗುರುವಾರ ಹೊಸದಾಗಿ ಸೋಂಕು ಪತ್ತೆಯಾದ ವರದಿಯಾಗಿಲ್ಲ.

ಕಳೆದ ಡಿಸೆಂಬರ್‌ನಲ್ಲಿ ಬ್ರಿಟನ್‌ನಿಂದ ಬೆಂಗಳೂರು ನಗರಕ್ಕೆ ಒಟ್ಟು 2,066 ಮಂದಿ ಆಗಮಿಸಿದ್ದಾರೆ. ಈ ಪೈಕಿ 1,861 ಮಂದಿ ಪತ್ತೆಯಾಗಿದ್ದಾರೆ. ಆದರೆ, ನಾಪತ್ತೆಯಾದವರ ಸಂಖ್ಯೆ ಮಾತ್ರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕಳೆದ ಬುಧವಾರ 173 ಮಂದಿ ಮಾತ್ರ ನಾಪತ್ತೆಯಾಗಿದ್ದಾರೆ ಎಂದು ಬಿಬಿಎಂಪಿ ಮಾಹಿತಿ ನೀಡಿತ್ತು. ಆದರೆ, ಗುರುವಾರದ ವೇಳೆಗೆ ಈ ಸಂಖ್ಯೆ 205ಕ್ಕೆ ಏರಿಕೆಯಾಗಿದೆ ಎಂದು ಪಾಲಿಕೆ ಮಾಹಿತಿ ನೀಡಿದೆ. ನಾಪತ್ತೆಯಾದವರ ಮಾಹಿತಿಯನ್ನು ಪೊಲೀಸ್‌ ಇಲಾಖೆ ನೀಡಿ ಪತ್ತೆ ಮಾಡಿಕೊಡುವಂತೆ ಬಿಬಿಎಂಪಿ ಮನವಿ ಮಾಡಿಕೊಂಡಿದೆ.

ರಾಧಿಕಾಗೆ ಪೊಲೀಸ್ ಬುಲಾವ್, ವಿಚಾರಣೆಗೆ ಬರ್ತಾರಾ..? ಗೈರಾಗ್ತಾರಾ..?

ಈವರೆಗೆ ಬ್ರಿಟನ್‌ನಿಂದ ಆಗಮಿಸಿದವರಲ್ಲಿ 1,861 ಮಂದಿ ಪತ್ತೆಯಾಗಿದ್ದು, 1,755 ಮಂದಿಯನ್ನು ಯನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗಿದೆ. ಇನ್ನೂ 112 ಮಂದಿಯನ್ನು ಸೋಂಕು ಪರೀಕ್ಷೆಗೆ ಒಳಪಡಿಸಬೇಕಿದೆ. ಈವರೆಗೆ 27 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಈ ಸೋಂಕಿತರೊಂದಿಗೆ ಸಂಪರ್ಕದಲ್ಲಿದ್ದ 16 ಮಂದಿ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು 43 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಗುರುವಾರ ಯಾವುದೇ ಸೋಂಕು ದೃಢಪಟ್ಟವರದಿಯಾಗಿಲ್ಲ. ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿ ಇದ್ದ 80 ಮಂದಿ ಹಾಗೂ ಪರೋಕ್ಷ ಸಂಪರ್ಕದಲ್ಲಿ ಇದ್ದ 110 ಮಂದಿಯನ್ನು ಕ್ವಾರಂಟೈನ್‌ ಮಾಡಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

ಒಟ್ಟು 43 ಸೋಂಕು ಪ್ರಕರಣದಲ್ಲಿ ಬಿಬಿಎಂಪಿಯ ಮಹದೇವಪುರ ವಲಯದ ವ್ಯಾಪ್ತಿಯಲ್ಲಿ 19, ಬೊಮ್ಮನಹಳ್ಳಿಯಲ್ಲಿ 13, ಪೂರ್ವ ಮತ್ತು ಪಶ್ಚಿಮ ವಲಯದಲ್ಲಿ ತಲಾ 4, ದಾಸರಹಳ್ಳಿಯಲ್ಲಿ 2 ಹಾಗೂ ದಕ್ಷಿಣ ವಲಯದಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Video: ಚಲಿಸುವ BMTC ಬಸ್ಸಲ್ಲಿ ಸ್ಟೇರಿಂಗ್ ಹಿಡಿದು ಡ್ರೈವರ್‌ಗಳ ಕಿತ್ತಾಟ; ಪ್ರಯಾಣಿಕರಿಗೆ ಪ್ರಾಣ ಸಂಕಟ!
ವಿಧಾನಸಭೆಯಲ್ಲಿ 'ಉತ್ತರ ಕರ್ನಾಟಕ' ವಿವಾದ: ಶಿವಲಿಂಗೇಗೌಡರ ಮಾತುಗಳಿಗೆ ಗರಂ ಆದ ಯತ್ನಾಳ್, ಗ್ಯಾರಂಟಿ, ಗುಂಡಿ ವಿಚಾರಕ್ಕೆ ಜಟಾಪಟಿ!