ವಿವಾ​ದ : ಪ್ರಧಾ​ನಿ ಮೋದಿಗೆ ಪತ್ರ ಬರೆದ ಸಿಎಂ

Kannadaprabha News   | Asianet News
Published : Oct 15, 2020, 08:09 AM IST
ವಿವಾ​ದ : ಪ್ರಧಾ​ನಿ ಮೋದಿಗೆ ಪತ್ರ ಬರೆದ ಸಿಎಂ

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಅವರಿಗೆ  ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪತ್ರ ಬರೆದಿದ್ದಾರೆ. ವಿವಾದ ಒಂದರ ವಿಚಾರವಾಗಿ ಪತ್ರ ಬರೆಯಲಾಗಿದೆ. 

ನವದೆಹಲಿ (ಅ.15): ಕೃಷ್ಣಾ ಜಲವಿವಾದಕ್ಕೆ ಸಂಬಂಧಿಸಿ ಆಂಧ್ರ ಮತ್ತು ತೆಲಂಗಾಣ ರಾಜ್ಯಗಳ ಕ್ಯಾತೆಗೆ ಮಣಿಯಬಾರದು ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಆಂಧ್ರ ವಿಭಜನೆ ಬಳಿಕ ಕೃಷ್ಣಾ ನೀರಿನ ಹಂಚಿಕೆಗೆ ಸಂಬಂಧಿಸಿ ಸೃಷ್ಟಿಯಾಗಿರುವ ಗೊಂದಲವನ್ನು ಆಂಧ್ರ ಮತ್ತು ತೆಲಂಗಾಣ ರಾಜ್ಯಗಳು ಪರಸ್ಪರ ಬಗೆಹರಿಸಬೇಕು. ಕರ್ನಾಟಕ ಮತ್ತು ಮಹಾರಾಷ್ಟ್ರಗಳಿಗೆ ಈಗಾಗಲೇ ಹಂಚಿಕೆಯಾಗಿರುವ ನೀರಿನ ವಿಚಾರವನ್ನು ಮರುಪರಿಶೀಲಿಸುವ ಪ್ರಸ್ತಾಪವೇ ಇಲ್ಲಿ ಉದ್ಭವಿಸುವುದಿಲ್ಲ.

ಅಡಕೆ ರೈತರಿಗೆ ಗುಡ್ ನ್ಯೂಸ್ : ಸಿಎಂ ಯಡಿಯೂರಪ್ಪ ...

ಮಾಧ್ಯಮಗಳಲ್ಲಿ ವರದಿಯಾದಂತೆ ಮತ್ತೆ ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣವನ್ನು ಸ್ಥಾಪಿಸುವುದು ಅಪ್ರಸ್ತುತ ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಈಗಾಗಲೇ ರಾಜ್ಯದಲ್ಲಿ ಜಲ ವಿವಾದ ಸಾಕಷ್ಟು ಸದ್ದಾಗುತ್ತಿದ್ದು ಮಹದಾಯಿ ವಿಚಾರವಾಗಿಯೂ ಕೂಡ ವಿವಾದಗಳು ಭುಗಿಲೇಳುತ್ತಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವಿಧಾನಸಭೆಯಲ್ಲಿ 'ಉತ್ತರ ಕರ್ನಾಟಕ' ವಿವಾದ: ಶಿವಲಿಂಗೇಗೌಡರ ಮಾತುಗಳಿಗೆ ಗರಂ ಆದ ಯತ್ನಾಳ್, ಗ್ಯಾರಂಟಿ, ಗುಂಡಿ ವಿಚಾರಕ್ಕೆ ಜಟಾಪಟಿ!
ಕೊಡಗಿನ ಇತಿಹಾಸದಲ್ಲೇ ಮೊದಲ ಬಾರಿಗೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್! ಏನಿದು ಪ್ರಕರಣ?