ಮೈತ್ರಿ ಸರ್ಕಾರಕ್ಕೆ ಯಡಿಯೂರಪ್ಪ ಖಡಕ್ ವಾರ್ನಿಂಗ್..!

Published : Nov 18, 2018, 08:59 PM IST
ಮೈತ್ರಿ ಸರ್ಕಾರಕ್ಕೆ ಯಡಿಯೂರಪ್ಪ ಖಡಕ್ ವಾರ್ನಿಂಗ್..!

ಸಾರಾಂಶ

ಬೆಳಗಾವಿಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಉಗ್ರ ಪ್ರತಿಭಟನೆ ಹಾಗೂ ಮೈತ್ರಿ ಸರ್ಕಾರದ ನಡುವಿನ ಸಂಘರ್ಷದ ಮಧ್ಯೆ ಬಿಜೆಪಿ ಧಾವಿಸಿದೆ.

ಬೆಂಗಳೂರು, [ನ.18]: ಕಬ್ಬು ಬೆಳೆಗಾರರ ಹಾಗೂ ಮೈತ್ರಿ ಸರ್ಕಾರದ ನಡುವಿನ ತಿಕ್ಕಾಟದಲ್ಲಿ ಬಿಜೆಪಿ ಎಂಟ್ರಿಕೊಟ್ಟಿದೆ.

ಕಬ್ಬಿಗೆ ಬೆಂಬಲ ಬೆಲೆ ನೀಡಿ ಎಂದು ಪ್ರತಿಭಟನೆ ಮಾಡುತ್ತಿರುವ ರೈತರ ಮೇಲೆ ರಾಜ್ಯ ಮೈತ್ರಿ ಸರ್ಕಾರ ದೌರ್ಜನ್ಯ ಎಸಗುತ್ತಿದೆ. ಕೂಡಲೇ ಬೆಳೆಗಾರರ ಸಮಸ್ಯೆ ಪರಿಹಾರ ಮಾಡದಿದ್ದರೆ ಬಿಜೆಪಿ ರೈತರ ಪರ ಬೀದಿಗಿಳಿದು ಹೋರಾಟ ಮಾಡುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಅತ್ತ ರೈತರ ಆಕ್ರೋಶ ಕೊತ ಕೊತ ಕುದಿತ್ತಿದ್ರೆ, ಇತ್ತ ದೇವೇಗೌಡ ಕುಟುಂಬದ ಆಕ್ರೋಶ ಕಟ್ಟೆ ಒಡೆಯಿತು..!

ಇಂದು [ಭಾನುವಾರ] ಮಾಧ್ಯಮ ಪ್ರಕಟಣೆ ಹೊರಡಿಸಿದ ಯಡಿಯೂರಪ್ಪ,  ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಈ ಸರ್ಕಾರ ರೈತ ಹಾಗೂ ಉತ್ತರ ಕರ್ನಾಟಕ ವಿರೋಧಿ ಎಂಬುದು ಗೊತ್ತಿರುವ ವಿಚಾರವೇ ಆಗಿದೆ. 

ರೈತರ ವಿಚಾರದಲ್ಲಿ ಮಲತಾಯಿ ಧೋರಣೆ ಪ್ರದರ್ಶನ ಮಾಡುತ್ತಿದೆ. ಪ್ರತಿಭಟನೆ ಮಾಡುತ್ತಿರುವವರನ್ನು ನೀವು ಯಾವ ಪಕ್ಷಕ್ಕೆ ಸೇರಿದವರು ಎಂದು ಕೇಳುವುದು ಉದ್ಧಟತನ. ನ್ಯಾಯಕ್ಕಾಗಿ ಬಂದವರನ್ನು ಬಂಧಿಸಿ ಜೈಲಿಗೆ ಹಾಕುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

ಎಚ್​.ಡಿ.ಕುಮಾರಸ್ವಾಮಿ, ರೇವಣ್ಣ ಅವರು ರೈತರ ಬಗ್ಗೆ ಅವಹೇಳನಕಾರಿ ಮಾತನಾಡುತ್ತಿದ್ದಾರೆ. ಅವರಿಗೆ ನೂರಾರು ಆಸೆ ತೋರಿಸಿ ಕಣ್ಣಿಗೆ ಮಣ್ಣು ಎರಚುತ್ತಿರುವ ಸರ್ಕಾರ ಇದು. ಸಮ್ಮಿಶ್ರ ಸರ್ಕಾರ ಪಲಾಯನವಾದಿಯಾಗಿದೆ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

'ನಿಮ್ಮ ಸುರಕ್ಷತೆ ನನಗೂ ಮುಖ್ಯ..' ಮಹಿಳಾ ಪ್ರಯಾಣಿಕರ ಮನ ಗೆದ್ದ ಆಟೋ ಚಾಲಕ, ಸಂದೇಶ ವೈರಲ್ ಮಾಡಿದ ಬೆಂಗಳೂರು ಪೊಲೀಸರು!
ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!